ಉಡುಪಿ: ಚುನಾವಣಾ ಬಹಿಷ್ಕಾರ ಕ್ಕೆ ಮುಂದಾದ ಬಡಾ ಗ್ರಾಮಸ್ಥರು
ಉಡುಪಿ, ಏಪ್ರಿಲ್ 02: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ನೆರವೇರಿಸಿದ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಚುನಾವಣೆಯ ದಿನಾಂಕ ಹತ್ತಿರ ಆಗುತ್ತಿದ್ದಂತೆ ಚುನಾವಣಾ ಬಹಿಷ್ಕಾರದ ಬ್ಯಾನರ್ ಗಳು ರಾರಾಜಿಸತೊಡಗಿವೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು
ಉಡುಪಿ ಜಿಲ್ಕೆಯ ಉಚ್ಚಿಲ ಸಮೀಪದ ಬಡಾ ಗ್ರಾಮದ ಕಡಲ ಕಿನಾರೆಯ ಬಳಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಅಳವಡಿಸಲಾಗಿದೆ. ಈ ಭಾಗದಲ್ಲಿ ವಿವಿಧ ಬೇಡಿಕೆಗಳನ್ನು ಇದುವರೆಗೆ ಈಡೇರಿಸಿಲ್ಲ ಎಂದು ಆರೋಪಿಸಿ ಸ್ಥಳೀಯ ನಾಗರಿಕರು ಈ ಬಹಿಷ್ಕಾರದ ಬ್ಯಾನರ್ ಹಾಕಿದ್ದಾರೆ.
2018ರ ನಿಮ್ಮ ಕನಸಿನ ಸಂಪುಟವನ್ನು ಆಯ್ಕೆ ಮಾಡಿ
ಬಡಾ ಗ್ರಾಮಪಂಚಾಯತ್ ವ್ಯಾಪ್ತಿಗೆ ಒಳಪಡುವ 6 ಮತ್ತು 7 ನೇ ವಾರ್ಡಿನ ಬಗ್ಗತೋಟದ ಬಳಿ ಕಡಲ ಸಮೀಪದಲ್ಲಿ ಮೀನುಗಾರರಿಗೆ ಮೂಲಭೂತ ಸೌಕರ್ಯಗಳು ಒದಗಿಸಿಲ್ಲ ಎಂದು ಆರೋಪಿಸಲಾಗಿದ್ದು ಇಲ್ಲಿಯ ಮೀನುಗಾರರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂದು ಆಕ್ರೋಶ ವ್ಯಕ್ತವಾಗಿದೆ.
ಕಾಪು ನಗರ ಯೋಜನಾ ಪ್ರಾಧಿಕಾರದ ವ್ಯಾಪ್ತಿಗೆ ಈ ಉಚ್ಚಿಲ ಬಡಾಗ್ರಾಮ ಸೇರಿದ್ದು ಗ್ರಾಮದ ಒಳಗೆ ಸಮುದ್ರದ ನೀರು ಹರಿದು ಬರುತ್ತಿರುವ ಕಾರಣ ಕುಡಿಯುವ ನೀರಿಗೆ ಸಮಸ್ಯೆಯಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಉಡುಪಿ ಮಠದಲ್ಲಿ ನಡೆಯಿತು ಕಟ್ಟಿಗೆ ಮುಹೂರ್ತ
ಸಿ.ಆರ್.ಝಡ್ ವ್ಯಾಪ್ತಿಯಲ್ಲಿ ಮೀನುಗಾರರಿಗೆ ಮನೆ ಯೋಜನೆಗಳಾಗ ಮತ್ಸ್ಯಾಶ್ರಯ ಸಾಹಾಯಧನ ಪಡೆಯಲು ಸಾಧ್ಯವಾಗಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂಬರುವ ಚುನಾವಣೆಯಲ್ಲಿ ಮತದಾನ ಮಾಡದಿರಲು ಇಲ್ಲಿಯ ಜನರು ತೀರ್ಮಾನಿಸಿದ್ದಾರೆ.