ಪಡುಬಿದ್ರಿ ಬಾಲ ಗಣಪತಿ ಶೋಭಾಯಾತ್ರೆಯಲ್ಲಿ ಇತ್ತಂಡಗಳ ಹೊಡೆದಾಟ; ಒಬ್ಬನಿಗೆ ಗಂಭೀರ ಗಾಯ
ಉಡುಪಿ, ಅಕ್ಟೋಬರ್ 10: ಉಡುಪಿ ಜಿಲ್ಲೆಯ ಪಡುಬಿದ್ರಿ ಪ್ರಸಿದ್ಧ ಬಾಲ ಗಣಪತಿ ಶೋಭಾಯಾತ್ರೆಯ ಸಂದರ್ಭ ಹಿಂದೂ ಸಂಘಟನೆಗಳ ನಡುವೆ ನಡೆದ ಹೊಡೆದಾಟ ನಡೆದಿದೆ.
ದೈವಪಾತ್ರಿಗೆ ಅಣಕ: ಕ್ಷಮೆ ಯಾಚಿಸಿದ ವೇಷಧಾರಿ
ಈ ಹೊಡೆದಾಟದಲ್ಲಿ ಕೃಷ್ಣ ಎಂಬಾತನ ತಲೆಗೆ ಕಲ್ಲೇಟು ತಗುಲಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಣೇಶ ಚತುರ್ಥಿಗೆ ಪಡುಬಿದ್ರೆಯಲ್ಲಿ ವರ್ಷಂಪ್ರತಿ ಗಣಪತಿ ಇರಿಸಲಾಗುತ್ತದೆ. ಒಂದೂವರೆ ತಿಂಗಳು ಈ ಗಣಪತಿಯನ್ನು ಕೂರಿಸಲಾಗುತ್ತದೆ. ಒಂದೂವರೆ ತಿಂಗಳುಗಳ ಕಾಲ ವಿಘ್ನ ನಿವಾರಕನಿಗೆ ಪೂಜೆ ಸಲ್ಲಿಸಿ ನಂತರ ವೈಭವದ ಶೋಭಾಯಾತ್ರೆ ಮೂಲಕ ಗಣೇಶ ವಿಸರ್ಜನೆಯನ್ನು ಮಾಡಲಾಗುತ್ತದೆ. ಈ ಶೋಭಾಯಾತ್ರೆ ಸಂದರ್ಭ ನಾಸಿಕ್ ಬ್ಯಾಂಡ್ ಮತ್ತು ಚೆಂಡೆಯ ತಂಡಗಳ ನಡುವೆ ತಿಕ್ಕಾಟ ನಡೆದಿದೆ.
ನಾಸಿಕ್ ಬ್ಯಾಂಡ್ ತಂಡದ ಅತಿಯಾದ ಸದ್ದು, ಜೊತೆಗೆ ಯುವಕರ ಕುಣಿತ ಗದ್ದಲ ಎಬ್ಬಿಸಿತ್ತು. ಈ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ದೊಡ್ಡ ಜಗಳವಾಗಿದೆ. ಸಾವಿರಾರು ಜನ ಜಮಾಯಿಸಿದ್ದ ಮೆರವಣಿಗೆಯ ಗಲಾಟೆಗೆ ಪೊಲೀಸರು ಮಧ್ಯಪ್ರವೇಶ ಮಾಡಿದರೂ ಪ್ರಯೋಜನವಾಗಿರಲಿಲ್ಲ. ಈ ಸಂದರ್ಭ ನಡೆದ ಘರ್ಷಣೆಯಲ್ಲಿ ಕೃಷ್ಣ ಎಂಬಾತನ ತಲೆಗೆ ಕಲ್ಲೇಟು ಬಿದ್ದಿದೆ. ಈ ಸಂಬಂಧ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಲಗಣಪತಿ ಶೋಭಾಯಾತ್ರೆಯಲ್ಲಿ ಸಹಸ್ರಾರು ಮಂದಿ ಭಕ್ತರು ಭಾಗವಹಿಸಿದ್ದರು. ಹೆದ್ದಾರಿ ಮೆರವಣಿಗೆ ಸಂದರ್ಭ ಸಂಪೂರ್ಣ ಸಂಚಾರ ಅಸ್ತವ್ಯಸ್ತ ಆಗಿತ್ತು. ಓರ್ವ ಎಸ್ ಐ ನಾಲ್ವರು ಕಾನ್ ಸ್ಟೇಬಲ್ ಗಳು ಶೋಭಾಯಾತ್ರೆಗೆ ನೇಮಿಸಲಾಗಿತ್ತು.