ಪಟ್ಟದ ದೇವರ ವಿವಾದ : ಕೇವಿಯೆಟ್ ಅರ್ಜಿ ಸಲ್ಲಿಸಿದ ಶೀರೂರು
ಉಡುಪಿ, ಜುಲೈ.06: ಶೀರೂರು ಮಠದ ಪಟ್ಟದ ದೇವರ ವಿವಾದ ಮತ್ತೆ ಭುಗಿಲೆದ್ದಿದೆ. ಉತ್ತರಾಧಿಕಾರಿ ನೇಮಕ ಇಲ್ಲದೆ ಪಟ್ಟದ ದೇವರು ನೀಡಲು ಆಗುವುದಿಲ್ಲ ಎಂದು ಪಟ್ಟು ಹಿಡಿದಿರುವ ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿಗೆ ಅಷ್ಟ ಮಠದ ಎಲ್ಲಾ ಮಠಾಧೀಶರು ಬೆಂಬಲವಾಗಿ ನಿಂತಿದ್ದಾರೆ.
ಅಲ್ಲದೇ, ಮಠಾಧೀಶರು ಪಟ್ಟದ ದೇವರು ಹಸ್ತಾಂತರ ಕುರಿತು ಹಿರಿಯ ಯತಿ ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಸೇರಿದಂತೆ ಯಾವುದೇ ಸ್ವಾಮೀಜಿಗಳು ನನ್ನ ವಿರುದ್ಧ ಹೇಳಿಕೆ ನೀಡಬಾರದು. ಯಾವುದೇ ಬೆಳವಣಿಗೆ ನಡೆಸಬಾರದು ಎಂದು ಶೀರೂರು ಶ್ರೀ ಲಕ್ಷ್ಮೀವರ ತೀರ್ಥರು ಕೋರ್ಟ್ ಮೆಟ್ಟಿಲೇರಿ ಕೇವಿಯೆಟ್ ತಂದಿದ್ದಾರೆ.
ಶೀರೂರು ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ ರಾಜಕೀಯಕ್ಕೆ ಎಂಟ್ರಿ ಕೊಡಲು ನಿರ್ಧಾರ ಮಾಡಿದ ಬಳಿಕ ಕೆಲವೇ ಸಮಯದಲ್ಲಿ ಅವರು ಅನಾರೋಗ್ಯಕ್ಕೆ ಒಳಗಾಗಿದ್ದರು. ಈ ವೇಳೆ ಶೀರೂರು ಮಠದ ಪಟ್ಟದ ದೇವರಾದ ವಿಠಲ ದೇವರ ಮೂರ್ತಿಯನ್ನು ಅದಮಾರು ಮಠದ ಕಿರಿಯ ಯತಿ ಈಶಪ್ರಿಯ ಸ್ವಾಮೀಜಿಗೆ ಪ್ರತಿ ನಿತ್ಯ ಪೂಜಾ ಕೈಂಕರ್ಯ ನಡೆಸುವಂತೆ ನೀಡಿದ್ದರು.

ಆದರೆ ಈಶಪ್ರಿಯರು ಈಗಿನ ಪರ್ಯಾಯ ಸ್ವಾಮೀಜಿಗಳಾದ ವಿದ್ಯಾಧೀಶ ತೀರ್ಥರಿಗೆ ಹಸ್ತಾಂತರ ಮಾಡಿದ್ದರು. ಇದೀಗ ಪ್ರತೀ ನಿತ್ಯ ಪೂಜೆ ನಡೆಸುವ ಪರ್ಯಾಯ ಶ್ರೀ ವಿದ್ಯಾದೀಶತೀರ್ಥರು, ಶೀರೂರು ಶ್ರೀಗಳಿಗೆ ಪಟ್ಟದ ದೇವರು ನೀಡಬೇಕಾದ್ರೆ ಉತ್ತರಾಧಿಕಾರಿ ನೇಮಿಸಿ ಎಂದು ಯೂಟರ್ನ್ ಹೊಡೆದಿದ್ದಾರೆ.
ಹೀಗಾಗಿ ಅದಮಾರು ಶ್ರೀಗಳು ಪರ್ಯಾಯ ಶ್ರೀಗಳೊಂದಿಗೆ ಸೇರಿಕೊಂಡು ವಿಶ್ವಾಸದ್ರೋಹ ಎಸಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
-
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
BESCOM Mithra: 'ಬೆಸ್ಕಾಂ ಮಿತ್ರ' ಸೇವೆ ತಾತ್ಕಾಲಿಕ ಸ್ಥಗಿತ, ಸುಧಾರಿತ ವ್ಯವಸ್ಥೆ ಶೀಘ್ರವೇ ಲಭ್ಯ












Click it and Unblock the Notifications