ಹಿರಿಯ ರಂಗಕರ್ಮಿ ಉದ್ಯಾವರ ಮಾಧವ ಆಚಾರ್ಯ(79) ನಿಧನ
ಉಡುಪಿ, ಡಿಸೆಂಬರ್ 7: ಕರಾವಳಿ ಭಾಗದ ಹಿರಿಯ ರಂಗಭೂಮಿ ಕಲಾವಿದ ಉದ್ಯಾವರ ಮಾಧವ ಆಚಾರ್ಯ ಅವರು (79) ಸೋಮವಾರ ನಿಧನರಾದರು.
ಉಡುಪಿಯ ಉದ್ಯಾವರ ಮಾಧವ ಆಚಾರ್ಯ ಅವರು ರಂಗ ನಿರ್ದೇಶಕರಾಗಿ, ಕಥೆಗಾರರಾಗಿ, ಕವಿಯಾಗಿ, ನಟರಾಗಿ ಜನಾನುರಾಗಿಯಾಗಿದ್ದರು.
ಪ್ರಸಿದ್ಧ ಗುಡ್ಡೆದ ಭೂತ ಧಾರಾವಾಹಿಯಲ್ಲಿ ಉದ್ಯಾವರ ಮಾಧವ ಆಚಾರ್ಯರು ನಟರಾಗಿ ಅಭಿನಯಿಸಿದ್ದಾರೆ. ಉಡುಪಿಯ ಸಮೂಹ ಸಂಸ್ಥೆಯ ಸಂಸ್ಥಾಪಕರಾಗಿ, ನಾಟಕ, ನೃತ್ಯ ರೂಪಕ ಮೂಲಕ ರಾಜ್ಯಾದ್ಯಂತ ಜನಮನ್ನಣೆ ಗಳಿಸಿದ ಸಾಧಕರಾಗಿದ್ದರು.

ನಾಡಿನಾದ್ಯಂತ ಸುಮಾರು 50 ಕ್ಕೂ ಹೆಚ್ಚು ನಾಟಕಗಳಿಗೆ ನಿರ್ದೇಶನ ಮಾಡಿದ ಹೆಗ್ಗಳಿಕೆ ಮಾಧವ ಆಚಾರ್ಯ ಅವರದು. ಕರ್ನಾಟಕ ರಾಜ್ಯೋತ್ಸವ, ರಂಗ ವಿಷಾರದ ಪ್ರಶಸ್ತಿಗೆ ರಂಗಭೂಮಿ ಕಲಾವಿದ ಉದ್ಯಾವರ ಮಾಧವ ಆಚಾರ್ಯ ಅವರು ಭಾಜನರಾಗಿದ್ದರು.
ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಉಪನ್ಯಾಸಕರೂ ಆಗಿದ್ದ ಇವರು, ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಡಿ.೭ರ ಸೋಮವಾರ ಮಧ್ಯಾಹ್ನ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ಅಪಾರ ಬಂಧುಬಳಗ ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ.
Recommended Video
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications