Get Updates
Get notified of breaking news, exclusive insights, and must-see stories!

ಕಾರ್ಕಳದಲ್ಲಿ ಕಾಂಗ್ರೆಸ್ ಹೀಗೆ! 'ಕೈ' ಕಮಾಂಡ್ ಬಳಿ ತೂಕದ ಬಟ್ಟು

ಕಾರ್ಕಳ (ಉಡುಪಿ ಜಿಲ್ಲೆ), ಏಪ್ರಿಲ್ 5: ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ವಿಚಾರಕ್ಕೆ ತೆರೆ ಮರೆಯಲ್ಲಿ ಭಾರೀ ಪೈಪೋಟಿ ನಡೆಯುತ್ತಿದೆ. ಹರ್ಷ ಮೊಯಿಲಿಗೆ ಟಿಕೆಟ್ ನೀಡಬೇಕು ಎಂದು ಹಠಕ್ಕೆ ಬಿದ್ದಿದ್ದ ವೀರಪ್ಪ ಮೊಯಿಲಿ, ಇದೀಗ ತಣ್ಣಗಾಗಿದ್ದಾರೆ.

ಕಾಸಿದ್ದರೆ ಕಾಂಟ್ರ್ಯಾಕ್ಟರ್ ಗಳಿಗೆ ಕಾಂಗ್ರೆಸ್ ಟಿಕೆಟ್ ಎಂದು ಟ್ವೀಟ್ ಮಾಡಿದ್ದ ವೀರಪ್ಪ ಮೊಯಿಲಿ, ಆ ನಂತರ ಸಾಕಷ್ಟು ಮುಜುಗರ ಅನುಭವಿಸಬೇಕಾಯಿತು. ಆದರೆ ತಮ್ಮ ಮಗನಿಗೆ ಸಿಗದ ಟಿಕೆಟ್ ವಿರೋಧಿಗೂ ಸಿಗಬಾರದು ಎಂಬ ನಿಲವು ತಳೆದಿರುವ ವೀರಪ್ಪ ಮೊಯಿಲಿ, ಗೋಪಾಲ ಭಂಡಾರಿಗೆ ಟಿಕೆಟ್ ದೊರೆಯಲು ತೆರೆಮರೆಯಲ್ಲಿ ಕಸರತ್ತು ನಡೆಸಿದ್ದಾರೆ.

ಪ್ರಬಲ ಆಕಾಂಕ್ಷಿ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಟಿಕೆಟ್ ಗಾಗಿ ಲಾಬಿ ಮಾಡುತ್ತಿದ್ದಾರೆ. ಇದೀಗ ಬೆಂಬಲಿಗರು ಎಂಬ ಬೋರ್ಡ್ ನಲ್ಲಿ ಹಲವರು ಮುನಿಯಾಲು ಉದಯ್ ಶೆಟ್ಟಿ ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದಾರೆ.

Congress ticket confusion in Karkala constituency

ಕಾರ್ಕಳ ಭಾಗದಲ್ಲಿ ಕಾಂಗ್ರೆಸ್ ನಿಷ್ಕ್ರಿಯವಾಗಿ ಎರಡು- ಮೂರು ವರ್ಷಗಳೇ ಕಳೆದಿದೆ. ರಾಜ್ಯ ಸರಕಾರದ ಸಾಧನೆಯನ್ನು ಜನರಿಗೆ ಮುಟ್ಟಿಸುವ ಕಾರ್ಯವನ್ನು ಕಾಂಗ್ರೆಸ್ ಹಿರಿಯ ನಾಯಕರು ಮಾಡಿಲ್ಲ. ಕಾರ್ಕಳ ಉಸ್ತುವಾರಿ ಜಿ.ಎ.ಬಾವಾ ಹೆಸರಿಗೆ ಮಾತ್ರ ಇದ್ದಾರೆ. ಕಾಂಗ್ರೆಸ್ ಉಳಿವಿಗಾಗಿ ಕೆಲಸ ಮಾಡುತ್ತಿಲ್ಲ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು

ಇನ್ನು ಕಾಂಗ್ರೆಸ್ ಪಕ್ಷದ ಗೆಲುವಿಗಾಗಿ ಪ್ರಯತ್ನ ಪಡುತ್ತಿದ್ದರೆ ಅದು ಉದಯ್ ಕುಮಾರ್ ಶೆಟ್ಟಿ. ಕಾಂಗ್ರೆಸ್ ಸಾಧನೆಯನ್ನು ಮನೆ ಮನೆಗೆ ತಲುಪಿಸುವ ಮೂಲಕ ಕಾರ್ಕಳ ಕ್ಷೇತ್ರದಲ್ಲಿ ಕೈ ಪಕ್ಷಕ್ಕೆ ಜೀವ ತುಂಬುವ ಕೆಲಸ ಮಾಡುತ್ತಿದ್ದಾರೆ.

Congress ticket confusion in Karkala constituency

ಆ ಕಾರಣದಿಂದಲೇ ಮುನಿಯಾಲ್ ಉದಯ್ ಕುಮಾರ್ ಶೆಟ್ಟಿ ಅವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಬೇಕು. ಆ ಮೂಲಕ ಕಾರ್ಕಳದಲ್ಲಿ ಕಾಂಗ್ರೆಸ್ ಗೆಲ್ಲುವಂತೆ ಮಾಡುವುದಕ್ಕೆ ಹೈಕಮಾಂಡ್ ಗಮನ ನೀಡಬೇಕು ಎನ್ನುವುದು ಉದಯ್ ಕುಮಾರ್ ಶೆಟ್ಟಿ ಬೆಂಬಲಿಗರ ಆಗ್ರಹವಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+