ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕುತೂಹಲ ಮೂಡಿಸಿದ ಸಿಎಂ ಸೌಕೂರು ದುರ್ಗಾಪರಮೇಶ್ವರಿ ದೇವಸ್ಥಾನ ಭೇಟಿ

|
Google Oneindia Kannada News

ಉಡುಪಿ, ಏಪ್ರಿಲ್ 05:ಚುನಾವಣಾ ಪ್ರಚಾರದ ನಡುವೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸೌಕೂರು ದೇವಸ್ಥಾನಕ್ಕೆ ಏಕಾಏಕಿ ಭೇಟಿ ನೀಡಿದರು.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಖಾಸಗಿ ಭೇಟಿ ನಿಮಿತ್ತ ಸೌಕೂರಿನಲ್ಲಿರುವ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಆಗಮಿಸಿದ ಕುಮಾರಸ್ವಾಮಿ, ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಕೆಲವೇ ಹೊತ್ತು ದೇವಸ್ಥಾನದಲ್ಲಿದ್ದು, ಮತ್ತೆ ಚುನಾವಣಾ ಪ್ರಚಾರ ನಿಮಿತ್ತ ಕೊಪ್ಪಕ್ಕೆ ತೆರಳಿದರು. ಸಿಎಂ ಜೊತೆ ವಿಧಾನಪರಿಷತ್ ಸದಸ್ಯ ಬೋಜೇಗೌಡ ಮತ್ತು ಸ್ಥಳೀಯ ಜೆಡಿಎಸ್ ಮುಖಂಡರು ಉಪಸ್ಥಿತರಿದ್ದರು.

 ಪ್ರಮೋದ್ ಮಧ್ವರಾಜ್ ಪರ ಪ್ರಚಾರಕ್ಕೆ ಸಿಎಂ ಎಂಟ್ರಿ, ಕುಂದಾಪುರದಲ್ಲಿ ಮತಯಾಚನೆ ಪ್ರಮೋದ್ ಮಧ್ವರಾಜ್ ಪರ ಪ್ರಚಾರಕ್ಕೆ ಸಿಎಂ ಎಂಟ್ರಿ, ಕುಂದಾಪುರದಲ್ಲಿ ಮತಯಾಚನೆ

ಗುರುವಾರ (ಏ.4) ಸಂಜೆ ಕುಂದಾಪುರಕ್ಕೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ನಗರದ ನೆಹರೂ ಮೈದಾನದಲ್ಲಿ ಆಯೋಜಿಸಲಾಗಿದ್ದ ಮೀನುಗಾರ ಮಹಿಳೆಯರ ಸಮಾವೇಶದಲ್ಲಿ ಭಾಗವಹಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

CM Kumarswamy visited Saukuru temple

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಅವರ ಪರ ಮತ ಯಾಚಿಸಿದರು. ಆದರೆ ಕುಂದಾಪುರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸೌಕೂರಿನ ದುರ್ಗಾಪರಮೇಶ್ವರಿ ದೇವಾಲಯಕ್ಕೆ ತೆರಳದೇ ಉತ್ತರ ಕನ್ನಡ ಜಿಲ್ಲೆಗೆ ಪ್ರಯಾಣ ಬೆಳೆಸಿದರು.

 ಬಿಜೆಪಿ,ಕಾಂಗ್ರೆಸ್ ವಾಕ್ಸಮರಕ್ಕೆ ಸಾಕ್ಷಿಯಾಗುತ್ತಿದೆ ಉಡುಪಿ ಚಿಕ್ಕಮಗಳೂರು ಕ್ಷೇತ್ರ ಬಿಜೆಪಿ,ಕಾಂಗ್ರೆಸ್ ವಾಕ್ಸಮರಕ್ಕೆ ಸಾಕ್ಷಿಯಾಗುತ್ತಿದೆ ಉಡುಪಿ ಚಿಕ್ಕಮಗಳೂರು ಕ್ಷೇತ್ರ

ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಿ ಜೆಡಿಎಸ್ ಅಭ್ಯರ್ಥಿ ಅಸ್ನೋಟಿಕರ್ ಪರ ಕುಮಾರಸ್ವಾಮಿ ಚುನಾವಣಾ ಪ್ರಚಾರ ನಡೆಸಿದರು. ಈ ನಡುವೆ ಕೊಪ್ಪಕ್ಕೆ ತೆರಳಬೇಕಿದ್ದ ಮುಖ್ಯಮಂತ್ರಿ ಕುಮಾರ ಸ್ವಾಮಿ ಏಕಾಏಕಿ ಸೌಕೂರಿನಲ್ಲಿರುವ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಆಗಮಿಸಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿರುವುದು ಎಲ್ಲರಿಗೂ ಕುತೂಹಲ ಮೂಡಿಸಿದೆ.

English summary
CM Kumaraswamy visited Saukuru Durga Parameshwari temple and offered special pooja to Goddess Durga.Here's a brief report on this.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X