ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ; ನಿರಂಜನ್ ಭಟ್ ಗೆ ಮಧ್ಯಂತರ ಜಾಮೀನು

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಜೂನ್ 24: ಬಹುಕೋಟಿ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಜ್ಯೋತಿಷಿ ನಿರಂಜನ್ ಭಟ್ ಗೆ ಉಡುಪಿ ಜಿಲ್ಲಾ ನ್ಯಾಯಾಲಯ ಜುಲೈ 7 ರವರೆಗೆ ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿದೆ.

Recommended Video

SSLC Exam : ಪರೀಕ್ಷೆ ಬರೆಯುವ ಮುನ್ನ‌ ವಿದ್ಯಾರ್ಥಿಗಳು ಈ ನಿಯಮಗಳನ್ನು ಪಾಲಿಸಲೇಬೇಕು| Precautions for SSLC Exam

ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಮೂರನೇ ಆರೋಪಿ ನಿರಂಜನ್ ಭಟ್ ತಂದೆ ಮೃತಪಟ್ಟಿದ್ದು, ಈ ಕಾರಣಕ್ಕೆ ಮಧ್ಯಂತರ ಜಾಮೀನು ನೀಡಲಾಗಿದೆ. ನಿರಂಜನ್ ತಂದೆ ಹಾಗೂ ಇದೇ ಪ್ರಕರಣದ ನಾಲ್ಕನೇ ಆರೋಪಿಯಾಗಿದ್ದ ಶ್ರೀನಿವಾಸ್ ಭಟ್ (65) ಅವರು ಎರಡು ದಿನಗಳ ಹಿಂದೆ ಅನಾರೋಗ್ಯದಿಂದ ಮೃತಪಟ್ಟಿದ್ದರು.

ಭಾಸ್ಕರ ಶೆಟ್ಟಿ ಹತ್ಯೆ : ನಿರಂಜನ್ ಭಟ್ ಜಾಮೀನು ಅರ್ಜಿ ಸುಪ್ರೀಂನಲ್ಲಿ ವಜಾಭಾಸ್ಕರ ಶೆಟ್ಟಿ ಹತ್ಯೆ : ನಿರಂಜನ್ ಭಟ್ ಜಾಮೀನು ಅರ್ಜಿ ಸುಪ್ರೀಂನಲ್ಲಿ ವಜಾ

ತಂದೆಯ ಉತ್ತರಕ್ರಿಯೆಯ ಕಾರ್ಯವನ್ನು ನೆರವೇರಿಸಲು ಜಾಮೀನು ನೀಡಬೇಕೆಂದು ನಿರಂಜನ್ ಪರ ವಕೀಲರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದೀಗ ನ್ಯಾಯಾಲಯ 5 ಲಕ್ಷ ರೂಪಾಯಿ ಬಾಂಡ್ ಪಡೆದು ಏಳು ದಿನಗಳ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಪ್ರಕರಣ ನಾಲ್ಕನೇ ಆರೋಪಿಯಾಗಿದ್ದ ಶ್ರೀನಿವಾಸ್ ಭಟ್ ಹಾಗೂ ರಾಘವೇಂದ್ರ ಅವರನ್ನು ಬಿಡುಗಡೆ ಮಾಡಲಾಗಿತ್ತು. ಕಳೆದ ನಾಲ್ಕು ವರ್ಷಗಳಿಂದ ನಿರಂಜನ್ ಜೈಲಿನಲ್ಲಿದ್ದಾರೆ.

Udupi District Court Granted Interim Bail To Niranjan Bhat In Bhaskar Shetty Murder Case

ಜುಲೈ 18, 2016ರಲ್ಲಿ ಉಡುಪಿಯ ಬಹುಕೋಟಿ ಉದ್ಯಮಿ ಭಾಸ್ಕರ ಶೆಟ್ಟಿಯನ್ನು ತಾಯಿ, ಮಗ ಸೇರಿ ಕೊಲೆ ಮಾಡಿದ ಪ್ರಕರಣ ಇದಾಗಿತ್ತು. ಈ ಪ್ರಕರಣದಲ್ಲಿ ಆರೋಪಿ ನಿರಂಜನ ತನ್ನ ಮನೆಯ ಹೋಮಕುಂಡದಲ್ಲಿ ಮೃತದೇಹವನ್ನು ಸುಡಲು ಸಹಾಯ ಮಾಡಿದ್ದ.

English summary
Udupi district court has granted conditional Interim bail till July 7 for main accused Niranjan Bhat in the murder case of businessman Bhaskar Shetty
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X