ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ; ನಿರಂಜನ್ ಭಟ್ ಗೆ ಮಧ್ಯಂತರ ಜಾಮೀನು
ಉಡುಪಿ, ಜೂನ್ 24: ಬಹುಕೋಟಿ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಜ್ಯೋತಿಷಿ ನಿರಂಜನ್ ಭಟ್ ಗೆ ಉಡುಪಿ ಜಿಲ್ಲಾ ನ್ಯಾಯಾಲಯ ಜುಲೈ 7 ರವರೆಗೆ ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿದೆ.
Recommended Video
ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಮೂರನೇ ಆರೋಪಿ ನಿರಂಜನ್ ಭಟ್ ತಂದೆ ಮೃತಪಟ್ಟಿದ್ದು, ಈ ಕಾರಣಕ್ಕೆ ಮಧ್ಯಂತರ ಜಾಮೀನು ನೀಡಲಾಗಿದೆ. ನಿರಂಜನ್ ತಂದೆ ಹಾಗೂ ಇದೇ ಪ್ರಕರಣದ ನಾಲ್ಕನೇ ಆರೋಪಿಯಾಗಿದ್ದ ಶ್ರೀನಿವಾಸ್ ಭಟ್ (65) ಅವರು ಎರಡು ದಿನಗಳ ಹಿಂದೆ ಅನಾರೋಗ್ಯದಿಂದ ಮೃತಪಟ್ಟಿದ್ದರು.
ಭಾಸ್ಕರ ಶೆಟ್ಟಿ ಹತ್ಯೆ : ನಿರಂಜನ್ ಭಟ್ ಜಾಮೀನು ಅರ್ಜಿ ಸುಪ್ರೀಂನಲ್ಲಿ ವಜಾ
ತಂದೆಯ ಉತ್ತರಕ್ರಿಯೆಯ ಕಾರ್ಯವನ್ನು ನೆರವೇರಿಸಲು ಜಾಮೀನು ನೀಡಬೇಕೆಂದು ನಿರಂಜನ್ ಪರ ವಕೀಲರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದೀಗ ನ್ಯಾಯಾಲಯ 5 ಲಕ್ಷ ರೂಪಾಯಿ ಬಾಂಡ್ ಪಡೆದು ಏಳು ದಿನಗಳ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಪ್ರಕರಣ ನಾಲ್ಕನೇ ಆರೋಪಿಯಾಗಿದ್ದ ಶ್ರೀನಿವಾಸ್ ಭಟ್ ಹಾಗೂ ರಾಘವೇಂದ್ರ ಅವರನ್ನು ಬಿಡುಗಡೆ ಮಾಡಲಾಗಿತ್ತು. ಕಳೆದ ನಾಲ್ಕು ವರ್ಷಗಳಿಂದ ನಿರಂಜನ್ ಜೈಲಿನಲ್ಲಿದ್ದಾರೆ.
ಜುಲೈ 18, 2016ರಲ್ಲಿ ಉಡುಪಿಯ ಬಹುಕೋಟಿ ಉದ್ಯಮಿ ಭಾಸ್ಕರ ಶೆಟ್ಟಿಯನ್ನು ತಾಯಿ, ಮಗ ಸೇರಿ ಕೊಲೆ ಮಾಡಿದ ಪ್ರಕರಣ ಇದಾಗಿತ್ತು. ಈ ಪ್ರಕರಣದಲ್ಲಿ ಆರೋಪಿ ನಿರಂಜನ ತನ್ನ ಮನೆಯ ಹೋಮಕುಂಡದಲ್ಲಿ ಮೃತದೇಹವನ್ನು ಸುಡಲು ಸಹಾಯ ಮಾಡಿದ್ದ.