ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹಿರಿಯ ರಂಗಕರ್ಮಿ ಉದ್ಯಾವರ ಮಾಧವ ಆಚಾರ್ಯ(79) ನಿಧನ

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಡಿಸೆಂಬರ್ 7: ಕರಾವಳಿ ಭಾಗದ ಹಿರಿಯ ರಂಗಭೂಮಿ ಕಲಾವಿದ ಉದ್ಯಾವರ ಮಾಧವ ಆಚಾರ್ಯ ಅವರು (79) ಸೋಮವಾರ ನಿಧನರಾದರು.

ಉಡುಪಿಯ ಉದ್ಯಾವರ ಮಾಧವ ಆಚಾರ್ಯ ಅವರು ರಂಗ ನಿರ್ದೇಶಕರಾಗಿ, ಕಥೆಗಾರರಾಗಿ, ಕವಿಯಾಗಿ, ನಟರಾಗಿ ಜನಾನುರಾಗಿಯಾಗಿದ್ದರು.

ಉಡುಪಿಯಲ್ಲಿ ನಡೆದ ಅಷ್ಟಮಂಗಲ ಪ್ರಶ್ನೆ: ಸಾಕ್ಷಿ ಸಮೇತ ಅನಾವರಣಗೊಂಡ ದೈವ ಸಾನಿಧ್ಯಉಡುಪಿಯಲ್ಲಿ ನಡೆದ ಅಷ್ಟಮಂಗಲ ಪ್ರಶ್ನೆ: ಸಾಕ್ಷಿ ಸಮೇತ ಅನಾವರಣಗೊಂಡ ದೈವ ಸಾನಿಧ್ಯ

ಪ್ರಸಿದ್ಧ ಗುಡ್ಡೆದ ಭೂತ ಧಾರಾವಾಹಿಯಲ್ಲಿ ಉದ್ಯಾವರ ಮಾಧವ ಆಚಾರ್ಯರು ನಟರಾಗಿ ಅಭಿನಯಿಸಿದ್ದಾರೆ. ಉಡುಪಿಯ ಸಮೂಹ ಸಂಸ್ಥೆಯ ಸಂಸ್ಥಾಪಕರಾಗಿ, ನಾಟಕ, ನೃತ್ಯ ರೂಪಕ ಮೂಲಕ ರಾಜ್ಯಾದ್ಯಂತ ಜನಮನ್ನಣೆ ಗಳಿಸಿದ ಸಾಧಕರಾಗಿದ್ದರು.

Udupi: Elder Theater Artist Udyavara Madhava Acharya Passed Away

ನಾಡಿನಾದ್ಯಂತ ಸುಮಾರು 50 ಕ್ಕೂ ಹೆಚ್ಚು ನಾಟಕಗಳಿಗೆ ನಿರ್ದೇಶನ ಮಾಡಿದ ಹೆಗ್ಗಳಿಕೆ ಮಾಧವ ಆಚಾರ್ಯ ಅವರದು. ಕರ್ನಾಟಕ ರಾಜ್ಯೋತ್ಸವ, ರಂಗ ವಿಷಾರದ ಪ್ರಶಸ್ತಿಗೆ ರಂಗಭೂಮಿ ಕಲಾವಿದ ಉದ್ಯಾವರ ಮಾಧವ ಆಚಾರ್ಯ ಅವರು ಭಾಜನರಾಗಿದ್ದರು.

Recommended Video

ಮಂಗನ ಕೈಯಲ್ಲಿ ಮಾಣಿಕ್ಯ ಕೊಟ್ಟಂತೆ ಆಗಿದೆ BJP ಪರಿಸ್ಥಿತಿ!! | Tejasvi Surya | Oneindia Kannada

ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಉಪನ್ಯಾಸಕರೂ ಆಗಿದ್ದ ಇವರು, ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಡಿ.೭ರ ಸೋಮವಾರ ಮಧ್ಯಾಹ್ನ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ಅಪಾರ ಬಂಧುಬಳಗ ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ.

English summary
Udyavara Madhava Acharya 79, a veteran theater artist from the coastal part, passed away on Monday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X