ಡಿಕೆಶಿಗೆ ದೈವದ ಆಯುಧ ನೀಡಿದ ಉಡುಪಿ ಕಾಂಗ್ರೆಸ್ ಮುಖಂಡರು; ತೀವ್ರ ಆಕ್ರೋಶ
ಉಡುಪಿ, ಜುಲೈ 7: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಉಡುಪಿ ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ತುಳುನಾಡಿನ ದೈವಗಳ ಆಯುಧವನ್ನು ಉಡುಗೂರೆಯಾಗಿ ನೀಡಿ ಎಡವಟ್ಟು ಮಾಡಿಕೊಂಡಿದ್ದಾರೆ.
ಉಡುಪಿ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಡಿ.ಕೆ. ಶಿವಕುಮಾರ್ ಭೇಟಿ ನೀಡಿದ ವೇಳೆ ಕಾಂಗ್ರೆಸ್ ಮುಖಂಡರು ಬೆಳ್ಳಿಯ ದೈವದ ಕಡ್ಸಲೆ(ಕತ್ತಿ) ನೀಡಿ ಸ್ವಾಗತ ಮಾಡಿದ್ದಾರೆ. ಕಾಂಗ್ರೆಸ್ ಮುಖಂಡರ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಭಾರೀ ಟೀಕೆ ವ್ಯಕ್ತವಾಗಿದೆ.
ಕರಾವಳಿ ಜನರು ಶ್ರದ್ಧಾ ಭಕ್ತಿಯಿಂದ ಆರಾಧಿಸುವ ದೈವಗಳ ಆಯುಧ ಸಾಮಾನ್ಯವಾಗಿ ದೈವಗಳ ಗುಡಿಯಲ್ಲಿಟ್ಟು ಪೂಜೆ ಮಾಡಲಾಗುತ್ತದೆ. ಆದರೆ ಕಾಂಗ್ರೆಸ್ ಮುಖಂಡರು ಅದೇ ಆಯುಧವನ್ನು ಡಿ.ಕೆ. ಶಿವಕುಮಾರ್ಗೆ ನೀಡಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ.

ಈ ಆಯುಧಕ್ಕೆ ಭಾರೀ ಹಿನ್ನಲೆ ಮತ್ತು ಮಹತ್ವವಿದ್ದು, ದೈವಪಾತ್ರಿಗಳಲ್ಲದೆ ಬೇರೆ ಯಾರೂ ಹಿಡಿಯುವಂತಿಲ್ಲ ಎಂಬ ನಿಯಮ ಕೂಡಾ ಕರಾವಳಿಯಲ್ಲಿದೆ. ಇದರ ಹೊರತಾಗಿಯೂ ಕಾಂಗ್ರೆಸ್ ಮುಖಂಡರು ಈ ಆಯುಧ ನೀಡಿರುವುದು ವಿವಾದವನ್ನು ಹುಟ್ಟುಹಾಕಿದೆ.
ಟ್ರಾಫಿಕ್ ನಿಯಮ ಮುರಿದ ನಲಪಾಡ್; ಮೂಕ ಪ್ರೇಕ್ಷಕರಾದ ಪೊಲೀಸರು
ಯುವ ಕಾಂಗ್ರೆಸ್ ಭಾವೀ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಮತ್ತೆ ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದು, ತನ್ನ ಐಷಾರಾಮಿ ಕಾರಿನ ಹಿಂಭಾಗದಲ್ಲಿ ಮಾತ್ರ ನಂಬರ್ ಪ್ಲೇಟ್ ಹಾಕಿದ್ದು, ಮುಂಭಾಗದಲ್ಲಿ ನಂಬರ್ ಪ್ಲೇಟ್ ಹಾಕದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜೊತೆ ಕರಾವಳಿ ಪ್ರದೇಶದಲ್ಲಿ ಸುತ್ತಾಡುತ್ತಿದ್ದಾರೆ.

ಪೆಟ್ರೋಲ್ ದರ ಏರಿಕೆ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದ ಕಾಂಗ್ರೆಸ್ ಸೈಕಲ್ ಜಾಥಾದಲ್ಲಿ ಪಾಲ್ಗೊಳ್ಳಲು ಬಂದ ನಲಪಾಡ್, ತಮ್ಮ ಕಾರಿನಲ್ಲಿ ನಂಬರ್ ಪ್ಲೇಟ್ ಹಾಕದೆ ಮೋಟಾರು ವಾಹನ ಕಾಯ್ದೆ ಉಲ್ಲಂಘನೆ ಮಾಡಿದ್ದಾರೆ.
ರಾಜಕೀಯ ಮುಖಂಡ ಎಂಬ ಕಾರಣಕ್ಕಾಗಿ ಪೊಲೀಸರೂ ಸುಮ್ಮನಿದ್ದು, ಆಡಳಿತ ವ್ಯವಸ್ಥೆಯನ್ನೇ ಅಣಕಿಸಿದೆ. "ಜನಸಾಮಾನ್ಯರ ವಾಹನಗಳಲ್ಲಿ ನಂಬರ್ ಪ್ಲೇಟ್ ಸರಿಯಿಲ್ಲದ ಮಾತ್ರಕ್ಕೆ ದಂಡ ಹಾಕುವ ಪೊಲೀಸರಿಗೆ ನಲಪಾಡ್ ಕಾರಿನಲ್ಲಿ ನಂಬರ್ ಪ್ಲೇಟ್ ಇಲ್ಲದಿರುವುದು ಕಾಣಿಸುವುದಿಲ್ಲವೇ,'' ಎಂದು ಜನ ಟೀಕಿಸಿದ್ದಾರೆ. ಅಲ್ಲದೇ ಐಷಾರಾಮಿ ಕಾರಿನಲ್ಲಿ ಬಂದು ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ಸೈಕಲ್ ತುಳಿದ ನಲಪಾಡ್ ಬಗ್ಗೆಯೂ ವ್ಯಂಗ್ಯ ವ್ಯಕ್ತವಾಗಿದೆ.
Recommended Video
-
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಹೊಸ 800 ಕೆಪಿಎಸ್ ಶಾಲೆ, ಇಂಗ್ಲಿಷ್ ಭಾಷಾ ತರಬೇತಿ: ಕರ್ನಾಟಕ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭರಪೂರ ಘೋಷಣೆ -
Karnataka Budget 2026: 100 ಹೊಸ ಸ್ಕೈವಾಕ್, ಟನಲ್ ರಸ್ತೆ ಸೇರಿ ಕರ್ನಾಟಕ ಬಜೆಟ್ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು? -
ರೈತರಿಗೆ ಮಾಲ್, ಮಂಡ್ಯ ಸಾವಯ ಕೃಷಿ: ಅಡಿಕೆ - ತೆಂಗು ಬೆಳಗಾರರಿಗೂ ಬಂಪರ್, ಮೇಕೆದಾಟು ಯೋಜನೆಗೆ ಅಸ್ತು -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ -
Karnataka Budget 2026: ಕರ್ನಾಟಕ ಬಜೆಟ್ 2026: ಬಜೆಟ್ ಗ್ರಾತ ಕಳೆದ ಬಾರಿಗಿಂತ 40 ಸಾವಿರ ಕೋಟಿ ರೂ. ಹೆಚ್ಚಳ -
ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ, ವಿಶೇಷವೇನು












Click it and Unblock the Notifications