ಉಡುಪಿಯಲ್ಲೂ ಮಾಧ್ಯಮಗಳ ಮೇಲೆ ಮುನಿಸು ತೋರಿದ ಕುಮಾರಸ್ವಾಮಿ
ಉಡುಪಿ, ಏಪ್ರಿಲ್ 29:ಎಡೆಬಿಡದೆ ಚುನಾವಣಾ ಪ್ರಚಾರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಪ್ರಕೃತಿ ಚಿಕಿತ್ಸೆ ಪಡೆಯಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಹಾಗೂ ದೇವೇಗೌಡ ಉಡುಪಿಯ ಹೆಲ್ತ್ ರೆಸಾರ್ಟ್ ಗೆ ಕಳೆದ ರಾತ್ರಿ ಆಗಮಿಸಿದರು.
ಈ ಮೊದಲು ಮಾಜಿ ಶಾಸಕ ಗೋಪಾಲ ಪೂಜಾರಿ ಮಗಳ ಮದುವೆಗೆ ಆಗಮಿಸಿದ್ದರು. ಸಿಎಂ ಉಡುಪಿ ಸಮೀಪದ ಕಾಪುವಿನ ಮೂಳೂರಿನಲ್ಲಿರುವ ಸಾಯಿ ರಾಧಾ ರೆಸಾರ್ಟ್ ನಲ್ಲೇ ನಾಲ್ಕೈದು ದಿನ ತಂಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಕಳೆದ ರಾತ್ರಿ (ಏ.28) ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ಕಾಪುವಿನ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ.

ಕಳೆದ ಭಾನುವಾರ ಸಿಎಂ ಕುಮಾರಸ್ವಾಮಿ ಚುನಾವಣಾ ಪ್ರಚಾರ ಮುಗಿಸಿಕೊಂಡು ಎರಡು ದಿನ ಇದೇ ರೆಸಾರ್ಟ್ ನಲ್ಲಿ ತಂಗಿದ್ದರು. ಪ್ರಾಥಮಿಕ ಚಿಕಿತ್ಸೆ ಪೂರೈಸಿ ವಾರದ ನಂತರ ಬರುವುದಾಗಿ ತಿಳಿಸಿದ್ದರು. ಅಂತೆಯೇ ತಂದೆ ದೇವೇಗೌಡ ಜೊತೆಗೆ ಮತ್ತೆ ಕುಮಾರಸ್ವಾಮಿ ಪುನರಾಗಮಿಸಿದ್ದಾರೆ. ಈ ಹೆಲ್ತ್ ರಿಸಾರ್ಟ್ ನಲ್ಲಿ ಪಂಚ ಕರ್ಮ ಚಿಕಿತ್ಸೆ ಸೇರಿದಂತೆ ವಿವಿಧ ಆಯುರ್ವೇದ ಚಿಕಿತ್ಸೆಗೆ ಇವರು ಒಳಪಡಲಿದ್ದಾರೆ.
ಮಾಧ್ಯಮಗಳ ಮೇಲೆ ತಮ್ಮ ಮುನಿಸು ಮುಂದುವರೆಸಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಕಾಪು ಹೆಲ್ತೆ ರೆಸಾರ್ಟ್ ಭೇಟಿಯನ್ನು ಸಂಪೂರ್ಣ ಖಾಸಗಿಯಾಗಿಯೇ ಕಳೆಯಲು ಬಯಸಿದ್ದಾರೆ. ಹಾಗಾಗಿ ರೆಸಾರ್ಟ್ ನ ಅಸುಪಾಸಿಗೂ ಯಾರೂ ಬರದಂತೆ ಪೊಲೀಸರಿಗೆ ಸೂಚಿಸಲಾಗಿದೆ.

ಭಾನುವಾರ ರಾತ್ರಿ ಚಿತ್ರೀಕರಣಕ್ಕೆ ತೆರಳಿದ್ದ ಮಾಧ್ಯಮದವರಿಗೆ ಪೊಲೀಸರು ಅಡ್ಡಿಪಡಿಸಿದರು. ಸಾರ್ವಜನಿಕ ರಸ್ತೆಯಲ್ಲೂ ನಿಲ್ಲಲು ಅವಕಾಶ ನಿರಾಕರಿಸಿದರು. ಈ ವೇಳೆ ಪೊಲೀಸ್ ಅಧಿಕಾರಿಗಳು ಹಾಗು ಮಾದ್ಯಮ ಪ್ರತಿನಿಧಿಗೊಂದಿಗೆ ಮಾತಿನ ಚಕಮಕಿಯೂ ನಡೆಯಿತು.
-
ನಿಮ್ಮ ಮನೆಯ ವಾಸ್ತು ಸರಿಯಿದೆಯೇ? ಶಾಂತಿ ಮತ್ತು ಪ್ರಗತಿಗಾಗಿ ಇಲ್ಲಿವೆ ಪರಿಹಾರಗಳು -
Vastu Alert: ಹಳೆಯ ಬಾವಿ ಮೇಲೆ ಮನೆ ಕಟ್ಟಿದ್ರೆ ಏನಾಗುತ್ತದೆ? ಇಲ್ಲಿದೆ ವಾಸ್ತು ಸತ್ಯಗಳು -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ












Click it and Unblock the Notifications