Get Updates
Get notified of breaking news, exclusive insights, and must-see stories!

ಪೊಲೀಸರ ದೌರ್ಜನ್ಯಕ್ಕೆ ಬೇಸತ್ತ ಚಾಲಕ ಆತ್ಮಹತ್ಯೆ..?

ಉಡುಪಿ, ಜನವರಿ 22: ರಾತ್ರಿ ಪೊಲೀಸ್ ಠಾಣೆಗೆ ತೆರಳಿದ್ದವನು, ಮುಂಜಾನೆ ರೈಲು ಹಳಿ ಮೇಲೆ ಹೆಣವಾಗಿ ಮಲಗಿದ್ದಾನೆ. ಆತನೇ ಚಾಲಕ ವೃತ್ತಿ ಮಾಡಿಕೊಂಡಿದ್ದ ಬೈಂದೂರು ಕಿರಿಮಂಜೇಶ್ವರ ಶಾಲೆಬಾಗಿಲು ನಿವಾಸಿ ರಾಮ ಪೂಜಾರಿ.

Recommended Video

      ಶ್ರೀಗಳ ಭಾವಚಿತ್ರ ಬಿಡಿಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದ ಅಭಿಮಾನಿ | PEJAWARA SRI | ONEINDIA KANNADA

      ಆಟೋ ಹಾಗೂ ಓಮ್ನಿ ಚಾಲಕನಾಗಿದ್ದ ರಾಮನ ಮೇಲೆ ಯುವತಿಯೊಬ್ಬಳು ತನಗೆ ಕಿರುಕುಳ ನೀಡುತ್ತಿದ್ದ ಬಗ್ಗೆ ಪೊಲೀಸ್ ದೂರು ನೀಡಿದ್ದಳು. ಆಕೆ ನೀಡಿದ ದೂರಿನ ಅನ್ವಯ ಗಂಗೊಳ್ಳಿ ಪೊಲೀಸರು ರಾಮನನ್ನು ವಿಚಾರಣೆಗಾಗಿ ಕರೆದೊಯ್ದಿದ್ದರು.

      ಬಳಿಕ ಅಲ್ಲಿಂದ ಕುಂದಾಪುರ ಎಎಸ್ಪಿ ಕಚೇರಿಗೆ ಕರೆದೊಯ್ದು ತಡರಾತ್ರಿಯವರೆಗೂ ವಿಚಾರಣೆ ಕೂಡ ನಡೆಸಿದ್ದರು. 6 ಗಂಟೆಗೆ ರಾಮನ ಸೋದರನಿಗೆ ಕರೆ ಮಾಡಿದ ಪೊಲೀಸರು ಬೈಂದೂರು ಪೊಲೀಸ್ ಠಾಣೆಗೆ ಬಂದು ಆತನನ್ನು ಕರೆದೊಯ್ಯಲು ತಿಳಿಸಿದ್ದರಂತೆ.

      Driver Suicide Over Police Brutality In Byndoor?

      ಅಂತೆಯೇ ಸೋದರ ಅಲ್ಲಿಗೆ ತೆರಳಿ ತಡರಾತ್ರಿ ಸುಮಾರು 11.30ಕ್ಕೆ ರಾಮನನ್ನು ಮನಗೆ ಕರೆದುಕೊಂಡು ಬಂದಿದ್ದರು ಎನ್ನಲಾಗಿದೆ. ಬೆಳಿಗ್ಗೆ ಮನೆಯಿಂದ ರಾಮ ಕಾಣೆಯಾಗಿದ್ದು, ಮುಂಜಾನೆ 7.30ರ ಸುಮಾರಿಗೆ ಬೈಂದೂರು ಪೊಲೀಸ್ ಠಾಣೆ ವ್ಯಾಪ್ತಿಯ ನಾಗೂರು ಕಿರಿಮಂಜೇಶ್ವರ ಕಳ್ಳಂಗಡಿ ರೈಲು ಹಳಿ ಬಳಿ ರಾಮನ ಶವವೊಂದು ಪತ್ತೆಯಾಗಿದೆ.

      ರಾಮನ ಆತ್ಮಹತ್ಯೆ ವಿಚಾರ ಸುದ್ದಿಯಾಗುತ್ತಿದ್ದಂತೆ ಕುಟುಂಬಸ್ಥರು ಪೊಲೀಸ್ ರ ಮೇಲೆ ಆಕ್ರೋಶಗೊಂಡು ಪ್ರತಿಭಟನೆ ನಡೆಸಿದರು. ಬೈಂದೂರಿನಲ್ಲಿ ದಾಖಲಾದ ಪ್ರಕರಣಕ್ಕೆ ಗಂಗೊಳ್ಳಿ ಪೊಲೀಸರು ಮಫ್ತಿಯಲ್ಲಿ ಬಂದು ರಾಮನನ್ನು ಕರೆದೊಯ್ದಿದ್ದು ಮಾತ್ರವಲ್ಲದೇ, ಒಂದಷ್ಟು ಪೊಲೀಸರು ರಾಮನ ಮೇಲೆ ಗಂಭೀರ ಹಲ್ಲೆ ನಡೆಸಿದ್ದಾರೆ.

      Driver Suicide Over Police Brutality In Byndoor?

      ಪೊಲೀಸರ ದೌರ್ಜನ್ಯದಿಂದ ನೊಂದು ರಾಮ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದು ಕುಟುಂಬಸ್ಥರು ಹೇಳುತ್ತಿದ್ದಾರೆ. ಅಷ್ಟು ಮಾತ್ರವಲ್ಲ, ತನಿಖೆಯ ನೆಪದಲ್ಲಿ ಮೊಬೈಲ್, ಚೈನ್ ಕಿತ್ತುಕೊಂಡು ಪೊಲೀಸ್‌ರು ದುರ್ವರ್ತನೆ ತೋರಿದ್ದಾರೆ ಎಂದು ಆರೋಪಿಸಿದ್ದಾರೆ.

      ಉಡುಪಿ ಹೆಚ್ಚುವರಿ ಎಸ್ಪಿ ಕುಮಾರಚಂದ್ರ ಅವರು ಸಮಗ್ರ ತನಿಖೆ ನಡೆಸಿ ಸೂಕ್ತ ನ್ಯಾಯ ಕೊಡಿಸುವ ಭರವಸೆಯನ್ನು ನೀಡಿದ ಬಳಿಕ, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಯಿತು.

      ಕಾನೂನು ಕೈಗೆತ್ತಿಕೊಂಡ ಪೊಲೀಸರ ವಿರುದ್ಧ ಕ್ರಮಕೈಗೊಳ್ಳಬೇಕು. ರಾಮ ಪೂಜಾರಿ ವಿರುದ್ಧ ದೂರು ನೀಡಿದವರ ಪೂರ್ವಾಪರ ವಿಚಾರಣೆ ನಡೆಸಬೇಕು. ರಾಮ ಪೂಜಾರಿಯದ್ದು ಆತ್ಮಹತ್ಯೆಯೇ ಆಗಿದ್ದರೆ ಅದಕ್ಕೆ ಪ್ರಚೋದನೆ ನೀಡಿದವರ ಮೇಲೆ ಕ್ರಮ ಜರುಗಿಸಬೇಕು. ತಮಗೆ ಸೂಕ್ತ ನ್ಯಾಯ ಒದಗಿಸುವವರೆಗೂ ಶವವನ್ನು ತೆಗೆಯುವುದಿಲ್ಲ ಎಂದು ಕುಟುಂಬ ಸದಸ್ಯರು ಪಟ್ಟು ಹಿಡಿದರು.

      ಸ್ಥಳಕ್ಕೆ ಬಂದ ಹೆಚ್ಚುವರಿ ಎಸ್ಪಿ ಕುಮಾರಚಂದ್ರ ಇಲಾಖಾ ತನಿಖೆ ನಡೆಸಿ ಸೂಕ್ತ ಕ್ರಮಕೈಗೊಳ್ಳುವ ಭರವಸೆಯನ್ನು ನೀಡಿದ ಬಳಿಕ ಮಧ್ಯಾಹ್ನ 2.30ರ ಸುಮಾರಿಗೆ ಶವವನ್ನು ಆಂಬುಲೆನ್ಸ್ ಮೂಲಕ ಘಟನಾ ಸ್ಥಳದಿಂದ ಆಸ್ಪತ್ರೆಗೆ ರವಾನಿಸಲಾಯಿತು.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+