ಕೊರೊನಾ ಎಫೆಕ್ಟ್: ಕೃಷ್ಣ... ಕೃಷ್ಣ... ಮಠ ನಡೆಸುವುದೂ ಕಷ್ಟ, ಕೋಟಿ ಸಾಲಕ್ಕೆ ಉಡುಪಿ ಕೃಷ್ಣಮಠ ಮೊರೆ!
ಉಡುಪಿ, ಆಗಸ್ಟ್ 31: ಕೊರೊನಾ ವೈರಸ್ ಸಂಕಷ್ಟ ಮತ್ತು ಐದು ತಿಂಗಳುಗಳ ಕಾಲ ಘೋಷಿಸಲ್ಪಟ್ಟಿದ್ದ ಲಾಕ್ ಡೌನ್ ಜನರ ಬದುಕನ್ನು ಮೂರಾಬಟ್ಟೆ ಮಾಡಿದ್ದಷ್ಟೇ ಅಲ್ಲ, ಮಠ-ಮಾನ್ಯಗಳಿಗೂ ಅದರ ಬಿಸಿ ತಟ್ಟಲು ಶುರುವಾಗಿದೆ. ಲಾಕ್ ಡೌನ್ ನಿಂದಾಗಿ ಬಂದ್ ಆಗಿದ್ದ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠದ ನಿರ್ವಹಣೆಯೂ ಕಷ್ಟವಾಗಿದ್ದು, ಮಠಾಧೀಶರು ಕೃಷ್ಣ ಮಠದ ನಿರ್ವಹಣೆಗೆ ಬ್ಯಾಂಕ್ ಸಾಲದ ಮೊರೆ ಹೋಗಿದ್ದಾರೆ.
Recommended Video
ಸದ್ಯ ಉಡುಪಿಯ ಕೃಷ್ಣಮಠದಲ್ಲಿ ಅದಮಾರು ಮಠಾಧೀಶರಾದ ಈಶಪ್ರಿಯ ತೀರ್ಥ ಶ್ರೀಗಳು ಪರ್ಯಾಯ ನಡೆಸುತ್ತಿದ್ದು, ಒಂದು ವರ್ಷಗಳ ಕಾಲ ನಿರಂತರವಾಗಿ ಶ್ರೀಕೃಷ್ಣ ಪೂಜಾ ಕೈಂಕರ್ಯ ನಡೆಸಿ, ಭಕ್ತರ ಸೇವೆಯಲ್ಲಿ ತೊಡಗಿದ್ದ ಶ್ರೀಗಳು, ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಕೃಷ್ಣಮಠವನ್ನೂ ಮುಚ್ಚುವ ನಿರ್ಧಾರ ತೆಗೆದುಕೊಂಡಿದ್ದರು.

ಮಠ ನಿರ್ವಹಣೆ ಕಷ್ಟವಾಗಿದೆ
ಮಾರ್ಚ್ 22 ರಿಂದ ಭಕ್ತರಿಗೆ ಮಠಕ್ಕೆ ಪ್ರವೇಶ ನಿಷೇಧಿಸಲಾಗಿತ್ತು. ಭಕ್ತರೇ ಬಾರದಿದ್ದ ಮೇಲೆ ಮಠ ನಡೆಯುವುದಾದರೂ ಹೇಗೆ? ಸಾಧ್ಯವೇ ಇಲ್ಲ. ಉಡುಪಿಯ ಶ್ರೀ ಕೃಷ್ಣಮಠ ನಡೆಯಬೇಕಿದ್ದರೆ ಭಕ್ತರಿಂದ ಕಾಣಿಕೆ, ದೇಣಿಗೆ ಬರಲೇಬೇಕು. ಆದರೆ ಮಠ ಇನ್ನೂ ಭಕ್ತರಿಗಾಗಿ ತೆರೆದುಕೊಂಡಿಲ್ಲ. ಹೀಗಾಗಿ ಮಠ ನಿರ್ವಹಣೆಯೂ ಕಷ್ಟವಾಗಿದ್ದು, ಪರ್ಯಾಯ ಶ್ರೀಗಳು ಸಾಲಕ್ಕಾಗಿ ಬ್ಯಾಂಕ್ ಕದ ತಟ್ಟಿದ್ದಾರೆ.

ತಿಂಗಳಿಗೆ 40 ಲಕ್ಷ ಖರ್ಚು!
ಪ್ರತೀ ತಿಂಗಳು ಕೃಷ್ಣಮಠದ ನಿರ್ವಹಣೆಗೆ ಮೂವತ್ತರಿಂದ ನಲವತ್ತು ಲಕ್ಷ ರುಪಾಯಿ ಖರ್ಚು ತಗಲುತ್ತದೆ. ಮಠದಲ್ಲಿ ಅಂದಾಜು 300 ರಷ್ಟು ಸಿಬ್ಬಂದಿಗಳಿದ್ದಾರೆ. ಈ ಪೈಕಿ ಕೊರೊನಾ ವೈರಸ್ ಬಳಿಕ ನೂರೈವತ್ತು ಜನ ಮಠದಲ್ಲಿ ಕೆಲಸ ಮಾಡುತ್ತಿದ್ದರೆ, ಅಷ್ಟೇ ಜನ ವರ್ಕ್ ಫ್ರಂ ಹೋಮ್ ನಲ್ಲಿದ್ದಾರೆ. ಅವರೆಲ್ಲರ ಸಂಬಳ, ಊಟ ಇತ್ಯಾದಿ ಖರ್ಚು ದಿನವೊಂದಕ್ಕೆ ಒಂದರಿಂದ ಒಂದೂವರೆ ಲಕ್ಷ ರುಪಾಯಿಯಷ್ಟಾಗುತ್ತದೆ.

ಉದ್ಯಾವರದಲ್ಲಿರುವ ಗೋಶಾಲೆಯ ನಿರ್ವಹಣೆ
ಇದರ ಜೊತೆಗೆ ಗೋಶಾಲೆ ಖರ್ಚು, ಎಣ್ಣೆ ಖರ್ಚು, ಪೂಜಾ ಪರಿಕರಗಳ ಖರ್ಚು, ಕರೆಂಟ್ ಬಿಲ್ ಅದೂ ಇದೂ ಎಲ್ಲ ಖರ್ಚು ಇದರಲ್ಲಿ ಸೇರಿದೆ. ಇದಲ್ಲದೆ ಅದಮಾರು ಮಠಾಧೀಶರ ಪರ್ಯಾಯವಾಗಿರುವುದರಿಂದ ಅದಮಾರು ಮಠ, ಅದಮಾರು ಮೂಲಮಠ, ಮಣಿಪುರ ಮಠ, ಉದ್ಯಾವರದಲ್ಲಿರುವ ಗೋಶಾಲೆಯ ನಿರ್ವಹಣೆಯನ್ನೂ ಮಾಡಬೇಕಿದೆ.

ಮಠದಲ್ಲಿ ಮೀಸಲಿದ್ದ ತಿಜೋರಿ ಕರಗಿದೆ
ಇದನ್ನೆಲ್ಲ ಸರಿದೂಗಿಸಿಕೊಂಡು ಹೋಗಲು ಸದ್ಯದ ಪರಿಸ್ಥಿತಿಯಲ್ಲಿ ಸಾಧ್ಯವಾಗುತ್ತಿಲ್ಲ. ಇನ್ನು ಮಾರ್ಚ್ 22 ರಿಂದ ಇಲ್ಲಿಯತನಕ ಪರ್ಯಾಯ ಶ್ರೀಗಳು ಕೃಷ್ಣಮಠದ ನಿರ್ವಹಣೆ ಮಾಡುತ್ತಾ ಬಂದಿದ್ದಾರೆ. ಆದರೆ ಈಗಾಗಲೇ ಮಠದಲ್ಲಿ ಮೀಸಲಿದ್ದ ತಿಜೋರಿ ಕರಗಿದ್ದು, ಒಂದು ಕೋಟಿ ಸಾಲಕ್ಕಾಗಿ ಬ್ಯಾಂಕ್ ಮೊರೆ ಹೋಗಿದ್ದಾರೆ. ಈ ಪೈಕಿ ಮೊದಲ ಕಂತಿನ ಹದಿನೈದು ಲಕ್ಷ ರೂ. ಸಿಕ್ಕಿದ್ದು, ಉಳಿದ ಹಣಕ್ಕಾಗಿ ಪರ್ಯಾಯ ಶ್ರೀಗಳು ಎದುರು ನೋಡುವಂತಾಗಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications