ಕಾರ್ಕಳದಲ್ಲಿ ಕಾಂಗ್ರೆಸ್ ಹೀಗೆ! 'ಕೈ' ಕಮಾಂಡ್ ಬಳಿ ತೂಕದ ಬಟ್ಟು
ಕಾರ್ಕಳ (ಉಡುಪಿ ಜಿಲ್ಲೆ), ಏಪ್ರಿಲ್ 5: ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ವಿಚಾರಕ್ಕೆ ತೆರೆ ಮರೆಯಲ್ಲಿ ಭಾರೀ ಪೈಪೋಟಿ ನಡೆಯುತ್ತಿದೆ. ಹರ್ಷ ಮೊಯಿಲಿಗೆ ಟಿಕೆಟ್ ನೀಡಬೇಕು ಎಂದು ಹಠಕ್ಕೆ ಬಿದ್ದಿದ್ದ ವೀರಪ್ಪ ಮೊಯಿಲಿ, ಇದೀಗ ತಣ್ಣಗಾಗಿದ್ದಾರೆ.
ಕಾಸಿದ್ದರೆ ಕಾಂಟ್ರ್ಯಾಕ್ಟರ್ ಗಳಿಗೆ ಕಾಂಗ್ರೆಸ್ ಟಿಕೆಟ್ ಎಂದು ಟ್ವೀಟ್ ಮಾಡಿದ್ದ ವೀರಪ್ಪ ಮೊಯಿಲಿ, ಆ ನಂತರ ಸಾಕಷ್ಟು ಮುಜುಗರ ಅನುಭವಿಸಬೇಕಾಯಿತು. ಆದರೆ ತಮ್ಮ ಮಗನಿಗೆ ಸಿಗದ ಟಿಕೆಟ್ ವಿರೋಧಿಗೂ ಸಿಗಬಾರದು ಎಂಬ ನಿಲವು ತಳೆದಿರುವ ವೀರಪ್ಪ ಮೊಯಿಲಿ, ಗೋಪಾಲ ಭಂಡಾರಿಗೆ ಟಿಕೆಟ್ ದೊರೆಯಲು ತೆರೆಮರೆಯಲ್ಲಿ ಕಸರತ್ತು ನಡೆಸಿದ್ದಾರೆ.
ಪ್ರಬಲ ಆಕಾಂಕ್ಷಿ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಟಿಕೆಟ್ ಗಾಗಿ ಲಾಬಿ ಮಾಡುತ್ತಿದ್ದಾರೆ. ಇದೀಗ ಬೆಂಬಲಿಗರು ಎಂಬ ಬೋರ್ಡ್ ನಲ್ಲಿ ಹಲವರು ಮುನಿಯಾಲು ಉದಯ್ ಶೆಟ್ಟಿ ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದಾರೆ.

ಕಾರ್ಕಳ ಭಾಗದಲ್ಲಿ ಕಾಂಗ್ರೆಸ್ ನಿಷ್ಕ್ರಿಯವಾಗಿ ಎರಡು- ಮೂರು ವರ್ಷಗಳೇ ಕಳೆದಿದೆ. ರಾಜ್ಯ ಸರಕಾರದ ಸಾಧನೆಯನ್ನು ಜನರಿಗೆ ಮುಟ್ಟಿಸುವ ಕಾರ್ಯವನ್ನು ಕಾಂಗ್ರೆಸ್ ಹಿರಿಯ ನಾಯಕರು ಮಾಡಿಲ್ಲ. ಕಾರ್ಕಳ ಉಸ್ತುವಾರಿ ಜಿ.ಎ.ಬಾವಾ ಹೆಸರಿಗೆ ಮಾತ್ರ ಇದ್ದಾರೆ. ಕಾಂಗ್ರೆಸ್ ಉಳಿವಿಗಾಗಿ ಕೆಲಸ ಮಾಡುತ್ತಿಲ್ಲ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು
ಇನ್ನು ಕಾಂಗ್ರೆಸ್ ಪಕ್ಷದ ಗೆಲುವಿಗಾಗಿ ಪ್ರಯತ್ನ ಪಡುತ್ತಿದ್ದರೆ ಅದು ಉದಯ್ ಕುಮಾರ್ ಶೆಟ್ಟಿ. ಕಾಂಗ್ರೆಸ್ ಸಾಧನೆಯನ್ನು ಮನೆ ಮನೆಗೆ ತಲುಪಿಸುವ ಮೂಲಕ ಕಾರ್ಕಳ ಕ್ಷೇತ್ರದಲ್ಲಿ ಕೈ ಪಕ್ಷಕ್ಕೆ ಜೀವ ತುಂಬುವ ಕೆಲಸ ಮಾಡುತ್ತಿದ್ದಾರೆ.

ಆ ಕಾರಣದಿಂದಲೇ ಮುನಿಯಾಲ್ ಉದಯ್ ಕುಮಾರ್ ಶೆಟ್ಟಿ ಅವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಬೇಕು. ಆ ಮೂಲಕ ಕಾರ್ಕಳದಲ್ಲಿ ಕಾಂಗ್ರೆಸ್ ಗೆಲ್ಲುವಂತೆ ಮಾಡುವುದಕ್ಕೆ ಹೈಕಮಾಂಡ್ ಗಮನ ನೀಡಬೇಕು ಎನ್ನುವುದು ಉದಯ್ ಕುಮಾರ್ ಶೆಟ್ಟಿ ಬೆಂಬಲಿಗರ ಆಗ್ರಹವಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications