ನಂಬಿಸಿ ಮೋಸ ಮಾಡಿದ ಪ್ರಿಯತಮ: ಎಂಬಿಎ ಪದವೀಧರೆ ಆತ್ಮಹತ್ಯೆಗೆ ಶರಣು
ಉಡುಪಿ, ಆಗಸ್ಟ್ 26: ಪ್ರೀತಿಯ ನಾಟಕ ಮಾಡಿ, ಬಳಿಕ ತನ್ನನ್ನು ನಿರ್ಲಕ್ಷ್ಯ ಮಾಡಿದ್ದಕ್ಕೆ ಯುವತಿಯೊಬ್ಬಳು ಅತ್ಮಹತ್ಯೆಗೆ ಶರಣಾಗಿದ್ದಾಳೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಸಾಯ್ಬರಕಟ್ಟೆಯಲ್ಲಿ ಈ ಘಟನೆ ನಡೆದಿದ್ದು, ಕಾಜ್ರಳ್ಳಿ ನಿವಾಸಿ ಅನಿಶಾ. ಜಿ. ಪೂಜಾರಿ ಆತ್ಮಹತ್ಯೆ ಮಾಡಿಕೊಂಡ ಯುವತಿಯಾಗಿದ್ದಾಳೆ.
ಎಂಬಿಎ ಪದವೀಧರೆ ಸಾಯ್ಬರಕಟ್ಟೆ ಸಮೀಪದ ಕಾಜ್ರಳ್ಳಿ ನಿವಾಸಿ. ಅನಿಶಾ ಜಿ. ಪೂಜಾರಿ ಮತ್ತು ಚೇತನ್ ಶೆಟ್ಟಿ ಕಳೆದ ಐದಾರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಪ್ರೀತಿ ಮದುವೆಯ ಹಂತಕ್ಕೆ ಬಂದಾಗ ಚೇತನ್ ಮದುವೆಗೆ ಒಪ್ಪಿರಲಿಲ್ಲ.
ಆದರೆ ಅನಿಶಾ, ಚೇತನ್ ನ ಪ್ರೇಮಪಾಶದಲ್ಲಿ ಆಗಲೇ ಮುಳುಗಿ ಹೋಗಿದ್ದಳು. ತನ್ನನ್ನು ಮದುವೆಯಾಗು ಎಂದು ಅನಿಶಾ ಪರಿಪರಿಯಾಗಿ ಬೇಡಿಕೊಂಡರೂ ಚೇತನ್ ಶೆಟ್ಟಿ ತಲೆಕೆಡಿಸಿಕೊಂಡಿರಲಿಲ್ಲ.

ಕೊನೆಗೆ ಅನಿಶಾ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದರೂ ಕ್ಯಾರೇ ಎನ್ನಲಿಲ್ಲ. ಕೊನೆಗೆ ಅನಿಶಾ ನಾಲ್ಕು ಪುಟಗಳ ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಚೇತನ್ ಗೆ ಸಂಬಂಧಪಟ್ಟ ಹಾಡಿಯಲ್ಲಿ ಯುವತಿ ನೇಣಿಗೆ ಶರಣಾಗಿದ್ದು, ಸಾವಿಗೆ ಮುನ್ನ ಪ್ರಿಯತಮ ತನ್ನನ್ನು ನಂಬಿಸಿ ಮೋಸ ಮಾಡಿರುವ ಬಗ್ಗೆ ಗೆಳತಿಗೆ ಸಂದೇಶಗಳನ್ನು ರವಾನಿಸಿದ್ದಾಳೆ. ತನ್ನ ಫೇಸ್ ಬುಕ್ ನಲ್ಲಿ ಚೇತನ್ ಒಬ್ಬ ಗರ್ಲ್ಸ್ ಹುಚ್ಚ ಎಂದು ಬರೆದು ಫೋಟೋ ಅಪ್ಲೋಡ್ ಮಾಡಿದ್ದಾಳೆ.
ಚೇತನ್ ಗೆ ಮದುವೆ ನಿಶ್ಚಯವಾಗಿದ್ದು, ಛತ್ರ ಬುಕ್ ಮಾಡಲು ಮುಂದಾಗಿದ್ದನು ಎಂಬ ಅಂಶ ಈಗ ಬಯಲಾಗಿದೆ. ಸದ್ಯ ಚೇತನ್ ತಲೆಮರೆಸಿಕೊಂಡಿದ್ದಾನೆ. ಬ್ರಹ್ಮಾವರ ಪೊಲೀಸರು ಆರಂಭದಲ್ಲಿ ಅಸಹಜ ಸಾವು ಪ್ರಕರಣ ದಾಖಲು ಮಾಡಿದ್ದರು. ಆದರೆ ಬಿಲ್ಲವ ಸಂಘಟನೆ ಮಧ್ಯ ಪ್ರವೇಶದ ನಂತರ ಎಫ್ಐಆರ್ ದಾಖಲು ಮಾಡಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications