ಕರಾವಳಿಯಲ್ಲಿ ಸಂಭ್ರಮದ ತೆನೆ ಹಬ್ಬ, ಕಬ್ಬು ತಿಂದು ಖುಷಿಪಟ್ಟ ಕ್ರೈಸ್ತರು
ಉಡುಪಿ, ಸೆಪ್ಟೆಂಬರ್.08: ಕರಾವಳಿಯಾದ್ಯಂತ ಇಂದು ಶನಿವಾರ ಕ್ರೈಸ್ತರು ಭಕ್ತಿ, ಶ್ರದ್ಧೆಯಿಂದ ತೆನೆ ಹಬ್ಬ ಆಚರಿಸಿದರು. ಮಾತೆ ಮೇರಿ ಹುಟ್ಟುಹಬ್ಬ ದಿನವನ್ನು ಈ ದಿನ ಕ್ರೈಸ್ತರು ತೆನೆ ಹಬ್ಬವನ್ನಾಗಿ ಆಚರಿಸುವುದು ಪದ್ಧತಿ.
ಉಡುಪಿಯ ಮದರ್ ಆಫ್ ಸಾರೋಸ್ ಚರ್ಚ್ ಗೆ ಬೆಳಗಿನಿಂದಲೇ ಆಗಮಿಸಿದ ಭಕ್ತರು ವಿಶೇಷ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಬಲಿ ಪೂಜೆ ನಡೆಸಿದರು. ನಂತರ ಶುಭಾಷಯಗಳನ್ನು ಹಂಚಿಕೊಂಡರು.
ಮುಖ್ಯವಾಗಿ ಭತ್ತದ ತೆನೆ, ಧವಸ ಧಾನ್ಯಗಳನ್ನು ಮೇರಿಯಮ್ಮನಿಗೆ ಸಮರ್ಪಿಸುವ ಮೂಲಕ ಹೊಸ ಫಲಗಳನ್ನು ಸ್ವಾಗತಿಸುವುದೂ ಈ ದಿನದ ಮಹತ್ವ. ತೆನೆ ಹಬ್ಬದಂದು ಹೂವಿಗೆ ವಿಶೇಷ ಮಹತ್ವ. ಈ ಹಿನ್ನೆಲೆಯಲ್ಲಿ ಕ್ರೈಸ್ತ ಬಾಂಧವರು ಇಂದು ಬೆಳಗ್ಗೆಯೇ ಹೂಗಳನ್ನು ಹಿಡಿದುಕೊಂಡು ಚರ್ಚ್ ಗಳಿಗೆ ಬಂದರು.

ಮಕ್ಕಳು, ಮಹಿಳೆಯರು ಮತ್ತು ವೃದ್ಧರು ಹೂಗಳನ್ನು ತಂದು ಬಲಿಪೀಠಕ್ಕೆ ಅರ್ಪಿಸಿ ಕೃತಾರ್ಥರಾದರು. ದೂರದೂರುಗಳಲ್ಲಿರುವ ಬಂಧುಗಳು ಈ ದಿನ ಒಂದೇ ಕಡೆ ಸೇರುವುದು ವಾಡಿಕೆ. ತೆನೆ ಹಬ್ಬದಂದು ಬಂಧುಗಳು ಯಾವುದೇ ಊರಿನಲ್ಲಿರಲಿ, ಒಂದೆಡೆ ಸೇರಿ ಹೊಸ ಫಲಗಳ ಅಡುಗೆ ಸೇವಿಸಿ ಖುಷಿಪಡುತ್ತಾರೆ.

ಈ ವರ್ಷ ಹೊಸದಾಗಿ ಬೆಳೆದ ಧವಸ ಧಾನ್ಯ, ತರಕಾರಿಗಳನ್ನು ಎಲ್ಲೇ ಇದ್ದರೂ ತಂದು ಅದನ್ನು ಸೇವಿಸುವ ಮೂಲಕ ಸಸ್ಯಾಹಾರ ವ್ರತ ಕೈಗೊಳ್ಳುತ್ತಾರೆ. ಕ್ರೈಸ್ತರಿಗೆ ಕಬ್ಬು ಈ ದಿನದ ಸಿಹಿ ತಿನಿಸು. ಬಂದವರಿಗೆ ಚರ್ಚ್ ಗಳಲ್ಲಿ ಹೇರಳವಾಗಿ ಕಬ್ಬು ಹಂಚುವುದು ದಿನದ ವಿಶೇಷ.

ಕ್ರೈಸ್ತರ ಪ್ರಾಬಲ್ಯ ಹೆಚ್ಚಿರುವ ಉಡುಪಿ ನಗರ, ಕಲ್ಯಾಣಪುರ, ಹೂಡೆ, ಸಂತೆಕಟ್ಟೆ , ಶಂಕರಪುರ, ಕಟಪಾಡಿ, ಉದ್ಯಾವರ ಮುಂತಾದೆಡೆಗಳಲ್ಲಿ ಮೇರಿ ಹುಟ್ಟುಹಬ್ಬದ ಸಂಭ್ರಮ ಜೋರಾಗಿತ್ತು.
-
Holiday Plan: ಉದ್ಯೋಗಿಗಳಿಗೆ ರಜೆ ಹಬ್ಬ: ಪ್ಲ್ಯಾನ್ ಮಾಡಿದ್ರೆ ಮಾರ್ಚ್ನಲ್ಲಿ ಎರಡು ಬಾರಿ ಪಡೆಯಬಹುದು ಸತತ 5 ದಿನಗಳ ಹಾಲಿಡೇ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ












Click it and Unblock the Notifications