ಬ್ಯಾಂಕ್ ಖಾತೆಗೆ ಕನ್ನ, ಒಂದೂವರೆ ಕೋಟಿ ಲೂಟಿ
ಮಂಗಳೂರು, ನ.26 : ಕೆನಡಾದಲ್ಲಿರುವ ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಗೆ ಕನ್ನ ಹಾಕಿರುವ ಹ್ಯಾಕರ್ಗಳು ಬರೋಬ್ಬರಿ 1 ಕೋಟಿ 13 ಲಕ್ಷ ರೂಪಾಯಿಗಳನ್ನು ದೋಚಿದ್ದಾರೆ. ಮಣಿಪಾಲದ ಸಿಂಡಿಕೇಟ್ ಬ್ಯಾಂಕ್ನವರು ಈ ಕುರಿತು ಪೊಲೀಸರಿಗೆ ದೂರು ನೀಡಿದ್ದು, ತನಿಖೆ ಆರಂಭವಾಗಿದೆ.
ಲೂವಿಸ್ ಡಿಸೋಜಾ ಎಂಬುವವರು ಕೆನಡಾದಲ್ಲಿ ನೆಲೆಸಿದ್ದಾರೆ. ಅವರು ಮಣಿಪಾಲ್ನ ಸಿಂಡಿಕೇಟ್ ಬ್ಯಾಂಕ್ನಲ್ಲಿ ಖಾತೆ ಹೊಂದಿದ್ದಾರೆ. ಹ್ಯಾಕರ್ಗಳು ಇ ಮೇಲ್ ಮೂಲಕ ಡಿಸೋಜಾ ಅವರ ಬ್ಯಾಂಕ್ ಖಾತೆಯ ವಿವರಗಳನ್ನು ಕದ್ದು, ಹಣವನ್ನು ವಿದೇಶದ ಬ್ಯಾಂಕ್ಗಳಿಗೆ ವರ್ಗಾವಣೆ ಮಾಡುವಂತೆ ಕೋರಿದ್ದರು.[ಟೆಕ್ಕಿ ಖಾತೆಗೆ ಕನ್ನ ಹಾಕಿದ ಹ್ಯಾಕರ್]

ಬ್ಯಾಂಕಿನವರು ಲೂವಿಸ್ ಡಿಸೋಜಾ ಅವರೇ ಮನವಿ ಸಲ್ಲಿಸಿದ್ದಾರೆ ಎಂದು ತಿಳಿದು ಎರಡು ಬಾರಿ ಹಣವನ್ನು ವಿದೇಶದ ಬ್ಯಾಂಕ್ಗಳಿಗೆ ವರ್ಗಾವಣೆ ಮಾಡಿದ್ದಾರೆ. ನ.13ರಂದು ಪುನಃ ಹಣ ವರ್ಗಾವಣೆ ಮನವಿ ಬಂದಾಗ ಅನುಮಾನಗೊಂಡ ಬ್ಯಾಂಕಿನ ಸಿಬ್ಬಂದಿ ಡಿಸೋಜಾ ಅವರನ್ನು ವಿಚಾರಿಸಿದಾಗ, ವರ್ಗಾವಣೆಗೆ ಮನವಿ ಸಲ್ಲಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. [ಮಂಗಳೂರಿಗೆ ಸೈಬರ್ ಕ್ರೈಂ ಠಾಣೆ]
ಘಟನೆಯ ವಿವರ : ಲೂವಿಸ್ ಡಿಸೋಜಾ ಅವರು ಕೆನಡಾದಲ್ಲಿದ್ದು ಮಣಿಪಾಲದ ಸಿಂಡಿಕೇಟ್ ಬ್ಯಾಂಕ್ನಲ್ಲಿ ಎಫ್ಎನ್ಸಿಆರ್ (Foreign Currency Non Resident account) ಖಾತೆ ಹೊಂದಿದ್ದರು. ಈ ಖಾತೆಗೆ ಕಟಪಾಡಿ ಕೆನರಾ ಬ್ಯಾಂಕ್ ಮತ್ತು ಐಸಿಐಸಿಐ ಬ್ಯಾಂಕ್ನಿಂದ 2,23,830 ಡಾಲರ್ ಹಣ ವರ್ಗಾವಣೆಯಾಗಿತ್ತು.
ಹ್ಯಾಕರ್ಗಳು ಈ ಮೇಲ್ ಮೂಲಕ ಲೂವಿಸ್ ಡಿಸೋಜಾ ಅವರ ಬ್ಯಾಂಕ್ ಮಾಹಿತಿಯನ್ನು ಕದ್ದು, ತಮ್ಮ ಖಾತೆಯಲ್ಲಿರುವ ಹಣವನ್ನು ವಿದೇಶದ ಬ್ಯಾಂಕ್ಗೆ ವರ್ಗಾವಣೆ ಮಾಡುವಂತೆ ಮಣಿಪಾಲ್ ಸಿಂಡಿಕೇಟ್ ಬ್ಯಾಂಕ್ಗೆ ಈ ಮೇಲ್ ಕಳಿಸಿದ್ದರು.
ಮನವಿಯ ಮೇರೆಗೆ ಬ್ಯಾಂಕಿನ ಸಿಬ್ಬಂದಿ ಜನವರಿ 15 ರಂದು 1,15,000 ಡಾಲರ್ ಹಣವನ್ನು ದುಬೈ ನ್ಯಾಷನಲ್ ಬ್ಯಾಂಕ್ ಹಾಗೂ ಅಕ್ಟೋಬರ್ 27ರಂದು ಅಬುದಾಬಿ ಇಸ್ಲಾಮಿಕ್ ಬ್ಯಾಂಕ್ಗೆ 70 ಸಾವಿರ ಡಾಲರ್ ಹಣವನ್ನು ವರ್ಗಾವಣೆ ಮಾಡಿದ್ದರು.
ನವೆಂಬರ್ನಲ್ಲಿ ಲೂವಿಸ್ ಡಿಸೋಜಾ ಅವರ ಖಾತೆಗೆ ಕುರ್ಕಾಲ್ ಕಾರ್ಪೋರೇಷನ್ ಬ್ಯಾಂಕ್ನಿಂದ ಹಣ ಬಂದಿತ್ತು. ನ.13ರಂದು ಹ್ಯಾಕರ್ಗಳು ಪುನಃ ಬ್ಯಾಂಕ್ಗೆ ಈ ಮೇಲ್ ಮಾಡಿ, ಹಣವನ್ನು ಹಾಂಕಾಂಗ್ನಲ್ಲಿರುವ ಬ್ಯಾಂಕ್ ಆಫ್ ಚೈನಾಕ್ಕೆ ವರ್ಗಾಯಿಸುವಂತೆ ಕೋರಿದ್ದರು.
ಇದರಿಂದ ಅನುಮಾನಗೊಂಡ ಬ್ಯಾಂಕ್ ಸಿಬ್ಬಂದಿ ಡಿಸೋಜಾ ಅವರನ್ನು ಸಂಪರ್ಕಿಸಿ ಹಣ ವರ್ಗಾವಣೆ ಮಾಡಲು ಮನವಿ ಮಾಡಿರುವ ಬಗ್ಗೆ ಖಚಿತ ಮಾಹಿತಿ ಕೇಳಿದ್ದಾರೆ. ಆಗ ಡಿಸೋಜಾ ಅವರು ಯಾವುದೇ ಮನವಿ ಸಲ್ಲಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇದರಿಂದ ಡಿಸೋಜಾ ಅವರ ವಿವರಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ತಿಳಿದ ಸಿಂಡಿಕೇಟ್ ಬ್ಯಾಂಕ್ ಮಹಾ ಪ್ರಬಂಧಕರು ಮಣಿಪಾಲ್ ಪೊಲೀಸರಿಗೆ ದೂರು ನೀಡಿದ್ದಾರೆ, ತನಿಖೆ ಮುಂದುವರೆದಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications