ತೆರೆಮರೆಯಲ್ಲಿ ನಿಂತು ಸಮಾಜ ಸೇವೆ ಮಾಡುತ್ತಿರುವ ಉಡುಪಿಯ ಯುವಕ
ಉಡುಪಿ, ನ 15: ಕರ್ನಾಟಕದಿಂದ ಅದರಲ್ಲೂ ತುಳುನಾಡಿನ ಅನೇಕರು ಉದ್ಯೋಗ ಶಿಕ್ಷಣ ವ್ಯಾಪಾರ ಹೀಗೆ ಅನೇಕ ಉದ್ದೇಶಗಳಿಗಾಗಿ ಗಲ್ಫ್ ರಾಷ್ಟ್ರಗಳೊಂದಿಗೆ ಸಂಬಂಧವನ್ನು ಹೊಂದಿದ್ದಾರೆ. ಹೀಗೆ ಅನೇಕರು ತಮ್ಮ ದುಡಿಮೆಯ ಮೂಲಕ ಯಶಸ್ಸನ್ನು ಸಂಪಾದಿಸಿ ತಮ್ಮ ಊರಿನಲ್ಲಿ ಅವಶ್ಯಕತೆ ಇರುವವರಿಗೆ ಸಹಾಯವನ್ನು ಮಾಡುತ್ತಿದ್ದಾರೆ.
ಹೀಗೆ, ತೆರೆಮರೆಯಲ್ಲಿ ನಿಂತು ತನ್ನಿಂದ ಆದಷ್ಟು ಸಮಾಜ ಸೇವೆಯನ್ನು ಮಾಡುತ್ತಿರುವವರಲ್ಲಿ ಕಾರ್ಕಳ ಕುಂಟಾಡಿ ಮೂಲದ ಇದೀಗ ದುಬೈನಲ್ಲಿ ಕಳೆದ ಹತ್ತು ವರ್ಷದಿಂದ ವಾಸವಾಗಿರುವ ಕಿಶೋರ್ ಶಿವರಾಮ್ ಶೆಟ್ಟಿ ಕೂಡ ಒಬ್ಬರು.
ಉಡುಪಿಯ ಕಾರ್ಕಳ ಮೂಲದ ಮನೆತನದವರಾದರೂ ಹುಟ್ಟಿದ್ದು, ಬೆಳೆದಿದ್ದು ವಿದ್ಯಾಭ್ಯಾಸ ಎಲ್ಲವೂ ಮುಂಬೈನಲ್ಲಿ. ಮುಂಬೈನ ಡೊಂಬಿವಿಲಿಯಲ್ಲಿ ವಾಸವಾಗಿದ್ದವರು. ಜೀವನದಲ್ಲಿ ಏನಾದರೂ ಮಾಡಬೇಕೆಂಬ ಛಲ ಉಳ್ಳ ವ್ಯಕ್ತಿ.

ಹೀಗಿರುವಾಗ ಅವರಿಗೆ ದುಬೈನ ಖ್ಯಾತ ಸಂಸ್ಥೆ ಡಾ||ಬು ಅಬ್ದುಲ್ಲಾ ಗ್ರೂಪ್ ನಲ್ಲಿ ಉದ್ಯೋಗವಕಾಶ ಹುಡುಕಿ ಬಂತು. ಹೀಗೆ ದುಬೈಗೆ ಹೋದ ಕಿಶೋರ್ ಸದಾ ಸಮಾಜ ಸೇವೆಯ ಬಗ್ಗೆ ಹೆಚ್ಚು ಯೋಚಿಸಲಾರಂಭಿಸಿದರು.
ತನ್ನ ಸಂಪಾದನೆಯಲ್ಲಿ ಅನೇಕ ಶಿಕ್ಷಣ ಉದ್ಯೋಗ ಚಿಕಿತ್ಸೆಗಾಗಿ ಸಹಾಯ ಮಾಡಲಾರಂಭಿಸಿದರು. ಕೋವಿಡ್ ಸಂದರ್ಭದಲ್ಲಿ ಅನೇಕರಿಗೆ ಇವರು ನೆರವಾಗುವ ಮೂಲಕ ಅನೇಕ ಕುಟುಂಬದ ಕಣ್ಣೀರನ್ನು ಒರೆಸುವ ಪ್ರಯತ್ನವನ್ನು ಮಾಡಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಇವರ ಸೇವೆಗೆ ಇವರಿಗೆ ದುಬೈನಲ್ಲಿ ಗೌರವ ಕೂಡ ದೊರಕಿದೆ.

ಇವರು ಸ್ವತಃ ಒಬ್ಬ ಕ್ರೀಡಾ ಪಟು ಆಗಿದ್ದು ಕ್ರಿಕೆಟ್ ಹಾಗು ಫುಟ್ಬಾಲ್ ಆಡುತ್ತಾರೆ. ಇವರ ಹೆಸರಿನಲ್ಲಿ ಗಿನ್ನಿಸ್ ದಾಖಲೆ ಕೂಡ ಇದೆ. ದುಬೈನಲ್ಲಿ ನಡೆದ ಅನೇಕ ರಾಷ್ಟ್ರಗಳ ರಾಷ್ಟ್ರಗೀತೆ ಹಾಡುವ ಕಾರ್ಯಕ್ರಮವು ಗಿನ್ನಿಸ್ ದಾಖಲೆಯ ಪುರಸ್ಕಾರ ಕ್ಕೆ ಪಾತ್ರವಾಗಿತ್ತು. ಕಿಶೋರ್ ಅವರು ಈ ಕಾರ್ಯಕ್ರಮದ ಭಾಗವಾಗಿದ್ದರು.
ಇವರಿಗೆ ದುಬೈನಲ್ಲಿ ಅನೇಕ ಪ್ರಶಸ್ತಿಗಳು ದೊರಕಿವೆ.ಇಷ್ಟಾದರು ಇವರು ಯಾವುದೇ ಅಹಂಕಾರವಿಲ್ಲದೆ ಎಲ್ಲರೊಂದಿಗೆ ಪ್ರೀತಿಯಿಂದ ಬೆರೆಯುತ್ತಾರೆ. ದುಬೈನಲ್ಲಿದ್ದರೂ ಊರಿನವರ ಕಷ್ಟಕ್ಕೆ ಸ್ಪಂದಿಸುತ್ತಾರೆ. "ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್, ಗಲ್ಪ್ ರಾಷ್ಟ್ರಕ್ಕೆ ಹೀಗೆ ಅನೇಕ ರಾಷ್ಟ್ರಕ್ಕೆ ಭೇಟಿ ನೀಡಿದರೂ, ತುಳು ಭಾಷೆಗೆ ತನ್ನ ಹೃದಯದಲ್ಲಿ ವಿಶೇಷ ಸ್ಥಾನ ಇದೆ ಎನ್ನುತ್ತಾರೆ" ಕಿಶೋರ್ ಶೆಟ್ಟಿ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications