ಉಡುಪಿ; ಶ್ರೀ ಕೃಷ್ಣನ ದರ್ಶನಕ್ಕೆ ಇನ್ನೂ ಒಂದು ವಾರ ಕಾಯಬೇಕು
ಉಡುಪಿ, ಜುಲೈ 04; ಕರ್ನಾಟಕ ಸರ್ಕಾರ ಜುಲೈ 5ರಿಂದ ಅನ್ವಯವಾಗುವಂತೆ ಅನ್ಲಾಕ್ ಮಾರ್ಗಸೂಚಿ ಪ್ರಕಟಿಸಿದೆ. ದೇವಾಲಯ ಸೇರಿದಂತೆ ಎಲ್ಲಾ ಚಟುವಟಿಕೆಗಳಿಗೆ ಸರ್ಕಾರ ಹಸಿರು ನಿಶಾನೆ ನೀಡಿದೆ. ಅದರಲ್ಲೂ ಭಕ್ತರಿಗಂತೂ ದೇವಾಲಯದ ಬಾಗಿಲು ತೆರೆದಿರೋದು ಖುಷಿಯನ್ನು ಇಮ್ಮಡಿಗೊಳಿಸಿದೆ. ಆದರೆ ಉಡುಪಿಯ ಶ್ರೀ ಕೃಷ್ಣನನ್ನು ಕಾಣಲು ಇನ್ನೂ ಒಂದು ವಾರ ಕಾಯಲೇಬೇಕಿದೆ.
ಉಡುಪಿಯ ಕೃಷ್ಣಮಠ ಇನ್ನೂ ಒಂದು ವಾರಗಳ ಕಾಲ ತೆರೆಯುವುದಿಲ್ಲ ಎಂದು ಪರ್ಯಾಯ ಅದಮಾರು ಈಶಪ್ರೀಯ ತೀರ್ಥ ಸ್ವಾಮಿಜಿ ಹೇಳಿದ್ದಾರೆ. ಒಂದುವಾರ ಕೃಷ್ಣ ಮಠ ಭಕ್ತರಿಗೆ ತೆರೆಯೋದಿಲ್ಲ. ವಾರದ ನಂತರ ಭಕ್ತರಿಗೆ ದೇವರ ದರ್ಶನ ವ್ಯವಸ್ಥೆ ಮಾಡುತ್ತೇವೆ. ರಾಜ್ಯದ ಚಿತ್ರಣ ನೋಡಿಕೊಂಡು ಆನಂತರ ನಿರ್ಧರಿಸುತ್ತೇವೆ ಎಂದು ಸ್ವಾಮೀಜಿ ಹೇಳಿದ್ದಾರೆ.

ಅನ್ಲಾಕ್ 3.0ಗೆ ಸರ್ಕಾರ ಹಸಿರು ನಿಶಾನೆ ತೋರಿಸುತ್ತಿದ್ದಂತೆಯೇ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ದೇವಾಲಯಗಳಲ್ಲೂ ಶುಚಿಕಾರ್ಯ ಆರಂಭವಾಗಿದೆ. ಆದರೆ ಉಡುಪಿಯ ಶ್ರೀ ಕೃಷ್ಣ ಮಾತ್ರ ಒಂದು ವಾರಗಳ ಕಾಲ ತಡವಾಗಿ ದರ್ಶನ ನೀಡೋದು ಭಕ್ತರಿಗೆ ನಿರಾಸೆ ಮೂಡಿಸಿದೆ.
ಸರ್ಕಾರ ದೇವಾಲಯಗಳ ಬಾಗಿಲು ತೆರೆಯಲು ಅವಕಾಶ ನೀಡಿದೆ. ಆದರೆ ಸಾಮಾಜಿಕ, ಧಾರ್ಮಿಕ, ಮತ್ತು ರಾಜಕೀಯ ಸಭೆ ಸಮಾರಂಭಗಳಿಗೆ, ಪ್ರತಿಭಟನೆಗಳಿಗೆ ಹಾಗೂ ಇತರೆ ಸಮಾರಂಭಗಳಿಗೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದೆ.
ಅನ್ಲಾಕ್ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, "ಜಿಲ್ಲೆಯಲ್ಲಿರುವ ಪರಿಸ್ಥಿತಿಗನುಗುಣವಾಗಿ ಆಯಾಯ ಜಿಲ್ಲೆಯ ಜಿಲ್ಲಾಡಳಿತಗಳು ಇನ್ನೂ ಹೆಚ್ಚಿನ ನಿರ್ಬಂಧಗಳು ಅವಶ್ಯವಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ತೀರ್ಮಾನ ತೆಗೆದುಕೊಳ್ಳಲು ಸೂಚಿಸಿದೆ" ಎಂದು ಹೇಳಿದ್ದಾರೆ.
-
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
ಕೃಷಿಕರಿಗೆ ವರದಾನವಾದ ಶೈಲಜಾ ವಿಠಲ್ ಆವಿಷ್ಕರಿಸಿದ 35 ಕೃಷಿ ಯಂತ್ರೋಪಕರಣ, ಸಣ್ಣ ರೈತರಿಗೆ ದೊಡ್ಡ ಲಾಭ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್












Click it and Unblock the Notifications