ನಾಪತ್ತೆಯಾದ ಮೀನುಗಾರರ ಶೋಧಕಾರ್ಯಕ್ಕೆ ಇಳಿದ ಭಾರತೀಯ ನೌಕಾಪಡೆಯ ಹಡಗು
ಉಡುಪಿ, ಜನವರಿ 18: ಮಲ್ಪೆಯಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ 7 ಮಂದಿ ಮೀನುಗಾರರು ನಾಪತ್ತೆಯಾಗಿ ತಿಂಗಳು ಕಳೆದರೂ ಅವರ ಸುಳಿವು ಈವರೆಗೆ ಪತ್ತೆಯಾಗಿಲ್ಲ. ಅವರು ತೆರಳಿದ್ದ ಸುವರ್ಣ ತ್ರಿಭುಜ ಬೋಟ್ ಕೂಡ ಪತ್ತೆಯಾಗಿಲ್ಲ. ಮೀನುಗಾರರ ಇರುವಿಕೆ ಬಗ್ಗೆ ಯಾವುದೇ ಸುಳಿವು ಸಿಗದೇ ಇರುವುದರಿಂದ ನಾಪತ್ತೆಯಾಗಿರುವ ಮೀನುಗಾರರ ಮನೆಗಳಲ್ಲಿ ಆತಂಕ ಹೆಚ್ಚಾಗಿದೆ.
ಕಣ್ಮರೆಯಾಗಿರುವ ಮೀನುಗಾರರ ಶೋಧಕಾರ್ಯ ಮುಂದುವರೆದಿದೆ. ಈ ನಡುವೆ ನಾಪತ್ತೆಯಾಗಿರುವ ಮೀನುಗಾರರ ಪತ್ತೆಕಾರ್ಯಕ್ಕೆ ಭಾರತೀಯ ನೌಕಾಪಡೆ ಕಾರ್ಯಾಚರಣೆ ಆರಂಭಿಸಿರುವ ಮಾಹಿತಿ ಲಭ್ಯವಾಗಿದೆ. ಭಾರತೀಯ ನೌಕಾಪಡೆಯ ಹಡಗು ಸಮುದ್ರದ ತಳಭಾಗದಲ್ಲಿ ಶೋಧಕಾರ್ಯ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಸಮುದ್ರದ ತಳ ಶೋಧಿಸಬಲ್ಲ ನೌಕಾಪಡೆಯ ಹಡಗು ಭಾನುವಾರದಿಂದಲೇ ಕಾರ್ಯಾಚರಣೆಗೆ ಇಳಿದಿದ್ದು, ಅವಘಡದ ಸಾಧ್ಯತೆಯ ಮುನ್ಸೂಚನೆ ನೀಡಿದೆ. ನೌಕಾಪಡೆಯ ಈ ಹಡಗು ಮಹಾರಾಷ್ಟ್ರ ಮತ್ತು ಗೋವಾ ಭಾಗದ 12 ನಾಟಿಕಲ್ ಮೈಲಿ ದೂರದಲ್ಲಿ ಕಾರ್ಯಾಚರಣೆ ಮಾಡುತ್ತಿದೆ. ಆದರೆ ಸುವರ್ಣ ತ್ರಿಭುಜ ಹಾಗೂ ಅದರಲ್ಲಿದ್ದ 7 ಮಂದಿ ಮೀನುಗಾರರ ಸುಳಿವು ಲಭಿಸಿದ ಮಾಹಿತಿ ಇನ್ನೂ ಬಂದಿಲ್ಲ.

ಈ ನಡುವೆ ನಾಪತ್ತೆಯಾಗಿರುವ ಮೀನುಗಾರರ ಪತ್ತೆ ಕಾರ್ಯ ವಿಚಾರವಾಗಿ ನಿನ್ನೆ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆದಿದೆ. ವಿಧಾನಸೌಧದಲ್ಲಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯ ಭಾಸ್ಕರ್ ನೇತೃತ್ವದಲ್ಲಿ ಕರಾವಳಿಯ ಭದ್ರತೆ ಮತ್ತು ಮೀನುಗಾರರ ನಾಪತ್ತೆ ಪ್ರಕರಣದ ಕುರಿತ ಸಭೆ ನಡೆಸಲಾಗಿದೆ.
ಈ ಸಂದರ್ಭದಲ್ಲಿ ನಾಪತ್ತೆಯಾಗಿರುವ ಮೀನುಗಾರರು ಮತ್ತು ಬೋಟ್ ಕುರುಹು ಪತ್ತೆಯಾಗುವವರೆಗೂ ಶೋಧ ಮುಂದುವರೆಸುವಂತೆ ಟಿಎಂ ವಿಜಯ ಭಾಸ್ಕರ್ ಆದೇಶಿಸಿದ್ದಾರೆ.
ಡಿ 15 ಮತ್ತು 16 ರಂದು ಮಹಾರಾಷ್ಟ್ರದ ಮಾಲ್ವಣ್ ಸಮೀಪ ಸಮುದ್ರದಲ್ಲಿ ಬೋಟ್ ಗಳು ಗುಂಪಾಗಿ ಇರುವ ಚಿತ್ರಗಳು ಇಸ್ರೋ ಕಳುಹಿಸಿದ ವರದಿಯಲ್ಲಿದೆ. ಅದನ್ನು ಸೂಕ್ಷ್ಮವಾಗಿ ಪರಿಶೀಲನೆ ನಡೆಸಿ ಅದರಲ್ಲಿ ಸುವರ್ಣ ತ್ರಿಭುಜ ಬೋಟ್ ಇದೆಯೋ ಇಲ್ಲವೋ ಎಂದು ಇನ್ನಷ್ಟು ಪತ್ತೆಯಾಗಬೇಕಿದೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications