ಮೂಢನಂಬಿಕೆ ನಿಷೇಧಿಸುವ ಧೈರ್ಯ ಸಿಎಂಗಿಲ್ಲ: ಪೇಜಾವರ ಶ್ರೀ

ಮೂಢನಂಬಿಕೆಗಳನ್ನು ನಿಷೇಧಿಸಲು ಮುಖ್ಯಮಂತ್ರಿಗಳಿಗೆ ಧೈರ್ಯ ಸಾಲದು. ಆ ಧೈರ್ಯ ನಮ್ಮ ಬಳಿ ಇದೆ. ಅವರು ನಮ್ಮ ಬಳಿ ಬಂದರೆ ಅವರಿಗೆ ಈ ಬಗ್ಗೆ ಮಾರ್ಗದರ್ಶನ ನೀಡುತ್ತೇವೆ ಎಂದು ಪೇಜಾವರ ಮಠದ ಶ್ರೀವಿಶ್ವೇಶತೀರ್ಥ ಶ್ರೀಗಳು ತಿಳಿಸಿದರು

ಉಡುಪಿ, ಡಿಸೆಂಬರ್ 23: ಮೂಢನಂಬಿಕೆಗಳನ್ನು ನಿಷೇಧಿಸಲು ಮುಖ್ಯಮಂತ್ರಿಗಳಿಗೆ ಧೈರ್ಯ ಸಾಲದು. ಆ ಧೈರ್ಯ ನಮ್ಮ ಬಳಿ ಇದೆ ಎಂದು ಉಡುಪಿಯಲ್ಲಿ ಸವಿತಾ ಸಮಾಜದ ಪೀಠಕ್ಕೆ ಧರ್ಮಾಧಿಕಾರಿಯ ನೇಮಕ ಮಾಡಿದ ಪೇಜಾವರ ಶ್ರೀಗಳು ಗುಡುಗಿದ್ದಾರೆ.

ಉಡುಪಿಯಲ್ಲಿ ಸವಿತಾ ಸಮಾಜದ ಪೀಠಕ್ಕೆ ಧರ್ಮಾಧಿಕಾರಿಯ ನೇಮಕ ಮಾಡಿದ ಬಳಿಕ ಮಾತನಾಡಿದ ಶ್ರೀಗಳು ಮೂಢನಂಬಿಕೆ ಕಾಯ್ದೆಗೆ ರಾಜ್ಯದ ಪಟ್ಟಭದ್ರರು ವಿರೋಧಿಸುತ್ತಿರುವ ಬಗ್ಗೆ ಸಿಎಂ ನೀಡಿದ ಹೇಳಿಕೆ ಕುರಿತು ಪ್ರತಿಕ್ರಿಯಿಸಿದರು. ಮೂಢನಂಬಿಕೆಗಳನ್ನು ಯಾವ ರೀತಿ ನಿಷೇಧ ಮಾಡಬಹುದು ಎಂದು ಹೇಳುವ ಧೈರ್ಯ ನನಗಿದೆ. ಸರಕಾರ ನನ್ನಲ್ಲಿಗೆ ಬರಲಿ. ಅವರಿಗೆ ನಾನು ಸಲಹೆ ನೀಡುತ್ತೇನೆ. ನಾನು ಅವರಿಗೆ ಬೆಂಬಲ ಕೊಟ್ಟು ಯಾರದೇ ವಿರೋಧ ಬಾರದಂತೆ ನೋಡಿಕೊಳ್ಳುತ್ತೇನೆ ಎಂದರು.[ಮಡೆಸ್ನಾನ ನಿಷೇಧಿಸಿದರೆ ಅಭ್ಯಂತರವಿಲ್ಲ : ಪೇಜಾವರಶ್ರೀ]

CM did not have the courage to ban superstition: Pejawar sri

ಮೂಢನಂಬಿಕೆಗಳನ್ನು ನಿಷೇಧಿಸಲು ಮುಖ್ಯಮಂತ್ರಿಗಳಿಗೆ ಧೈರ್ಯ ಸಾಲದು. ಆ ಧೈರ್ಯ ನಮ್ಮ ಬಳಿ ಇದೆ. ಅವರು ನಮ್ಮ ಬಳಿ ಬಂದರೆ ಅವರಿಗೆ ಈ ಬಗ್ಗೆ ಮಾರ್ಗದರ್ಶನ ನೀಡುತ್ತೇವೆ ಎಂದು ಪೇಜಾವರ ಮಠದ ಶ್ರೀವಿಶ್ವೇಶತೀರ್ಥ ಶ್ರೀಗಳು ತಿಳಿಸಿದರು.[ಉಡುಪಿ ಕೃಷ್ಣ ಮಠದಲ್ಲಿ 30 ಸಾವಿರ ಮಂದಿಗೆ ಅನ್ನ ಸಂತರ್ಪಣೆ]

ನನ್ನೊಂದಿಗೆ ಸಮಾಲೋಚನೆ ನಡೆಸಲು ಅವರು ಸಿದ್ಧರಿಲ್ಲ. ನಾನು ಮೂಢನಂಬಿಕೆಗೆ ಬೆಂಬಲ ನೀಡುವವನು ಎಂದು ಕೆಲವರು ಭಾವಿಸಿರುವುದೇ ಇದಕ್ಕೆ ಕಾರಣ. ನನ್ನ ಬಗ್ಗೆ ರಾಜಕಾರಣಿಗಳಿಗೆ ತಪ್ಪುಕಲ್ಪನೆಗಳಿವೆ. ಮಡೆಸ್ನಾನದ ವಿಷಯದಲ್ಲೂ ನಾನು ಅದನ್ನು ಬೆಂಬಲಸಿದ್ದೇನೆ ಎಂದು ಹೇಳುತ್ತಾರೆ. ನಿಜವಾಗಿ ಮಡೆಸ್ನಾನ ವನ್ನು ನಾನು ವಿರೋಧಿಸಿದ್ದೇನೆ ಎಂದರು. ಸಮಾಲೋಚನೆಗೆ ನಮ್ಮ ಬಳಿ ಬರಲಿ ಎಂದು ಸಲಹೆ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+