ಪೇಜಾವರ ಸ್ವಾಮೀಜಿ ಆಶೀರ್ವಾದ ಪಡೆದ ಸಿಎಂ ಕುಮಾರಸ್ವಾಮಿ
ಉಡುಪಿ, ಏಪ್ರಿಲ್ 07:ಉಡುಪಿ ಶ್ರೀ ಕೃಷ್ಣ ಮಠಕ್ಕೆ ಇಂದು ಭಾನುವಾರ ಸಿಎಂ ಕುಮಾರಸ್ವಾಮಿ ಭೇಟಿ ನೀಡಿ ಪ್ರಾರ್ಥಿಸಿದರು. ಈ ವೇಳೆ ಸಿಎಂ ಕನಕನ ಕಿಂಡಿಯ ಮೂಲಕ ಶ್ರೀ ಕೃಷ್ಣನ ದರ್ಶನ ಮಾಡಿದರು.
ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರನ್ನು ಭೇಟಿಯಾದ ಸಿಎಂ, ನಂತರ ಪೇಜಾವರ ಮಠಕ್ಕೆ ತೆರಳಿ ವಿಶ್ವೇಶತೀರ್ಥ ಶ್ರೀಪಾದರು, ವಿಶ್ವಪ್ರಸನ್ನ ಸ್ವಾಮೀಜಿಯವರನ್ನು ಭೇಟಿಯಾದರು.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಈ ಬಾರಿ ಚುನಾವಣೆಗೆ ಆಶೀರ್ವಾದ ಮಾಡಿ ಎಂದು ಪೇಜಾವರ ಶ್ರೀಗಳಲ್ಲಿ ಸಿಎಂ ನಿವೇದನೆ ಮಾಡಿಕೊಂಡರು. ಈ ಸಂದರ್ಭದಲ್ಲಿ ಪೇಜಾವರ ಮಠದ ಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಿ, ನೀಲಾವರ ಗೋಶಾಲೆಯ ಬಗ್ಗೆ ಸಿಎಂ ಮಾಹಿತಿ ಪಡೆದರು.
ಪೇಜಾವರಶ್ರೀಗಳು ಮೂರು ಕಡೆ ಗೋ ಶಾಲೆ ನಿರ್ಮಾಣಕ್ಕೆ ಕುಮಾರಸ್ವಾಮಿ ಅವರ ಬಳಿ ಒತ್ತಾಯಿಸಿದಾಗ ಈಗ ನೀತಿಸಂಹಿತೆ ಜಾರಿಯಲ್ಲಿದೆ.ಚುನಾವಣೆ ನಂತರ ಈ ಬಗ್ಗೆ ತೀರ್ಮಾನಿಸಲಾಗುವುದು ಎಂದು ಭರವಸೆ ನೀಡಿದರು.
Comments
English summary
Chief Minister Kumaraswamy visited Sri Krishna Matha today.Then he discussed with Pejavara Shree.
Story first published: Sunday, April 7, 2019, 17:58 [IST]