ಕೃಷ್ಣಮಠದಲ್ಲಿ ಈ ಬಾರಿ ಮಡೆಸ್ನಾನ, ಎಡೆಸ್ನಾನ ಇಲ್ಲ
ಉಡುಪಿ, ಡಿಸೆಂಬರ್ 2: ಸುಬ್ರಹ್ಮಣ್ಯ ಷಷ್ಠಿ ಹಿನ್ನೆಲೆಯಲ್ಲಿ ಕೃಷ್ಣಮಠದಲ್ಲಿ ಈ ಬಾರಿ ಬಹುಚರ್ಚಿತ ಮಡೆಸ್ನಾನ ಅಥವಾ ಎಡೆಸ್ನಾನಕ್ಕೆ ತಿಲಾಂಜಲಿ ಇಡಲಾಗಿದೆ.
ಇವತ್ತು ಷಷ್ಠಿ ಪ್ರಯುಕ್ತ ಮಠಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಆದರೆ ಪ್ರತಿ ವರ್ಷದಂತೆ ಕೃಷ್ಣ ಮಠದಲ್ಲಿ ಮಡೆಸ್ನಾನವೂ ಇರಲಿಲ್ಲ, ಎಡೆ ಸ್ನಾನವೂ ಇರಲಿಲ್ಲ.
ಪರ್ಯಾಯ ಪಲಿಮಾರು ಸ್ವಾಮೀಜಿ ಗಳು ಇಂತಹದ್ದೊಂದು ಕ್ರಾಂತಿಕಾರಿ ನಿರ್ಧಾರಕ್ಕೆ ಬಂದಿದ್ದಾರೆ. ಕೆಲವರಿಗೆ ಇದು ನಂಬಿಕೆಯಂತೆಯೂ ಇನ್ನೂ ಕೆಲವರಿಗೆ ಇದು ಮೂಢನಂಬಿಕೆಯಂತೆಯೂ ಭಾಸವಾಗುತ್ತಿತ್ತು. ಈ ಸಂಬಂಧ ಮಡೆಸ್ನಾನ ನಿಷೇಧ ಆಗಬೇಕು ಎಂದು ಹಿಂದೆ ನ್ಯಾಯಾಲಯಕ್ಕೂ ದೂರು ಹೋಗಿತ್ತು. ಬಳಿಕ ನ್ಯಾಯಾಲಯ ಎಡೆಸ್ನಾನಕ್ಕೆ ಅವಕಾಶ ಕಲ್ಪಿಸಿತ್ತು. ಮುಂದಿನ ದಿನಗಳಲ್ಲಿ ಕೃಷ್ಣಮಠದಲ್ಲಿ ಎಡೆ ಸ್ನಾನ ಪದ್ಧತಿ ಜಾರಿಯಲ್ಲಿತ್ತು. ಆದರೆ ಈ ವರ್ಷ ಯಾವುದೇ ಗೊಂದಲಕ್ಕೆ ಅವಕಾಶಗದಿರಲು ಪರ್ಯಾಯ ಶ್ರೀಗಳು ಇಂತಹದ್ದೊಂದು ನಿರ್ಧಾರಕ್ಕೆ ಬಂದಿದ್ದಾರೆ.

ಪೇಜಾವರ ಶ್ರೀಗಳ ಸಲಹೆಯಂತೆ ಅವರ ಹಿಂದಿನ ಪರ್ಯಾಯದಲ್ಲಿ ಎಡೆಸ್ನಾನ ಆರಂಭಿಸಲಾಗಿತ್ತು. ಆದರೆ ಎಡೆಸ್ನಾನವನ್ನೂ ಮಾಡಿಸದಿರಲು ಪಲಿಮಾರುಶ್ರೀ ನಿರ್ಧಾರ ಕೈಗೊಂಡಿದ್ದಾರೆ. ಈ ಸಲ ಕೇವಲ ವಿಶೇಷ ಪೂಜೆ ಸಲ್ಲಿಸಿ, ಅನ್ನಪ್ರಸಾದ ಸ್ವೀಕರಿಸಿ ಭಕ್ತರು ತೆರಳಿದ್ದಾರೆ. ಎಡೆ ಮತ್ತು ಮಡೆ ಸ್ನಾನ ಎರಡರಲ್ಲೂ ವಿವಾದಗಳಿವೆ. ಹೀಗಾಗಿ ವಿವಾದ ಬೇಡ ಅನ್ನೋ ಉದ್ದೇಶಕ್ಕೆ ಈ ನಿರ್ಧಾರ ಕೈಗೊಂಡಿದ್ದೇವೆ. ದೇವರ ಸೇವೆ ಪೂಜೆಯಷ್ಟೇ ಮುಖ್ಯ ಎಂದು ಪಲಿಮಾರು ಮಠದ ವಿದ್ಯಾಧೀಶ ತೀರ್ಥರು ಹೇಳಿಕೆ ನೀಡಿದ್ದಾರೆ.
ಆದರೆ ಉಡುಪಿಯ ಮುಚ್ಲಗೋಡು ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಎಡೆ ಸ್ನಾನ ಎಂದಿನಂತೆ ಸರಾಗವಾಗಿ ನಡೆದಿದೆ. ಈ ದೇವಸ್ಥಾನದ ಆಡಳಿತ ಪೇಜಾವರ ಮಠದ ಅಧೀನದಲ್ಲಿದೆ ಎಂಬುದು ಗಮನಾರ್ಹ ವಿಷಯ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications