ಪಂಕ್ತಿಭೇದ, ಅಸ್ಪೃಶ್ಯತೆ ಆಚರಣೆ ವಿರುದ್ಧ ಧ್ವನಿ ಎತ್ತಿದ ಧರ್ಮ ಸಂಸತ್
ಉಡುಪಿ, ನವೆಂಬರ್ 25: ಸರಕಾರದ ಹಿಡಿತದಲ್ಲಿರುವ ದೇವಸ್ಥಾನಗಳು ಹಿಂದೂಗಳ ಕೈಗೆ ಬರಬೇಕು. ಸಂವಿಧಾನದ ಆಶಯದಂತೆ ಅಸ್ಪೃಶ್ಯತೆ ನಿರ್ಮೂಲನವಾಗಬೇಕು. ಹೀಗೆ ಹಲವು ಸಂತರ ವಾದ ಮಂಡನೆ ಧರ್ಮ ಸಂಸತ್ ನಲ್ಲಿ ಇಂದು ನಡೆಯಿತು.
ಉಡುಪಿಯ ರಾಯಲ್ ಗಾರ್ಡನ್ ಮೈದಾನದಲ್ಲಿ ನಡೆಯುತ್ತಿರುವ ಧರ್ಮ ಸಂಸತ್ ನ ಎರಡನೇ ದಿನ ಸಂತರಿಂದ ಬಂದಿರುವ ಆಗ್ರಹಗಳಿವು. ಇಂದು ನಡೆದ ಸಂತರ ಸಮಾಗಮದಲ್ಲಿ ಚರ್ಚಾ ಗೋಷ್ಠಿಗಳು ನಡೆದವು, ಇದರಲ್ಲಿ ಸಂತರ ವಾದ ಮಂಡನೆಯ ಪ್ರಮುಖ ಅಂಶಗಳು ಇಂತಿವೆ.

* ಮಂದಿರಕ್ಕೆ ಎಲ್ಲರಿಗೂ ಪ್ರವೇಶವಿರಬೇಕು
* ಪಂಕ್ತಿಬೇಧವಿಲ್ಲದೇ ಭೋಜನ ವ್ಯವಸ್ಥೆ ಆಗಬೇಕು
* ಅಸ್ಪೃಶ್ಯತೆಯ ಆಚರಣೆ ಹಿಂದೂಗಳಲ್ಲಿ ಇರಬಾರದು
ಧರ್ಮ ಸಂಸತ್ ನ ದಿಕ್ಸೂಚಿ ಭಾಷಣ ಮಾಡಿದ ವಿಹಿಂಪದ ಅಂತರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ಬಾಯ್ ತೊಗಾಡಿಯಾ, ವೇದದಲ್ಲಿ ಅಸ್ಪೃಶ್ಯತೆಗೆ ಅವಕಾಶ ಇಲ್ಲ. ಹಿಂದೂ ಧರ್ಮದಲ್ಲಿ ಅಸ್ಪೃಶ್ಯತೆ ಇರಬಾರದು. ಎಲ್ಲರಿಗೂ ಮಂದಿರಕ್ಕೆ ಮುಕ್ತ ಪ್ರವೇಶ ನೀಡಬೇಕು. ಅಸ್ಪೃಶ್ಯತೆ ಮುಕ್ತ ಭಾರತ ನಿರ್ಮಾಣ ನಮ್ಮ ಗುರಿ," ಎಂದು ಹೇಳಿದರು.

"ಸರಕಾರದ ವಶದಲ್ಲಿರುವ ದೇವಸ್ಥಾನಗಳು ಹಿಂದೂಗಳ ಕೈಗೆ ಬರಬೇಕು," ಎಂದು ಧರ್ಮ ಸಂಸತ್ ನ ಚರ್ಚಾಗೋಷ್ಟಿಯಲ್ಲಿ ಸಂತರು ಆಗ್ರಹ ವ್ಯಕ್ತಪಡಿಸಿದ್ದಾರೆ. ಉತ್ತರ ಭಾರತ ಹಾಗೂ ದಕ್ಷಿಣ ಭಾರತ ಅನೇಕ ಸಂತರು ಕೂಡಾ ದೇವಸ್ಥಾನದ ಸರಕಾರೀಕರಣದ ಬಗ್ಗೆ ಚರ್ಚೆ ನಡೆಸಿದರು.
ಗೋಷ್ಠಿಯಲ್ಲಿ ನಡೆದ ಪ್ರಮುಖ ಚರ್ಚೆಯ ಅಂಶಗಳು ಹೀಗಿವೆ,
* ದೇವಸ್ಥಾನಗಳನ್ನು ಸರಕಾರೀಕರಣ ಮಾಡುವುದಕ್ಕೆ ವಿರೋಧ
* ದೇವಸ್ಥಾನಗಳು ಅದೇ ಧರ್ಮದ ವಶದಲ್ಲಿರಬೇಕು
* ದೇವಾಲಯಗಳ ಆಡಳಿತಕ್ಕೆ ಸ್ವಾಯತ್ತ ಮಂಡಳಿ ರಚನೆ ಮಾಡಬೇಕು.
* ಮಸೀದಿ-ಚರ್ಚ್ ಗಳ ಮೇಲಿನ ಸರಕಾರದ ಹಸ್ತಕ್ಷೇಪ ಯಾಕಿಲ್ಲ?
* ದೇವಸ್ಥಾನದ ಹಣ ಇತರ ಸರಕಾರದ ಖಜಾನೆ ಹೋಗುವುದಕ್ಕೆ ವಿರೋಧ
ಗೋಷ್ಠಿಯಲ್ಲಿ ಸರಕಾರದ ದೇವಸ್ಥಾನದ ಮೇಲಿನ ಹಸ್ತಕ್ಷೇಪದ ಬಗೆಗೆ ಸಾಕಷ್ಟು ಚರ್ಚೆಗಳು ನಡೆದವು.ಅಯೋಧ್ಯೆ ದಿಗಂಬರ ಮಠದ ಸಂತ ಸುರೇಶ್ ದಾಸ್ ಜೀ, ಸ್ವರ್ಣವಲ್ಲಿ ಗಂಗಾಧೇಶ್ವರ ಸ್ವಾಮೀಜಿ, ವಿಹಿಂಪದ ಅಂತರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ಭಾಯ್ ತೊಗಾಡಿಯಾ ಸೇರಿದಂತೆ ಅನೇಕ ಸಂತರು ದೇವಸ್ಥಾನದ ಸರಕಾರೀಕರಣದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಇದರ ಜತೆಗೆ ನಿನ್ನೆಯಂತೆ ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣ, ಧರ್ಮವನ್ನು ಬಿಟ್ಟು ಹೋದವರನ್ನು ಮತ್ತೆ ಮಾತೃ ಸಂಸ್ಥೆಗೆ ಕರೆಸಿಕೊಳ್ಳುವ ಬಗ್ಗೆ, ಜಾತಿ ವ್ಯವಸ್ಥೆ ಬಗ್ಗೆಯೂ ಸಂಸತ್ ನಲ್ಲಿ ಚರ್ಚೆ ನಡೆಯಿತು.
ನಾಳೆ ಧರ್ಮ ಸಂಸತ್ ನ ಕೊನೆಯ ದಿನವಾಗಿದ್ದು ಮತಾಂತರದ ವಿಚಾರದ ಬಗ್ಗೆ ಚರ್ಚಾಗೋಷ್ಠಿ ನಡೆಯಲಿದೆ. ಬಳಿಕ ವಿರಾಟ್ ಹಿಂದೂ ಸಮಾಜೋತ್ಸವ ನಡೆಯಲಿದೆ.
ಇಂದಿನ ವಿಷಯ ಮಂಡನೆಗಳ ಬಗ್ಗೆ ನಾಳೆ ನಿರ್ಣಯ ತೆಗೆದುಕೊಳ್ಳುವ ಸಾಧ್ಯತೆ ಇದ್ದು ಕೊನೆಯ ದಿನ ಕುತೂಹಲ ಮೂಡಿಸಿದೆ. ವಿರಾಟ್ ಹಿಂದೂ ಸಮಾಜೋತ್ಸವದಲ್ಲಿ ಧರ್ಮ ಸಂಸತ್ ನ ನಿರ್ಣಯಗಳು ಮಂಡನೆ ಯಾಗಲಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications