ಉಡುಪಿಯಲ್ಲಿ ದಿನೇಶ್ ಅಮಿನ್ ಮಟ್ಟು ವಿರುದ್ಧ ಕೇಸ್ ಹಾಕಿದ ಚುನಾವಣಾ ಆಯೋಗ
ಉಡುಪಿ, ಮಾರ್ಚ್ 20: ಉಡುಪಿಯಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ಸರ್ವಜನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಮಾಜಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು ಹಾಗೂ ಇತರ ಐವರಿಗೆ ಸಂಕಷ್ಟ ಎದುರಾಗಿದೆ.
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ, ಭಾಷಣದಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ಆರೋಪದ ಮೇಲೆ ದಿನೇಶ್ ಅಮೀನ್ ಮಟ್ಟು ಸಹಿತ ಐವರ ಮೇಲೆ ಚುನಾವಣಾ ಆಯೋಗ ಕೇಸು ದಾಖಲು ಮಾಡಿದೆ.
ಉಡುಪಿಯಲ್ಲಿ ಮಾರ್ಚ್ 17 ರಂದು ಆಯೋಜಿಸಲಾಗಿದ್ದ ಸರ್ವಜನೋತ್ಸವ ಕಾರ್ಯಕ್ರಮದಲ್ಲಿ ದಿನೇಶ್ ಅಮೀನ್ ಮಟ್ಟು, ಮಹೇಂದ್ರ ಕುಮಾರ್, ಇಂದೂಧರ ಹೊನ್ನಾಪುರ, ಜಿ ಎನ್ ನಾಗರಾಜ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದರು .

ಚುನಾವಣಾ ಆಯೋಗದ ಫ್ಲೈಯಿಂಗ್ ಸ್ಕ್ವಾಡ್ ನಿಂದ ಈ ನಾಲ್ವರು ಮತದಾರರ ಮೇಲೆ ಪ್ರಭಾವ ಬೀರಲು ಯತ್ನಿಸಿದ್ದಾರೆ ಹಾಗೂ ಧಾರ್ಮಿಕ ಭಾವನೆಗೆ ಧಕ್ಕೆ ಆರೋಪದ ಎಂದು ಕೇಸ್ ದಾಖಲು ಮಾಡಲಾಗಿದೆ. ಕಾರ್ಯಕ್ರಮ ಆಯೋಜಿಸಿದ್ದ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಅಮೃತ್ ಶೆಣೈ ಅವರ ಮೇಲು ಮೇಲೆ ಕೇಸು ದಾಖಲಿಸಲಾಗಿದೆ.
ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ದಿನೇಶ್ ಅಮೀನ್ ಮಟ್ಟು, ಉಡುಪಿ ಕೃಷ್ಣ ಮಠದಲ್ಲೂ ರಾಜಕೀಯ ಇದೆ. ಪೇಜಾವರ ಸ್ವಾಮಿಗಳು ಹಿಂದು ಯಾರು ಅಂತ ಹೇಳಬೇಕು? ಹಿಂದೂಗಳ ಪರ ಅಂತ ಧರ್ಮ ದ್ರೋಹ ಮಾಡ್ಬೇಡಿ ಎಂದು ಆರೋಪಿಸಿದ್ದರು.
ಅದಲ್ಲದೇ ಪ್ರಕಾಶ್ ರೈ ವಿರುದ್ಧ ಮಾತನಾಡಿದ್ದ ದಿನೇಶ್ ಅಮೀನ್ ಮಟ್ಟು, ಪ್ರಕಾಶ್ ರೈ ಈಗ ಮತ ವಿಭಜನೆಗೆ ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications