ಹಾಲಾಡಿ ಶ್ರೀನಿವಾಸ್ ಶೆಟ್ಟಿ ಮಾತಲ್ಲಿ ಸ್ಪಷ್ಟವಾದ ಬಿಜೆಪಿಯೊಳಗಿನ ಅಸಮಾಧಾನ
ಉಡುಪಿ, ಆಗಸ್ಟ್ 20: ಐದು ಬಾರಿಯ ಶಾಸಕ, ಉಡುಪಿ ಜಿಲ್ಲೆಯ ಕುಂದಾಪುರ ಕ್ಷೇತ್ರದ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರಿಗೆ ಸಚಿವ ಸ್ಥಾನ ತಪ್ಪಿರುವುದು ಅವರ ಬೆಂಬಲಿಗರಿಗೆ ಬೇಸರ ತಂದಿದೆ. ಮಂಗಳವಾರ ಸಂಪುಟ ರಚನೆಗೂ ಗೈರಾಗಿರುವ ಶ್ರೀನಿವಾಸ್ ಶೆಟ್ಟಿ ಅವರು ಹಾಲಾಡಿಯ ತಮ್ಮ ಕಚೇರಿಯಲ್ಲಿ ಬೆಂಬಲಿಗರ ಜೊತೆ ಸಮಾಲೋಚನೆ ನಡೆಸಿದ್ದಾರೆ.
ಕಳೆದ ಬಾರಿ ಸಚಿವ ಸಂಪುಟದಲ್ಲಿ ಸ್ಥಾನ ಕೈತಪ್ಪಿ, ಪಕ್ಷಕ್ಕೇ ಗುಡ್ ಬೈ ಹೇಳಿ, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆ ಬಳಿಕ ಯಡಿಯೂರಪ್ಪನವರು ಮನವೊಲಿಕೆ ಮಾಡಿದ್ದರಿಂದ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಮತ್ತೆ ಬಿಜೆಪಿಗೆ ಸೇರಿ, ಪಕ್ಷದ ಟಿಕೆಟ್ ನಲ್ಲಿ ಗೆದ್ದಿದ್ದರು.
ಸಚಿವ ಸಂಪುಟ ರಚನೆ ವೇಳೆ ಜಿಲ್ಲೆಯ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಸಚಿವ ಸ್ಥಾನ ಸಿಕ್ಕಿ, ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರಿಗೆ ಕೈ ತಪ್ಪಿರುವುದರಿಂದ ಬೆಂಬಲಿಗರು ತೀವ್ರ ನಿರಾಸೆಗೊಂಡಿದ್ದಾರೆ.

ಈ ಸಂಬಂಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ ಕುಂದಾಪುರದ ಬಂಟ ಸಮುದಾಯದ ನಾಯಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ, "ಪ್ರಮಾಣವಚನಕ್ಕೆ ನನಗೆ ಆಹ್ವಾನ ಇರಲಿಲ್ಲ. ಲಾಬಿ ಮಾಡಿ ಸಚಿವ ಸ್ಥಾನ ಪಡೆಯುವುದು ಗೊತ್ತಿಲ್ಲ. ಗುಂಪುಗಾರಿಕೆ, ವಾಮಮಾರ್ಗ ಮಾಡಲ್ಲ. ಜಾತಿ ರಾಜಕಾರಣ ಮಾಡಿ ನನಗೆ ಗೊತ್ತಿಲ್ಲ" ಎಂದು ಪ್ರತಿಕ್ರಿಯೆ ನೀಡಿದ್ದಾರೆ.
"ಎಲ್ಲಾ ಚುನಾವಣೆಗಳಲ್ಲೂ ಬಿಜೆಪಿ ಗೆಲುವಿಗೆ ಶ್ರಮಿಸಿದ್ದೇನೆ. ಪಕ್ಷನಿಷ್ಠೆ ತೋರಿದ್ದೇನೆ. ಪಕ್ಷೇತರನಾಗಿದ್ದಾಗಲೂ ಬಿಜೆಪಿಯನ್ನು ಬೆಂಬಲಿಸಿದ್ದೇನೆ. ಸಚಿವ ಸ್ಥಾನ ಯಾಕೆ ಸಿಗಲಿಲ್ಲವೆಂದು ನನಗೆ ಗೊತ್ತಿಲ್ಲ. ಮಾಧ್ಯಮದವರು ಬಿಜೆಪಿಯ ಪ್ರಮುಖರನ್ನೇ ಕೇಳಿ" ಎಂದರು.
"ಸಚಿವ ಸ್ಥಾನ ವಂಚಿತರು ನನ್ನನ್ನು ಸಭೆಗೆ ಕರೆದಿದ್ದರು. ಬೆಂಗಳೂರಿಗೆ ಬರುವಂತೆ ನನ್ನನ್ನು ಕೇಳಿಕೊಂಡಿದ್ದರು. ನಾನು ಎಲ್ಲೂ ಹೋಗಿಲ್ಲ, ಕ್ಷೇತ್ರದಲ್ಲೇ ಇದ್ದೇನೆ" ಎಂದು ಹಾಲಾಡಿಯಲ್ಲಿ ಶಾಸಕ ಶ್ರೀನಿವಾಸ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ.
-
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications