Get Updates
Get notified of breaking news, exclusive insights, and must-see stories!

ಉಡುಪಿ; ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಪೊಲೀಸರ ದೌರ್ಜನ್ಯ

ಉಡುಪಿ, ಜುಲೈ 08; ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಧಾಕೃಷ್ಣ ನಾಯಕ್ ಎಂಬುವವರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವರು ಇದನ್ನು ಖಂಡಿಸಿದ್ದಾರೆ.

ರಾಧಾಕೃಷ್ಣ ನಾಯಕ್ ಸೈನಿಕರ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಅನ್ನು ಫೇಸ್‌ಬುಕ್‌ನಲ್ಲಿ ಹಾಕಿದ್ದಾರೆ ಎಂಬುದು ಆರೋಪ. ರಾಧಾಕೃಷ್ಣ ನಾಯಕ್‌ನನ್ನು ಠಾಣೆಗೆ ಕರೆಸಿ ಹಲ್ಲೆ ಮಾಡಲಾಗಿದ್ದು, ಗಾಯಗೊಂಡ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

Congress Condemns Police Harassment On Congress activist At Karkala

ಕಾರ್ಕಳ ತಾಲೂಕಿನ ಹಿರ್ಗಾನ ನಿವಾಸಿ ರಾಧಾಕೃಷ್ಣ ನಾಯಕ್ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗಿ. ಫೇಸ್‌ಬುಕ್‌ನಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಪೋಸ್ಟ್‌ಗಳನ್ನು ಹಾಕಿದ್ದಾರೆ ಎಂದು ಸಹ ಆರೋಪಿಸಲಾಗಿದೆ.

ನಕಲಿ ಖಾತೆ ಮೂಲಕ ಪೋಸ್ಟ್; ಕಿಡಿಗೇಡಿಗಳು ರಾಧಾಕೃಷ್ಣ ನಾಯಕ್ ಹೆಸರಲ್ಲಿ ನಕಲಿ ಖಾತೆ ತೆರೆದು 2020ರ ಆಗಸ್ಟ್‌ನಲ್ಲಿ ಸೈನಿಕರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದರು. ಈ ಕುರಿತು ರಾಧಾಕೃಷ್ಣ ನಾಯಕ್ ಬೆಂಗಳೂರಿನ ಗಂಗಮ್ಮನ ಗುಡಿ ಪೊಲೀಸ್ ಠಾಣೆಯಲ್ಲಿ ದೂರು ಸಹ ನೀಡಿದ್ದರು. ಪೊಲೀಸರ ಮನವಿಯಂತೆ 4/9/2020ರಲ್ಲಿ 2ನೇ ದೂರು ಕೊಟ್ಟಿದ್ದರು.

ಈ ಬಗ್ಗೆ ಪೊಲೀಸರು ರಾಧಾಕೃಷ್ಣ ನಾಯಕ್ ಹೇಳಿಕೆಯನ್ನು ಸಹ ಪಡೆದಿದ್ದರು. ಕೋವಿಡ್ ಸಮಯದಲ್ಲಿ ಕೆಲಸ ಕಳೆದುಕೊಂಡ ರಾಧಾಕೃಷ್ಣ ನಾಯಕ್ ಕಾರ್ಕಳಕ್ಕೆ ವಾಪಸ್ ಆಗಿದ್ದರು. 4/4/2021ರಂದು ಹೃದಯಾಘಾತವಾಗಿದ್ದು ಸ್ಟಂಟ್ ಸಹ ಅಳವಡಿಕೆ ಮಾಡಲಾಗಿತ್ತು.

ಕಾರ್ಕಳ ನಗರ ಠಾಣೆ ಪೊಲೀಸರು ರಾಧಾಕೃಷ್ಣ ನಾಯಕ್ ಕರೆ ಮಾಡಿ ಠಾಣೆಗೆ ಬರುವಂತೆ ಸೂಚಿಸಿದ್ದರು. ಗುರುವಾರ ಪೊಲೀಸರು ಹಲ್ಲೆ ನಡೆಸಿದ ಪರಿಣಾಮ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬಿಜೆಪಿ ಶಾಸಕರ ಕುಮ್ಮಕ್ಕಿನಿಂದ ಪೊಲೀಸರು ರಾಧಾಕೃಷ್ಣ ನಾಯಕ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮುನೀರ್ ಕಾಟಿಪಳ್ಳ ಫೇಸ್‌ಬುಕ್‌ನಲ್ಲಿ ಆರೋಪಿ ಪೋಸ್ಟ್ ಹಾಕಿದ್ದಾರೆ.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಹ ಹಲ್ಲೆಯನ್ನು ಖಂಡಿಸಿದ್ದು ಟ್ವೀಟ್ ಮಾಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+