ಅಯೋಧ್ಯೆ ಭೂಮಿಪೂಜೆ ಸಂದರ್ಭ ಮನೆಗಳಲ್ಲೇ ಶ್ರೀರಾಮ ನಾಮ ಪಠಿಸಿ: ಪೇಜಾವರ ಶ್ರೀ
ಉಡುಪಿ, ಆಗಸ್ಟ್ 02: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಇದೇ ತಿಂಗಳ ಐದನೇ ತಾರೀಕಿನಂದು ಐತಿಹಾಸಿಕ ಭೂಮಿಪೂಜೆ ನಡೆಯಲಿದೆ. ಅಂದು ಕೋಟ್ಯಂತರ ಆಸ್ತಿಕರ ಬಹುಕಾಲದ ಕನಸು ನನಸಾಗಲಿದೆ ಎಂದು ರಾಮಜನ್ಮ ಭೂಮಿ ಟ್ರಸ್ಟ್ ನ ಟ್ರಸ್ಟಿಯಾಗಿರುವ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಹೇಳಿದ್ದಾರೆ.
ಉಡುಪಿ ಜಿಲ್ಲೆಯ ನೀಲಾವರದಲ್ಲಿ ಚಾತುರ್ಮಾಸ್ಯ ವ್ರತದಲ್ಲಿರುವ ಶ್ರೀಗಳು ಶನಿವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಐದನೇ ತಾರೀಕಿನಂದು ಪ್ರಧಾನಿ ನರೇಂದ್ರ ಮೋದಿ ಅವರು ಈ ಒಂದು ಐತಿಹಾಸಿಕ ಭೂಮಿಪೂಜೆಯನ್ನು ನೆರವೇರಿಸಲಿದ್ದಾರೆ. ಕೊರೊನಾದಿಂದಾಗಿ ನಮಗೆಲ್ಲ ದೈಹಿಕವಾಗಿ ಭಾಗವಹಿಸಲು ಸಾಧ್ಯ ಆಗದು. ಆದರೆ, ಈ ಕಾರ್ಯಕ್ರಮದ ನೇರಪ್ರಸಾರವನ್ನು ನಾವು ಇದ್ದ ಸ್ಥಳದಿಂದಲೇ ವಿಕ್ಷಣೆ ಮಾಡಿ ಭಾಗವಹಿಸೋಣ ಎಂದರು.
ಕೊರೊನಾದಿಂದ ಹೊರಬಂದ ಪುತ್ತಿಗೆ ಮಠಾಧೀಶ: ಕೆಎಂಸಿಯಿಂದ ಡಿಸ್ಚಾರ್ಜ್
ಈ ಸಂಧರ್ಭದಲ್ಲಿ ನಮ್ಮ ನಮ್ಮ ಮನೆಗಳಲ್ಲಿ ಭಜನೆ, ಜಪ ತಪಗಳನ್ನು ಆಚರಿಸಿ ಶ್ರೀರಾಮನಾಮ ಜಪವನ್ನು ಪಠಿಸಿ ನಮ್ಮ ಮನೆಯ ಮೇಲ್ಗಡೆ ಭಗವಾಧ್ವಜವನ್ನು ಹಾರಿಸುವ ಮೂಲಕ ಈ ಕಾರ್ಯಕ್ರಮದಲ್ಲಿ ದೇಶದ ಬಂಧುಗಳೆಲ್ಲರೂ ಭಾಗವಹಿಸೋಣ ಎಂದು ಕರೆ ನೀಡಿದರು.
ರಾಮಮಂದಿರಕ್ಕೆ ಅಂಜನಾದ್ರಿ ಕಲ್ಲು: ಪೇಜಾವರ ಶ್ರೀಗಳ ಮೂಲಕ ಅಯೋಧ್ಯೆಗೆ
ರಾಮ ಮಂದಿರ ನಿರ್ಮಾಣದಲ್ಲಿ ದೇಶದ ಎಲ್ಲಾ ಭಕ್ತರ ಪಾಲು ಇರಬೇಕು ಎಂಬ ಕಾರಣಕ್ಕಾಗಿ ಪ್ರತಿಯೊಬ್ಬರು 10 ರುಪಾಯಿಗಳನ್ನು ಹಾಗೂ ಪ್ರತಿ ಮನೆಯಿಂದ 101 ರುಪಾಯಿಗಳನ್ನು ಸಂಗ್ರಹಿಸಿ ನೀಡಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದರು.