ಕಾರ್ಕಳದಲ್ಲಿ ಕಾಂಗ್ರೆಸ್ ಹೀಗೆ! 'ಕೈ' ಕಮಾಂಡ್ ಬಳಿ ತೂಕದ ಬಟ್ಟು
ಕಾರ್ಕಳ (ಉಡುಪಿ ಜಿಲ್ಲೆ), ಏಪ್ರಿಲ್ 5: ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ವಿಚಾರಕ್ಕೆ ತೆರೆ ಮರೆಯಲ್ಲಿ ಭಾರೀ ಪೈಪೋಟಿ ನಡೆಯುತ್ತಿದೆ. ಹರ್ಷ ಮೊಯಿಲಿಗೆ ಟಿಕೆಟ್ ನೀಡಬೇಕು ಎಂದು ಹಠಕ್ಕೆ ಬಿದ್ದಿದ್ದ ವೀರಪ್ಪ ಮೊಯಿಲಿ, ಇದೀಗ ತಣ್ಣಗಾಗಿದ್ದಾರೆ.
ಕಾಸಿದ್ದರೆ ಕಾಂಟ್ರ್ಯಾಕ್ಟರ್ ಗಳಿಗೆ ಕಾಂಗ್ರೆಸ್ ಟಿಕೆಟ್ ಎಂದು ಟ್ವೀಟ್ ಮಾಡಿದ್ದ ವೀರಪ್ಪ ಮೊಯಿಲಿ, ಆ ನಂತರ ಸಾಕಷ್ಟು ಮುಜುಗರ ಅನುಭವಿಸಬೇಕಾಯಿತು. ಆದರೆ ತಮ್ಮ ಮಗನಿಗೆ ಸಿಗದ ಟಿಕೆಟ್ ವಿರೋಧಿಗೂ ಸಿಗಬಾರದು ಎಂಬ ನಿಲವು ತಳೆದಿರುವ ವೀರಪ್ಪ ಮೊಯಿಲಿ, ಗೋಪಾಲ ಭಂಡಾರಿಗೆ ಟಿಕೆಟ್ ದೊರೆಯಲು ತೆರೆಮರೆಯಲ್ಲಿ ಕಸರತ್ತು ನಡೆಸಿದ್ದಾರೆ.
ಪ್ರಬಲ ಆಕಾಂಕ್ಷಿ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಟಿಕೆಟ್ ಗಾಗಿ ಲಾಬಿ ಮಾಡುತ್ತಿದ್ದಾರೆ. ಇದೀಗ ಬೆಂಬಲಿಗರು ಎಂಬ ಬೋರ್ಡ್ ನಲ್ಲಿ ಹಲವರು ಮುನಿಯಾಲು ಉದಯ್ ಶೆಟ್ಟಿ ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದಾರೆ.

ಕಾರ್ಕಳ ಭಾಗದಲ್ಲಿ ಕಾಂಗ್ರೆಸ್ ನಿಷ್ಕ್ರಿಯವಾಗಿ ಎರಡು- ಮೂರು ವರ್ಷಗಳೇ ಕಳೆದಿದೆ. ರಾಜ್ಯ ಸರಕಾರದ ಸಾಧನೆಯನ್ನು ಜನರಿಗೆ ಮುಟ್ಟಿಸುವ ಕಾರ್ಯವನ್ನು ಕಾಂಗ್ರೆಸ್ ಹಿರಿಯ ನಾಯಕರು ಮಾಡಿಲ್ಲ. ಕಾರ್ಕಳ ಉಸ್ತುವಾರಿ ಜಿ.ಎ.ಬಾವಾ ಹೆಸರಿಗೆ ಮಾತ್ರ ಇದ್ದಾರೆ. ಕಾಂಗ್ರೆಸ್ ಉಳಿವಿಗಾಗಿ ಕೆಲಸ ಮಾಡುತ್ತಿಲ್ಲ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು
ಇನ್ನು ಕಾಂಗ್ರೆಸ್ ಪಕ್ಷದ ಗೆಲುವಿಗಾಗಿ ಪ್ರಯತ್ನ ಪಡುತ್ತಿದ್ದರೆ ಅದು ಉದಯ್ ಕುಮಾರ್ ಶೆಟ್ಟಿ. ಕಾಂಗ್ರೆಸ್ ಸಾಧನೆಯನ್ನು ಮನೆ ಮನೆಗೆ ತಲುಪಿಸುವ ಮೂಲಕ ಕಾರ್ಕಳ ಕ್ಷೇತ್ರದಲ್ಲಿ ಕೈ ಪಕ್ಷಕ್ಕೆ ಜೀವ ತುಂಬುವ ಕೆಲಸ ಮಾಡುತ್ತಿದ್ದಾರೆ.

ಆ ಕಾರಣದಿಂದಲೇ ಮುನಿಯಾಲ್ ಉದಯ್ ಕುಮಾರ್ ಶೆಟ್ಟಿ ಅವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಬೇಕು. ಆ ಮೂಲಕ ಕಾರ್ಕಳದಲ್ಲಿ ಕಾಂಗ್ರೆಸ್ ಗೆಲ್ಲುವಂತೆ ಮಾಡುವುದಕ್ಕೆ ಹೈಕಮಾಂಡ್ ಗಮನ ನೀಡಬೇಕು ಎನ್ನುವುದು ಉದಯ್ ಕುಮಾರ್ ಶೆಟ್ಟಿ ಬೆಂಬಲಿಗರ ಆಗ್ರಹವಾಗಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications