ತೌಕ್ತೆ ಚಂಡಮಾರುತದಿಂದ ನಷ್ಟ; ಉಡುಪಿಯಲ್ಲಿ ಕೇಂದ್ರ ತಂಡದ ಅಧ್ಯಯನ
ಉಡುಪಿ, ಜೂನ್ 17; ತೌಕ್ತೆ ಚಂಡಮಾರುತದಿಂದ ಆದ ನಷ್ಟದ ಬಗ್ಗೆ ಅಂದಾಜು ನಡೆಸಲು ಕೇಂದ್ರದ ಅಧ್ಯಯನ ತಂಡ ಉಡುಪಿಗೆ ಆಗಮಿಸಿದೆ. ಮೇ ತಿಂಗಳಿನಲ್ಲಿ ತೌಕ್ತೆ ಚಂಡಮಾರುತ ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಅಪಾರ ನಷ್ಟ ಉಂಟು ಮಾಡಿತ್ತು.
ಕೇಂದ್ರದ 5 ಸದಸ್ಯರ ತಂಡ ಉಡುಪಿಗೆ ಆಗಮಿಸಿದೆ. ಕೇಂದ್ರ ಗ್ರಹ ಇಲಾಖೆ ಅಧಿಕಾರಿ ಸುಶೀಲ್ ಪಾಲ್ ನೇತೃತ್ವದಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದಾರೆ. ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್, ಎಸಿ ಕೆ. ರಾಜು, ಎಎಸ್ ಪಿ ಕುಮಾರಚಂದ್ರ ತಂಡದ ಜೊತೆ ಇದ್ದಾರೆ.
ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಗುರುವಾರ ತಂಡ ಭೇಟಿ ನೀಡಿತು. ಬೈಂದೂರು, ಶಿರೂರು, ಉಪ್ಪುಂದ, ಮರವಂತೆ ಮುಂತಾದ ಪ್ರದೇಶಗಳಲ್ಲಿ ಹಾನಿಗೊಳಗಾದ ಸಮುದ್ರ ತೀರ, ಕೃಷಿ ಭೂಮಿ, ಬಿದ್ದ ಮನೆಗಳ ವೀಕ್ಷಣೆ ಮಾಡಿ ಮಾಹಿತಿ ಸಂಗ್ರಹಿತು. ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಸಂಗ್ರಹಿಸಿತು.

ತೌಕ್ತೆ ಚಂಡಮಾರುತದಿಂದ ಕೋಟ್ಯಾಂತರ ರೂಪಾಯಿ ಆಸ್ತಿಪಾಸ್ತಿ ನಷ್ಟವಾಗಿರುವ ಬಗ್ಗೆ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು. ತಂಡ ಜಿಲ್ಲೆಯಾದ್ಯಾಂತ ವಿವಿಧ ಕಡೆ ವೀಕ್ಷಣೆ ಮಾಡಿ ನಷ್ಟದ ಮಾಹಿತಿ ಸಂಗ್ರಹಿಸಿದೆ. ಕೇಂದ್ರ ಗೃಹ ಇಲಾಖೆಗೆ ನಷ್ಟದ ವರದಿಯನ್ನು ಅಧಿಕಾರಿಗಳ ತಂಡ ನೀಡಲಿದೆ.
ಈ ಬಗ್ಗೆ ಮಾಹಿತಿ ನೀಡಿದ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್, "ಈಗಾಗಲೇ ನಮ್ಮ ಜಿಲ್ಲೆಯಲ್ಲಿ ಹಾನಿಗೊಳಗಾದ ವರದಿಯನ್ನು ಸಿದ್ಧಪಡಿಸಲಾಗಿದೆ. ಚಂಡಮಾರುತದಿಂದ ಹಾನಿಗೊಳಗಾದ ಸ್ಥಳಗಳಿಗೆ ಕೇಂದ್ರ ತಂಡ ಭೇಟಿ ನೀಡಿದೆ. ಕೇಂದ್ರದ ಅಧ್ಯಯನ ತಂಡಕ್ಕೆ ನಷ್ಟದ ಅಂದಾಜಿನ ಕುರಿತು ಮಾಹಿತಿ ನೀಡಲಾಗಿದ್ದು, ಕೇಂದ್ರದ ನೆರವು ಆಧರಿಸಿ ಹಾನಿಗೊಳಗಾದ ಪ್ರದೇಶಗಳ ಪುನರ್ ನಿರ್ಮಾಣ ಮಾಡಲಿದ್ದೇವೆ" ಎಂದರು.
-
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications