ಕೊಲ್ಲೂರು: ರೋಪ್ ವೇ ಯೋಜನೆ ಡಿಪಿಆರ್ ತಯಾರಿಗೆ ಚಾಲನೆ
ಉಡುಪಿ, ಸೆಪ್ಟೆಂಬರ್ 15: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಿಂದ ಕೊಡಚಾದ್ರಿ ಬೆಟ್ಟಕ್ಕೆ ಸುಲಭ ಸಂಪರ್ಕ ಕಲ್ಪಿಸುವ ರೋಪ್ ವೇ ಯೋಜನೆಯ ಡಿಪಿಆರ್ ಗೆ ಚಾಲನೆ ನೀಡುವ ಕಾರ್ಯಕ್ರಮ ಇಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನಡೆಯಿತು.
ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ದೀಪ ಬೆಳಗಿಸಿ ಡಿಪಿಆರ್ ತಯಾರಿಗೆ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು, ಇದು ಮಹತ್ವಾಕಾಂಕ್ಷಿ ಯೋಜನೆ. ಈ ಹಿಂದೆಯೇ ಕೊಡಚಾದ್ರಿ ಬೆಟ್ಟಕ್ಕೆ ರೋಪ್ ವೇ ಕಲ್ಪಿಸುವ ಬಗ್ಗೆ ಕನಸು ಕಂಡಿದ್ದೆ. ಅದಕ್ಕೀಗ ಸಂಸದ ಬಿ.ವೈ ರಾಘವೇಂದ್ರ ಅವರು ಜೀವ ನೀಡುತ್ತಿದ್ದಾರೆ. 6-8 ಕಿ.ಮೀ ಉದ್ದ ಇರುವ ಈ ರೋಪ್ ವೇ ಭಾರತದಲ್ಲಿಯೇ ಅತೀ ಉದ್ದವಾದ ರೋಪ್ ವೇ ಎನಿಸಿಕೊಳ್ಳಲಿದೆ. ಯುರೋಪಿಯನ್ ಮಾದರಿಯಲ್ಲಿ ಈ ಯೋಜನೆ ರೂಪುಗೊಳ್ಳಲಿದೆ. ಇದರಿಂದ ಕೊಲ್ಲೂರಿಗೆ ಬರುವ ಯಾತ್ರಾರ್ಥಿಗಳು, ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗಲಿದೆ. ಈ ಭಾಗದ ಅಭಿವೃದ್ದಿಗೂ ಪೂರಕವಾಗಲಿದೆ" ಎಂದು ತಿಳಿಸಿದರು.

ರೋಪ್ ವೇ ನಿರ್ಮಾಣದಿಂದ ಪರಿಸರಕ್ಕೆ ಹಾನಿಯಾಗುವುದಿಲ್ಲ. ಕೊಡಚಾದ್ರಿಯ ಅದ್ಭುತ ದೃಶ್ಯಗಳನ್ನು ಕಣ್ತುಂಬಿಕೊಳ್ಳಲು ಸಾಧ್ಯವಾಗುತ್ತದೆ. ಕೊಡಚಾದ್ರಿ, ಸರ್ವಜ್ಞ ಪೀಠವನ್ನು ನೋಡಲು ಅನುಕೂಲವಾಗುತ್ತದೆ ಎಂದ ಅವರು, ರೋಪ್ ವೇ ಆಗುವುದರಿಂದ ಜೀಪ್ ಚಾಲಕರು, ಮಾಲೀಕರು ಆತಂಕ ಪಡಬೇಕಾಗಿಲ್ಲ. ರೋಪ್ ವೇ ಸ್ಥಳದ ತನಕ ಹೋಗಲು ಜೀಪ್ ಗಳ ಅವಶ್ಯಕತೆ ಇರುತ್ತದೆ. ಪ್ರವಾಸೋದ್ಯಮ ಅಭಿವೃದ್ದಿಯಾದಂತೆ ಅವಕಾಶಗಳೂ ಸೃಷ್ಟಿಯಾಗುತ್ತವೆ ಎಂದು ಭರವಸೆ ನೀಡಿದರು.
Recommended Video
ಈ ರೋಪ್ ವೇ ಯೋಜನೆ ಸರ್ಕಾರ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಯುಪಿಐಎಲ್ ಸಂಸ್ಥೆ ಮೂಲಕ ಅನುಷ್ಠಾನವಾಗಲಿದೆ.
-
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei












Click it and Unblock the Notifications