ದೇವೇಗೌಡರ ಹೊಗಳಿದ ಮೋದಿ: ಡಿಕೆಶಿ ಹೇಳಿದ್ದೇನು?
ಉಡುಪಿ, ಮೇ 02: ಮೋದಿ ಅವರು ದೇವೇಗೌಡ ಅವರನ್ನು ಹೊಗಳಿದ್ದಾರೆ ಬೇಕಿದ್ದರೆ ಅಮಿತ್ ಶಾ ಅವರು ಕೂಡಾ ಹೊಗಳಲಿ ಆದರೆ ದೇವೇಗೌಡ ಅವರು ಬಿಜೆಪಿ ಜೊತೆ ಮೈತ್ರಿ ಇಲ್ಲ ಎಂಬ ಮನದ ಮಾತನ್ನು ಹೇಳಿಬಿಟ್ಟಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದ ಡಿ.ಕೆ.ಶಿವಕುಮಾರ್ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ದೇವೇಗೌಡ ಅವರು ಮೊದಲಿನಿಂದಲೂ ಬಿಜೆಪಿಯೊಂದಿಗೆ ಅಂತರವನ್ನು ಕಾಯ್ದುಕೊಂಡು ಬಂದಿದ್ದಾರೆ' ಎಂದರು.
ಮೋದಿ ಮಾತ್ರವೇ ಅಲ್ಲ ಅಮಿತ್ ಶಾ ಅವರು ಕೂಡಾ ಬೇಕಾದರೆ ದೇವೇಗೌಡ ಅವರನ್ನು ಹೊಗಳಲಿ ಅದು ಅವರ ಅಂತರಂಗದ ಇಷ್ಟ ಬಹಿರಂಗ ವಿಚಾರ ಮಾತ್ರ ಲೆಕ್ಕಕ್ಕೆ ಇಟ್ಟುಕೊಳ್ಳಬೇಕು, ಅಂತರಂಗದ ವಿಚಾರ ಗೌಪ್ಯವಾಗಿಯೇ ಇರುತ್ತದೆ' ಎಂದು ಬಿಜೆಪಿಯ ಹೊಗಳು ಸಂಸ್ಕೃತಿ ಬಗ್ಗೆ ಅನುಮಾನ ವ್ಯಕ್ತಪಡಿಸಿದರು.

ಕೃಷ್ಣ ಮಠಕ್ಕೆ ಭೇಟಿ ನೀಡಿದುದರ ಬಗ್ಗೆ ಮಾತನಾಡಿದ ಡಿಕೆ ಶಿವಕುಮಾರ್, ವೈಯಕ್ತಿಕವಾಗಿ, ಪಕ್ಷದ ಪರವಾಗಿ, ಸರ್ಕಾರದ ಪರವಾಗಿ ಮಠಕ್ಕೆ ಬಂದಿದ್ದೇನೆ. ಕೃಷ್ಣ ಅದ್ಬುತ ರಾಜಕಾರಣಿ, ಆತ ನನಗೆ ಆದರ್ಶ, ನನ್ನ ಮತ್ತು ಆತನ ನಡುವಿನ ವ್ಯವಹಾರ ನಮ್ಮಿಬ್ಬರಿಗೆ ಮಾತ್ರವೇ ಗೊತ್ತಿರುವಂತಹದು ಎಂದು ಮಾರ್ಮಿಕವಾಗಿ ಮಾತನಾಡಿದರು.
ಈ ಬಾರಿ ಧರ್ಮಕ್ಕೂ ಅಧರ್ಮಕ್ಕೂ ಯುದ್ಧ ನಡೆದಿದೆ, ನಮ್ಮದು ಧರ್ಮ ಬಿಜೆಪಿಯದ್ದು ಅಧರ್ಮ ಎಂದ ಡಿಕೆಶಿವಕುಮಾರ್, ಸಿದ್ದರಾಮಯ್ಯ ಅವರು ಮಠಕ್ಕೆ ಬಂದಿಲ್ಲ ಎನ್ನುವುದು ನಿಜ ಅದು ಅವರ ವೈಯಕ್ತಿಕ ನಂಬಿಕೆಯ ವಿಚಾರ ಆದರೆ ಅವರು ಮುಜರಾಯಿ ಇಲಾಖೆಯನ್ನು ಬಲಿಷ್ಠ ಮಾಡಿದ್ದಾರೆ ಎಂದರು.
ಈ ಬಾರಿ ಕಾಂಗ್ರೆಸ್ 130 ಸೀಟುಗಳನ್ನು ಅನಾಯಾಸವಾಗಿ ಗೆಲ್ಲಲಿದೆ ಎಂಬ ಭರವಸೆ ವ್ಯಕ್ತಪಡಿಸಿದ ಅವರು, ಬಿಜೆಪಿ ನಿರಂತರವಾಗಿ ಕಾಂಗ್ರೆಸ್ಸಿಗರ ಮೇಲೆ ಐಟಿ ದಾಳಿ ಮಾಡಿ ಅವರನ್ನು ಮಟ್ಟ ಹಾಕುವ ಪ್ರಯತ್ನ ಮಾಡುತ್ತಿದೆ ಎಂದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications