ತುಳುನಾಡಿನ ಧಾರ್ಮಿಕ ಆಚರಣೆಗಳಿಗೆ ಅನುಮತಿ ಕೋರಿದ ಶಾಸಕರ ಮನವಿಗೆ ಸಿಎಂ ಒಪ್ಪಿಗೆ
ಉಡುಪಿ, ಆಗಸ್ಟ್ 28: ತುಳುನಾಡಿನ ಧಾರ್ಮಿಕ ಆಚರಣೆಗಳಿಗೆ ಅನುಮತಿ ನೀಡುವಂತೆ ಕೋರಿ ಶಾಸಕ ರಘುಪತಿ ಭಟ್ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದು, ಮನವಿಗೆ ಸ್ಪಂದಿಸಿರುವ ಬಿ.ಎಸ್. ಯಡಿಯೂರಪ್ಪನವರು ಅನುಮತಿ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಆದೇಶಿಸಿದ್ದಾರೆ.
Recommended Video
ಈ ಬಗ್ಗೆ ಟ್ವೀಟ್ ಮಾಡಿರುವ ರಘುಪತಿ ಭಟ್, ''ದೈವಾರಾಧನೆ, ನೇಮೋತ್ಸವ, ಮಾರಿ ಪೂಜೆ ಮೊದಲಾದ ತುಳುನಾಡಿನ ಧಾರ್ಮಿಕ ಆಚರಣೆಗಳನ್ನು ನಡೆಸಲು ನಾನು ಈ ಹಿಂದೆಯೇ ಸಿಎಂಗೆ ಮನವಿ ಸಲ್ಲಿಸಿದ್ದೆ. ಅದರಂತೆ ಮುಖ್ಯಮಂತ್ರಿಯವರು ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಆದೇಶಿಸಿದ್ದು, ತಕ್ಷಣ ಜಾರಿಗೆ ತರಲು ನಾನು ಸರ್ಕಾರದ ಮುಖ್ಯ ಕಾರ್ಯದರ್ಶಿಯವರನ್ನು ಆಗ್ರಹಿಸುತ್ತೇನೆ'' ಎಂದು ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ತುಳುನಾಡಿನ ಜನರು ತಮ್ಮದೇ ಸಾಮಾಜಿಕ ಹಾಗೂ ಧಾರ್ಮಿಕ ಆಚರಣೆ ಮತ್ತು ಸಂಸ್ಕೃತಿಯನ್ನು ರೂಡಿಸಿಕೊಂಡು ಬಂದಿದ್ದು ಲಾಕ್ಡೌನ್ ಕಾರಣದಿಂದ ಈ ಆಚರಣೆಗೆ ಧಕ್ಕೆ ಉಂಟಾಗಿದೆ. ಧಾರ್ಮಿಕ ಸೇವೆಗಳಿಗೆ ನಿಷೇಧ ಹೇರಿದ್ದರಿಂದ ಧಾರ್ಮಿಕ ಭಾವನೆಗಳಿಗೆ ಘಾಸಿ ಉಂಟಾಗಿದ್ದಲ್ಲದೇ ನಾಗಸ್ವರ ವಾದಕರು, ಮಡಿವಾಳ, ದರ್ಶನ ಪಾತ್ರಿ, ಮಧ್ಯಸ್ಥರು, ಗರೋಡಿ ವರ್ಗದವವರು, ನಲಿಕೆ ವರ್ಗ, ಪಂಬದ ವರ್ಗದವರು ಸೇರಿ ಸುಮಾರು 600 ಜನರ ಆರ್ಥಿಕ ಪರಿಸ್ಥಿತಿ ಚಿಂತಾಜನಕವಾಗಿದೆ. ಈ ಹಿನ್ನೆಲೆ ಈ ಆಚರಣೆಗಳಿಗೆ ಅವಕಾಶ ನೀಡಬೇಕು ಹಾಗೂ ಆರ್ಥಿಕ ಪರಿಸ್ಥಿತಿ ಸುಧಾರಿಸಲು 10 ಸಾವಿರ ಅನುದಾನ ಮಂಜೂರು ಮಾಡಬೇಕು ಎಂದು ಶಾಸಕ ರಘುಪತಿ ಭಟ್ ಮನವಿ ಸಲ್ಲಿಸಿದ್ದರು.












Click it and Unblock the Notifications