ಕೇಂದ್ರ ಬಜೆಟ್ 2021: ಜನಪರ ಹೊರತು ಜನಪ್ರಿಯ ಬಜೆಟ್ ಅಲ್ಲ
ಉಡುಪಿ, ಫೆಬ್ರವರಿ 1: ಈ ವರ್ಷದ ಕೇಂದ್ರ ಬಜೆಟ್ ಜನಪರ ಹೊರತು, ಜನಪ್ರಿಯ ಬಜೆಟ್ ಅಲ್ಲ. ಈ ಬಾರಿಯ ಬಜೆಟ್ ಅನ್ನು ಹಿಂದಿನ ಬಜೆಟ್ ನ ಹಾಗೆ ವಿಶ್ಲೇಷಣೆ ಮಾಡುವುದು ಸರಿಯಲ್ಲ. ಯಾಕೆಂದರೆ ಇದು ಕೊರೊನೋತ್ತರ ಬಜೆಟ್ ಎಂದು ರಾಜಕೀಯ ವಿಶ್ಲೇಶಕ ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಹೇಳಿದರು.
ಆರ್ಥಿಕವಾಗಿ ಸಾಕಷ್ಟು ಸೊರಗಿರುವ ಸಂದರ್ಭದಲ್ಲಿ ತೆರಿಗೆ ವಿನಾಯಿತಿ ನೀಡುವುದು ಸುಲಭವಲ್ಲ. ಮುಂದಿನ ಅಭಿವೃದ್ಧಿಗೆ ಹಣವನ್ನು ಸಂಗ್ರಹಿಸಬೇಕಾದ ಅಗತ್ಯತೆಯೂ ಇದೆ. ಉದ್ಯೋಗ ಸೃಷ್ಠಿ ಮಾಡಬೇಕಾದ ಅನಿವಾರ್ಯತೆಯೂ ಇದೆ. ಜನರಿಗೆ ಇನ್ನಷ್ಟು ಹೊರೆಯೂ ಆಗದ ರೀತಿಯಲ್ಲಿ ತೆರಿಗೆ ಹಾಕುವ ಚಾಕಚಕ್ಯತೆಯನ್ನು ಕೇಂದ್ರ ಬಜೆಟ್ ನಲ್ಲಿ ಸ್ಪಷ್ಟವಾಗಿ ಕಾಣುತ್ತದೆ ಎಂದರು.
ಕೃಷಿಯನ್ನು ಪ್ರಧಾನವಾಗಿ ಇಟ್ಟುಕೊಂಡು "ಕೃಷಿ ಸೆಸ್' ಹಾಕಿರುವುದರ ಕುರಿತು ಜನರಿಗೆ ಮನವರಿಕೆ ಮಾಡಬೇಕಾದ ಅನಿವಾರ್ಯತೆ ಸರಕಾರಕ್ಕೂ ಇದೆ. ಕೃಷಿ ಸೆಸ್ ಅನ್ನು ಕೇವಲ ಆಮದು ಆಧರಿಸಿದ ವಸ್ತುಗಳಿಗೆ ಮಾತ್ರ. ಹೊರಗಿನಿಂದದ ಬರುವ ವಸ್ತುಗಳಿಗೆ ಹಾಕುವ ಕಸ್ಟಮ್ ಡ್ಯೂಟಿಯ ಮೇಲಿನ ತೆರಿಗೆಯ ಮೇಲೆ ಹಾಕುವ ಎಕ್ಸಟ್ರಾ ತೆರಿಗೆ ಇದು. ಹಾಗಾಗಿ ಹೆಚ್ಚು ವ್ಯತ್ಯಾಸ ಬರುವುದಿಲ್ಲ. ಇದರಿಂದಾಗಿ ದೇಶಿಯ ಉತ್ಪಾದನೆಗೆ ಹೆಚ್ಚು ಸಹಕಾರಿಯಾಗಬಹುದು ಅನ್ನುವ ಅಭಿಪ್ರಾಯ ಆರ್ಥಿಕ ತಜ್ಞರದ್ದಾಗಿದೆ.

ಆದರೂ ಪೆಟ್ರೋಲಿಯಂ ವಸ್ತುಗಳ ಬೆಲೆ ಇನ್ನಷ್ಟು ಮೇಲೆ ಹೇೂಗದ ಹಾಗೆ ನೇೂಡಿಕೊಳ್ಳಬೇಕಾಗಿದೆ. ಇದರಿಂದಾಗಿ ಜನ ಸಾಮಾನ್ಯರ ಬದುಕಿನ ಮೇಲೆ ನೇರ ಪರಿಣಾಮ ಬೀರುವ ಸಾಧ್ಯತೆ ಇದೆ. ಮಾತ್ರವಲ್ಲ ಜನ ಸಾಮಾನ್ಯರೂ ಬಜೆಟ್ ನ್ನು ತಪ್ಪಾಗಿ ಅರ್ಥೈಸುವ ಸಾಧ್ಯತೆಯೂ ಇದೆ.
ಏನೇ ಆಗಲಿ ಇದೊಂದು ಸಂಕಷ್ಟ ಕಾಲದ ಬಜೆಟ್ ಆಗಿದ್ದು, ಜನರ ಸಹಕಾರ, ಸಹನೆ ತೀರಾ ಅನಿವಾರ್ಯವಾಗಿದೆ ಎಂದು ಉಡುಪಿಯ ರಾಜಕೀಯ ವಿಶ್ಲೇಷಕರಾದ ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಹೇಳಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications