ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಜತೆ ಒನ್ಇಂಡಿಯಾ ಕನ್ನಡ ಸಂದರ್ಶನ
ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಸೇರಿಕೊಂಡಿರುವ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಜತೆ ಒನ್ಇಂಡಿಯಾ ಕನ್ನಡ ಸಂದರ್ಶನ.
ಉಡುಪಿ, ಮಾರ್ಚ್. 15 : ಬಹುಕಾಲ ಕಾಂಗ್ರೆಸ್ ನಲ್ಲಿದ್ದುಕೊಂಡು ಹಿರಿಯ ನಾಯಕರಾಗಿ ಗುರುತಿಸಿಕೊಂಡಿದ್ದ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಪಕ್ಷದೊಳಗಿನ ಆಂತರಿಕ ಕಲಹದಿಂದ ಬೇಸತ್ತು ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿರುವುದು ನಿಮಗೆಲ್ಲಾ ಗೊತ್ತೇ ಇದೆ.
ಹಲವು ವರ್ಷಗಳ ಕಾಲ ಕಾಂಗ್ರೆಸ್ ನಲ್ಲಿದ್ದುಕೊಂಡು ಎಡಪಂಥೀಯ ಪರ ಧ್ವನಿ ಎತ್ತುತ್ತಿದ್ದ ಜಯಪ್ರಕಾಶ್ ಹೆಗ್ಡೆ ಅವರು, ದಿಢೀರ್ ನೇ ಬಿಜೆಪಿ ಸೇರಿದ್ದರಿಂದ ಆ ಪಕ್ಷದ ನೀತಿ-ನಿಯಮ, ಅಜೆಂಡಾಗಳಿಗೆ ಬದ್ಧರಾಗಲು ಕಷ್ಟ ಆಗಲ್ವಾ?.
ಬಿಜೆಪಿಯಲ್ಲಿ ಸೂಕ್ತ ಸ್ಥಾನಮಾನ ನೀಡಲಿದೆಯೇ? ಕೇಳಿದ ಎಲ್ಲ ಪ್ರಶ್ನೆಗಳಿಗೆಲ್ಲ ನಮ್ಮ ಒನ್ ಇಂಡಿಯಾ ಕನ್ನಡ ಜತೆ ಮುಕ್ತ ಮನಸ್ಸಿನಿಂದ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. [ಕೈಗೆ ಕೈಕೊಟ್ಟು ಬಿಜೆಪಿಗೆ ಜೈ ಎಂದ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ]

ಪ್ರಶ್ನೆ: ಜನಪರ,ಪ್ರಗತಿಪರ,ಎಡಪಂಥೀಯ ಮೇಲೆ ನಂಬಿಕೆ ಇರುವ ನಿಮಗೆ ಹಿಂದುತ್ವದ ಆಶಯ ಹೊಂದಿರುವ ಪಕ್ಷಕ್ಕೆ ಸೇರ್ಪಡೆಗೊಂಡಿರುವುದು ಅಜಾಗಜಾಂತರ ವ್ಯತ್ಯಾಸ ಇದೆ ಅಲ್ವಾ?
ಉತ್ತರ: 'ನಾನು ನನ್ನ ಆತ್ಮಸಾಕ್ಷಿಯಂತೆ ಬದುಕುತ್ತಿದ್ದೇನೆ. ಯಾವ ಪಕ್ಷ ನನಗೆ ಗೌರವ ನೀಡುತ್ತದೆಯೋ, ಅಂತಹ ಪಕ್ಷದಲ್ಲಿ ಗುರುತಿಸಿಕೊಳ್ಳಲು ಇಚ್ಛಿಸುತ್ತೇನೆ. ಅಷ್ಟೇ ಅಲ್ಲ, ಆ ಪಕ್ಷದ ಸಿದ್ದಾಂತಕ್ಕೆ ನಾನು ಸಹ ಗೌರವ ನೀಡುತ್ತೇನೆ.
'ಬದಲಾವಣೆ ಅನ್ನುವುದು ಸಹಜ. ಹೀಗಾಗಿ ಕಾಲಘಟ್ಟದಲ್ಲಿ ಘಟಿಸುವ ಇಂತಹ ಬದಲಾವಣೆಯನ್ನ ಸ್ವೀಕರಿಸುವುದು, ಬದಲಾವಣೆಗೆ ಹೊಂದಿಕೊಳ್ಳುವುದು ಅಗತ್ಯ' ಎಂದರು.
ಪ್ರಶ್ನೆ: ಇನ್ನು ನಿಮ್ಮ ಬೆಂಬಲಿಗರು ಬಿಜೆಪಿ ಸೇರುತ್ತಾರೆಯೇ?
ಉತ್ತರ: 'ಬೆಂಬಲಿಗರಲ್ಲಿ ಹೆಚ್ಚಿನವರು ಬಿಜೆಪಿ ಸೇರುತ್ತಾರೆ. ಎಲ್ಲರೂ ಸೇರಬೇಕೋ? ಬೇಡವೋ? ಎಂಬುದು ಅವರವರ ಇಚ್ಛೆ. ಇದರಲ್ಲಿ ನನ್ನ ಅಭ್ಯಂತರವಿಲ್ಲ'. ಜೆ.ಹೆಚ್.ಪಾಟೀಲ್, ವಿ.ಎಸ್.ಆಚಾರ್ಯ ರಂತಹ ಹಿರಿಯ ನಾಯಕರು ನನ್ನನ್ನ ಗುರುತಿಸಿ ಪ್ರೋತ್ಸಾಹ ನೀಡಿದ್ದರು. ಅಂದಹಾಗೇ ಬಿಜೆಪಿ ನಿಲುವು ಕಠಿಣವಾಗಿದೆ, ಆದರ್ಶವಾಗಿದೆ.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದೆ'. ಕಾಂಗ್ರೆಸ್ ಮುಕ್ತ ಭಾರತಕ್ಕಾಗಿ ಶೀಘ್ರವೇ ' ಪರಿವರ್ತನಾ ರ್ಯಾಲಿ' ಆರಂಭಿಸಲಿದ್ದೇವೆ' ಎಂದು ಹೇಳಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications