ಮಂಚಿಕೆರೆಯಲ್ಲಿ ಬಾಯ್ದೆರೆದ ಭೂಮಿ, ಪದರವಾಗಿ ಮೇಲೆದ್ದ ಕಲ್ಲು

ಇದಕ್ಕಿಂತ ಆತಂಕದ ವಿಷಯವೆಂದರೆ ಬಿರುಕು ಬಿಟ್ಟ ಸ್ಥಳದಲ್ಲಿ ಕಲ್ಲುಗಳು ಪದರ ಪದರವಾಗಿ ಮೇಲಕ್ಕೆದ್ದಿದೆ. ಶುಕ್ರವಾರ ಬೆಳಗ್ಗೆ ಸುಮಾರು 7 ಗಂಟೆ ಸಮಯದಲ್ಲಿ ಭೂಮಿ ಕಂಪಿಸಿದೆ. ಆಗ ನೋಡಿದಾಗ ಬಿರುಕು ಬಿಟ್ಟಿರುವುದು ಕಂಡುಬಂದಿದೆ ಎಂದು ಸ್ಥಳೀಯ ನಿವಾಸಿ ಜಗದೀಶ್ ತಿಳಿಸಿದ್ದಾರೆ.
ಉಡುಪಿ ತಹಸೀಲ್ದಾರರು ಹಾಗೂ ಗಣಿ ವಿಜ್ಞಾನ ಇಲಾಖೆ ಅಧಿಕಾರಿಗಳು ಸ್ಥಳವನ್ನು ಪರಿಶೀಲಿಸಿದ್ದಾರೆ. ಪದೇ ಪದೇ ಭೂಕಂಪನ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಅನಿವಾರ್ಯತೆ ಕಂಡುಬಂದರೆ ಈ ಪ್ರದೇಶದ ಮನೆಗಳನ್ನು ಸ್ಥಳಾಂತರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
50 ಅಡಿ ದೂರದ ಬಿರುಕು : ಸುಮಾರು 50 ಅಡಿ ಸ್ಥಳದಲ್ಲಿ ಬಿರುಕು ಬಿಟ್ಟಿದೆ. ಜಗದೀಶ್ ಅವರ ಮನೆ ಪಕ್ಕದಲ್ಲಿ ಬಿರುಕು ಹಾದು ಹೋಗಿದ್ದು, ಸ್ವಲ್ಪದರಲ್ಲಿ ಮನೆ ಉಳಿದಿದೆ. ಆದರೆ, ಅವರ ಮನೆಯ ಬಾವಿಯ ಗೋಡೆ ಬಿರುಕುಬಿಟ್ಟಿದೆ.
ಈ ಸ್ಥಳದಲ್ಲಿ ಸುಮಾರು 6 ತಿಂಗಳುಗಳ ಹಿಂದೆಯೂ 100 ಅಡಿ ದೂರದವರೆಗೆ ಭೂಮಿ ಬಿರುಕು ಬಿಟ್ಟಿತ್ತು. ಅನೇಕ ಮನೆಗಳ ಪಾಯ ಹಾಗೂ ಡಾಂಬರ್ ರಸ್ತೆಗಳಲ್ಲಿಯೂ ಬಿರುಕು ಕಂಡುಬಂದಿದ್ದವು.
ಭೂಮಿಯೊಳಗಿನ ಪದರಗಳು ಜರುಗುವುದರಿಂದ ಇಂತಹ ಪರಿಣಾಮ ಕಂಡುಬರುತ್ತದೆ ಎಂದು ಮಣಿಪಾಲ ಎಂಐಟಿ ಭೂ ವಿಜ್ಞಾನ ವಿಭಾಗದ ಪ್ರೊ. ಉದಯಶಂಕರ್ ಹೇಳಿದ್ದಾರೆ. ಅಲ್ಲದೆ, ಸಮೀಪದಲ್ಲಿರುವ ಮಣ್ಣಪಳ್ಳದಲ್ಲಿ ತುಂಬಿರುವ ನೀರು ಮಂಚಿಕೆರೆಯತ್ತ ಹರಿಯುವಾಗ ಭೂಮಿಯಲ್ಲಿ ಪದರಗಳು ದುರ್ಬಲಗೊಂಡು ಹೀಗೆ ಸಂಭವಿಸಿರಬಹುದು ಎಂದು ಅವರು ತಿಳಿಸಿದ್ದಾರೆ.
ಇಲ್ಲಿಂದ ಸುಮಾರು 2 ಕಿ.ಮೀ. ದೂರದಲ್ಲಿರುವ ಸರಳೇಬೆಟ್ಟು ಪ್ರದೇಶದಲ್ಲಿ ಭೂಮಿಯಿಂದ ಸಿಹಿ ನೀರು ಮೇಲಕ್ಕೆ ಉಕ್ಕುತ್ತಿರುವುದಕ್ಕೆ ಭೂಕಂಪನವೇ ಕಾರಣ ಎಂದು ಭೂ ವಿಜ್ಞಾನಿಗಳು ಹೇಳುತ್ತಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications