ಕೊಲ್ಲೂರು ದೇವಾಲಯದಲ್ಲಿ ಕೋಟಿ-ಕೋಟಿ ಲೂಟಿ?
ಉಡುಪಿ, ಮಾರ್ಚ್ 09: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದಲ್ಲಿ ಅವ್ಯವಹಾರ ನಡೆದಿದೆ ಎಂದು ಈ ಹಿಂದೆಯೂ ಅನೇಕ ಬಾರಿ ಆರೋಪಗಳು ಕೇಳಿಬಂದಿವೆ. ಈಗ ದೇವಾಲಯದಲ್ಲಿ ಅವ್ಯವಹಾರ ನಡೆದಿದೆ ಎಂಬ ಮತ್ತೊಂದು ಆರೋಪ ಕೇಳಿ ಬಂದಿದೆ.
ಮಂಗಳವಾರ ಉಡುಪಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ದೇವಸ್ಥಾನ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಬರೋಬ್ಬರಿ 20 ಕೋಟಿಗೂ ಹೆಚ್ಚು ಆರ್ಥಿಕ ಅವ್ಯವಹಾರಗಳು ನಡೆದಿವೆ ಎಂದು ಗಂಭೀರ ಆರೋಪ ಮಾಡಿದೆ.
ಮಹಾಸಂಘದ ವಕ್ತಾರ ಗುರುಪ್ರಸಾದ್ ಗೌಡ ಈ ಕುರಿತು ಮಾತನಾಡಿದರು. "ಕೊಲ್ಲೂರು ದೇವಸ್ಥಾನವು ದಿನನಿತ್ಯ ಸಾವಿರಾರು ಭಕ್ತರು ಸಂದರ್ಶಿಸುವ ರಾಜ್ಯದ ಪ್ರಸಿದ್ಧ ದೇವಸ್ಥಾನವಾಗಿದ್ದು, ಮೂಕಾಂಬಿಕಾ ದೇವಸ್ಥಾನದ ಆಡಳಿತ ಮಂಡಳಿ ಮತ್ತು ಸರಕಾರಿ ಅಧಿಕಾರಿ ಸೇರಿ ಕೋಟ್ಯಂತರ ರೂಪಾಯಿ ಲೂಟಿ ಮಾಡುತ್ತಿದ್ದಾರೆ" ಎಂದು ಹೇಳಿದ್ದಾರೆ.

"2018-19ನೇ ಸಾಲಿನಲ್ಲಿ ದೇವಾಲಯದ ಹಣದಲ್ಲಿ ಜಿಲ್ಲಾಧಿಕಾರಿಯ ನಿವಾಸದ 23,363.00 ರೂ. ಬಿಲ್ ಅನ್ನು ಪಾವತಿಸಲಾಗಿದೆ. ದೇಣಿಗೆ ರೂಪದಲ್ಲಿ ದೊರೆತ ಬಂಗಾರ ಮತ್ತು ಬೆಳ್ಳಿಯ ಬೆಲೆಬಾಳುವ ಆಭರಣಗಳ ಬಗ್ಗೆ ಆಡಳಿತ ಮಂಡಳಿಯು ನಿಯಮಾನುಸಾರ ನೋಂದಣಿ ಮಾಡಿಸಿಲ್ಲ. 2018-19 ರವರೆಗೆ ಇಂತಹ ದೇಣಿಗೆ ಸ್ವೀಕರಿಸಿದ ಆಭರಣಗಳ ಪಟ್ಟಿಯನ್ನು ಸರಕಾರಿ ಲೆಕ್ಕಪರಿಶೋಧಕರಿಗೆ ಸಲ್ಲಿಸಿಲ್ಲ" ಎಂದು ದೂರಿದರು.
"2016ರಲ್ಲಿ ದೇವಿಯ 4.9 ಕಿಲೋ ಬಂಗಾರದ ಹಾರವನ್ನು ಅಧಿಕಾರಿಯೇ ಕದ್ದು ಸಿಕ್ಕಿಬಿದ್ದಿದ್ದ. ಆ ಅಧಿಕಾರಿಯ ವಿರುದ್ಧ ದೂರು ದಾಖಲಾಗಿ ಬಂಧಿಸಲಾಗಿತ್ತು. ಜವಾಬ್ದಾರಿಯುತ ಅಧಿಕಾರಿಯೇ ಕಳ್ಳತನ ಮಾಡುವಾಗ ದೇವಸ್ಥಾನವನ್ನು ರಕ್ಷಿಸುವವರು ಯಾರು?"ಎಂದು ಪ್ರಶ್ನೆ ಮಾಡಿದ್ದಾರೆ.
"ಆಡಳಿತ ಮಂಡಳಿಯು ಸುಳ್ಳು ಸಿಬ್ಬಂದಿಗಳನ್ನು ತೋರಿಸಿ ದೊಡ್ಡ ಪ್ರಮಾಣದಲ್ಲಿ ಭ್ರಷ್ಟಾಚಾರ ಎಸಗಿದೆ. ನಿಯಮಗಳ ಪ್ರಕಾರ ದೇವಸ್ಥಾನದ ಸಿಬ್ಬಂದಿಗಳ ವಿವರ ಮತ್ತು ಮಾಹಿತಿಗಳನ್ನು ತೆಗೆದಿಡಬೇಕು. ಆದರೆ ಅದನ್ನು ಮಾಡಿಲ್ಲ. ಜಮೀನು ಮತ್ತುಇತರೆ ಆಸ್ತಿಪಾಸ್ತಿಗಳ ಸರಿಯಾದ ಮಾಹಿತಿ ನೋಂದಾಯಿಸಿಕೊಳ್ಳದೇ ಇರುವುದು ಗಂಭೀರ ವಿಚಾರವಾಗಿದೆ. ಜಮೀನುಗಳ ಅತಿಕ್ರಮಣವಾಗುತ್ತಿದೆ" ಎಂದು ಆರೋಪಿಸಿದ್ದಾರೆ.
"ದೇವಾಲಯದ ಸರಕಾರೀಕರಣವನ್ನು ತಕ್ಷಣವೇ ರದ್ದುಪಡಿಸಲು ಹೋರಾಡುವುದು ಪ್ರತಿಯೊಬ್ಬ ಭಕ್ತರ ಕರ್ತವ್ಯ. ಲೂಟಿಕೋರ ಸರಕಾರಿ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳದಿದ್ದರೆ ರಾಜ್ಯವ್ಯಾಪಿ ಹೋರಾಟ ಮಾಡಲಾಗುವುದು" ಎಂದು ಎಚ್ಚರಿಕೆ ನೀಡಿದರು.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications