ಉಡುಪಿಯಲ್ಲಿ 50ಕ್ಕೂ ಹೆಚ್ಚು ದಲಿತರಿಂದ ಬೌದ್ಧ ಧರ್ಮ ಸ್ವೀಕಾರ
ಉಡುಪಿ, ಅಕ್ಟೋಬರ್ 19: ಬಾಬಾಸಾಹೇಬ್ ಅಂಬೇಡ್ಕರ್ ಅವರ 64ನೇ ಧರ್ಮ ಚಕ್ರ ಪ್ರವರ್ತನಾ ದಿನದ ಪ್ರಯುಕ್ತ ಉಡುಪಿಯಲ್ಲಿ ಹಲವು ಮಂದಿ ದಲಿತರು ಬೌದ್ಧ ಧರ್ಮಕ್ಕೆ ಮತಾಂತರಗೊಂಡರು. 64ನೇ ಧರ್ಮ ಚಕ್ರ ಪ್ರವರ್ತನಾ ದಿನದ ಆಚರಣೆ ಕಾರ್ಯಕ್ರಮದಲ್ಲಿ ಐವತ್ತಕ್ಕೂ ಹೆಚ್ಚು ದಲಿತರಿಂದ ಭೌದ್ಧ ಧರ್ಮ ಸ್ವೀಕಾರ ನಡೆಯಿತು.
ಉಡುಪಿ ಜಿಲ್ಲಾ ಬೌದ್ಧ ಮಹಾ ಸಭಾದವರು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಜೀವನ ಬುದ್ಧ ವಿಹಾರ, ಕೊಳ್ಳೆಗಾಲ-ಮೈಸೂರಿನಿಂದ ಆಗಮಿಸಿದ್ದ ಸುಗತಪಾಲ ಭಂತೇಜಿ ಅವರು ಮತಾಂತರಗೊಂಡ ಬೌದ್ಧರಿಗೆ ಪ್ರಮಾಣವಚನ ಬೋಧಿಸಿದರು. ಮತಾಂತರಗೊಂಡ ಬೌದ್ಧರು ಈ ಸಂದರ್ಭದಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಉಡುಪಿ ಜಿಲ್ಲೆಯಲ್ಲಿ ಪಿಯುಸಿ ಮತ್ತು ಹತ್ತನೇ ತರಗತಿಯಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿದ ಸುಮಾರು 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಈ ಕಾರ್ಯಕ್ರಮದಲ್ಲಿ ಸಹಾಯಧನ ನೀಡಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ದಲಿತ ಮುಖಂಡ ಸುಂದರ ಮಾಸ್ತರ್, ಶ್ಯಾಮರಾಜ್ ಬಿರ್ತಿ, ನಾರಾಯಣ ಮಣೂರು, ಶೇಖರ್ ಹೆಜಮಾಡಿ, ಶೇಖರ ಹಾವಂಜೆ, ಶಂಭು ಮಾಸ್ಟರ್, ಪುಷ್ಪಾಕರ್, ಮಂಜುನಾಥ್ ಗಿಳಿಯಾರು, ಅಣ್ಣಪ್ಪ ನಕ್ರೆ, ಶ್ಯಾಮಸುಂದರ್ ತೆಕ್ಕಟ್ಟೆ, ಮಂಜುನಾಥ್. ವಿ, ಕೀರ್ತಿಕುಮಾರ್ ಪಡುಬಿದ್ರಿ, ವಿಠಲ ತೊಟ್ಟಂ, ರವೀಂದ್ರ ಬಂಟಕಲ್ಲು, ರಾಘವೇಂದ್ರ ಬೆಳ್ಳೆ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications