ದೇವೇಗೌಡರ ಹೊಗಳಿದ ಮೋದಿ: ಡಿಕೆಶಿ ಹೇಳಿದ್ದೇನು?
ಉಡುಪಿ, ಮೇ 02: ಮೋದಿ ಅವರು ದೇವೇಗೌಡ ಅವರನ್ನು ಹೊಗಳಿದ್ದಾರೆ ಬೇಕಿದ್ದರೆ ಅಮಿತ್ ಶಾ ಅವರು ಕೂಡಾ ಹೊಗಳಲಿ ಆದರೆ ದೇವೇಗೌಡ ಅವರು ಬಿಜೆಪಿ ಜೊತೆ ಮೈತ್ರಿ ಇಲ್ಲ ಎಂಬ ಮನದ ಮಾತನ್ನು ಹೇಳಿಬಿಟ್ಟಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದ ಡಿ.ಕೆ.ಶಿವಕುಮಾರ್ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ದೇವೇಗೌಡ ಅವರು ಮೊದಲಿನಿಂದಲೂ ಬಿಜೆಪಿಯೊಂದಿಗೆ ಅಂತರವನ್ನು ಕಾಯ್ದುಕೊಂಡು ಬಂದಿದ್ದಾರೆ' ಎಂದರು.
ಮೋದಿ ಮಾತ್ರವೇ ಅಲ್ಲ ಅಮಿತ್ ಶಾ ಅವರು ಕೂಡಾ ಬೇಕಾದರೆ ದೇವೇಗೌಡ ಅವರನ್ನು ಹೊಗಳಲಿ ಅದು ಅವರ ಅಂತರಂಗದ ಇಷ್ಟ ಬಹಿರಂಗ ವಿಚಾರ ಮಾತ್ರ ಲೆಕ್ಕಕ್ಕೆ ಇಟ್ಟುಕೊಳ್ಳಬೇಕು, ಅಂತರಂಗದ ವಿಚಾರ ಗೌಪ್ಯವಾಗಿಯೇ ಇರುತ್ತದೆ' ಎಂದು ಬಿಜೆಪಿಯ ಹೊಗಳು ಸಂಸ್ಕೃತಿ ಬಗ್ಗೆ ಅನುಮಾನ ವ್ಯಕ್ತಪಡಿಸಿದರು.

ಕೃಷ್ಣ ಮಠಕ್ಕೆ ಭೇಟಿ ನೀಡಿದುದರ ಬಗ್ಗೆ ಮಾತನಾಡಿದ ಡಿಕೆ ಶಿವಕುಮಾರ್, ವೈಯಕ್ತಿಕವಾಗಿ, ಪಕ್ಷದ ಪರವಾಗಿ, ಸರ್ಕಾರದ ಪರವಾಗಿ ಮಠಕ್ಕೆ ಬಂದಿದ್ದೇನೆ. ಕೃಷ್ಣ ಅದ್ಬುತ ರಾಜಕಾರಣಿ, ಆತ ನನಗೆ ಆದರ್ಶ, ನನ್ನ ಮತ್ತು ಆತನ ನಡುವಿನ ವ್ಯವಹಾರ ನಮ್ಮಿಬ್ಬರಿಗೆ ಮಾತ್ರವೇ ಗೊತ್ತಿರುವಂತಹದು ಎಂದು ಮಾರ್ಮಿಕವಾಗಿ ಮಾತನಾಡಿದರು.
ಈ ಬಾರಿ ಧರ್ಮಕ್ಕೂ ಅಧರ್ಮಕ್ಕೂ ಯುದ್ಧ ನಡೆದಿದೆ, ನಮ್ಮದು ಧರ್ಮ ಬಿಜೆಪಿಯದ್ದು ಅಧರ್ಮ ಎಂದ ಡಿಕೆಶಿವಕುಮಾರ್, ಸಿದ್ದರಾಮಯ್ಯ ಅವರು ಮಠಕ್ಕೆ ಬಂದಿಲ್ಲ ಎನ್ನುವುದು ನಿಜ ಅದು ಅವರ ವೈಯಕ್ತಿಕ ನಂಬಿಕೆಯ ವಿಚಾರ ಆದರೆ ಅವರು ಮುಜರಾಯಿ ಇಲಾಖೆಯನ್ನು ಬಲಿಷ್ಠ ಮಾಡಿದ್ದಾರೆ ಎಂದರು.
ಈ ಬಾರಿ ಕಾಂಗ್ರೆಸ್ 130 ಸೀಟುಗಳನ್ನು ಅನಾಯಾಸವಾಗಿ ಗೆಲ್ಲಲಿದೆ ಎಂಬ ಭರವಸೆ ವ್ಯಕ್ತಪಡಿಸಿದ ಅವರು, ಬಿಜೆಪಿ ನಿರಂತರವಾಗಿ ಕಾಂಗ್ರೆಸ್ಸಿಗರ ಮೇಲೆ ಐಟಿ ದಾಳಿ ಮಾಡಿ ಅವರನ್ನು ಮಟ್ಟ ಹಾಕುವ ಪ್ರಯತ್ನ ಮಾಡುತ್ತಿದೆ ಎಂದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications