ಕೊರೊನಾ ಭಯ: ಮಾನವೀಯ ಮೌಲ್ಯ ಮರೆತ ಜನ
ಉಡುಪಿ, ಮಾರ್ಚ್ 18: ಹಿಂದೆಲ್ಲ ರಸ್ತೆ ಬದಿಯಲ್ಲಿ ಯಾರಾದರೂ ಬಿದ್ದಿದ್ದರೆ ಮಾನವೀಯತೆಯ ದೃಷ್ಟಿಯಿಂದ ಅವರನ್ನು ಎಬ್ಬಿಸಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ಜನರು ಈಗ ಕೊರೊನಾ ವೈರಸ್ ಭಯದಿಂದಾಗಿ ಯಾರ ರಕ್ಷಣೆಗೂ ಮುಂದಾಗುತ್ತಿಲ್ಲ.
ರಸ್ತೆಯಲ್ಲಿ ಯಾರಾದರೂ ತಲೆ ತಿರುಗಿ ಬಿದ್ದರೆ ಕಳೆದ ಕೆಲವು ದಿನಗಳಿಂದ ಕೊರೊನಾ ಭೀತಿಯಿಂದಾಗಿ, ಅವರ ಹತ್ತಿರಕ್ಕೂ ಜನ ಸುಳಿಯುತ್ತಿಲ್ಲ. ಮೂರು ದಿನಗಳ ಹಿಂದೆ ಉಡುಪಿ ಕೃಷ್ಣಮಠದ ಪರಿಸರದಲ್ಲಿ ವ್ಯಕ್ತಿಯೋರ್ವರು ತೀವ್ರ ಬಿಸಿಲಿನ ಝಳದಿಂದ ತಲೆ ತಿರುಗಿಬಿದ್ದಿದ್ದರು.
ಈ ಸಂದರ್ಭದಲ್ಲಿ ಅವರ ತಲೆಗೆ ಕಲ್ಲು ತಾಗಿ ಗಾಯವಾಗಿತ್ತು. ತಲೆಗೆ ಆದ ಗಾಯದಿಂದ ರಕ್ತ ಸೋರಿ ಹೋಗುತ್ತಿದ್ದರೂ ಆ ಸ್ಥಳದಲ್ಲಿದ್ದ ಯಾರೊಬ್ಬರೂ ಅವರನ್ನು ರಕ್ಷಿಸುವ ಕೆಲಸಕ್ಕೆ ಮುಂದಾಗಲಿಲ್ಲ.

ಜನರು ಅವರನ್ನು ಕೊರೊನಾ ಪೀಡಿತ ಇರಬೇಕು ಎಂದೇ ಭಾವಿಸಿದ್ದರು. ಕೊನೆಗೆ ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಅವರು ಆ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿದರು.
ಆದರೆ ಅದಾಗಲೇ ಕಾಲ ಮಿಂಚಿದ್ದರಿಂದ ತಲೆಯಿಂದ ತೀವ್ರ ರಕ್ತಸ್ರಾವ ಆಗಿದ್ದ ಕಾರಣ ಆ ವ್ಯಕ್ತಿ ಮೃತಪಟ್ಟಿದ್ದರು. ಸಕಾಲದಲ್ಲಿ ಅವರನ್ನು ಆಸ್ಪತ್ರೆಗೆ ಸಾಗಿಸಿದ್ದರೆ ಅವರನ್ನು ಉಳಿಸಬಹುದಿತ್ತು.
ಆದರೆ ಕೊರೊನಾ ಭೀತಿಯಿಂದ ಜನರು ಸಹಾಯಕ್ಕೆ ಮುಂದೆ ಬರದ ಕಾರಣ ಅವರ ಜೀವ ಕಳೆದು ಹೋಗಿದೆ. ಕಣ್ಣಿಗೆ ಕಾಣದಿರುವ ಈ ಕೊರೊನಾ ವೈರಸ್ ಮಾನವೀಯ ಮೌಲ್ಯಗಳನ್ನೇ ನಾಶಪಡಿಸುತ್ತಿರೋದು ನಿಜಕ್ಕೂ ದುರಂತ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications