ಬಿಜೆಪಿ ನಾಯಕರಿಗೆ ಹಲವು ಪ್ರಶ್ನೆ ಮುಂದಿಟ್ಟ ಮಾಜಿ ಶಾಸಕ ರಘುಪತಿ ಭಟ್!
ಉಡುಪಿ, ಮೇ 26: ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ನೈಋತ್ಯ ಪದವೀಧರರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಉಡುಪಿ ಕ್ಷೇತ್ರದ ಮಾಜಿ ಶಾಸಕ ರಘುಪತಿ ಭಟ್ರನ್ನು ಬಿಜೆಪಿ 6 ವರ್ಷಗಳ ಕಾಲ ಉಚ್ಛಾಟನೆ ಮಾಡಿದೆ.
ಭಾನುವಾರ ಉಡುಪಿಯಲ್ಲಿ ಮಾತನಾಡಿದ ರಘುಪತಿ ಭಟ್, "ನಾನು ಕೈ ಹಿಡಿದು ಬೆಳೆಸಿದವರೇ ನನ್ನನ್ನು ವಜಾ ಮಾಡಲು ಶಿಫಾರಸು ಮಾಡಿದ್ದಾರೆ. ಯಾವ ಹುದ್ದೆಯಿಂದ ನನ್ನ ವಜಾ ಮಾಡಿದೆ" ಎಂದು ಪಕ್ಷ ಹೇಳಲಿ ಎಂದರು.

ಶನಿವಾರ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ರಘುಪತಿ ಭಟ್ ಉಚ್ಛಾಟಿಸಿ ಆದೇಶ ಹೊರಡಿಸಿದ್ದರು. ನೈಋತ್ಯ ಪದವೀಧರರ ಕ್ಷೇತ್ರದಿಂದ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ ಎಂದು ಹೇಳಿದ್ದರು.
ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು (6) ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಆದೇಶದಲ್ಲಿ ಹೇಳಿದ್ದರು. ಈ ಆದೇಶದ ಕುರಿತು ರಘುಪತಿ ಭಟ್ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ನಾಯಕರಿಗೆ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ರಘುಪತಿ ಭಟ್, "ನಾನು ನರೇಂದ್ರ ಮೋದಿಗೆ ಬೈದಿಲ್ಲ. ರಾಜ್ಯ ನಾಯಕರನ್ನು ಟೀಕೆ ಮಾಡಿಲ್ಲ. ಇಂತಹ ವಜಾಗಳಿಗೆ ನಾನು ತಲೆಬಿಸಿ ಮಾಡಿಕೊಳ್ಳುವುದಿಲ್ಲ. ಬಿಜೆಪಿ ಪಕ್ಷದ ವ್ಯವಸ್ಥೆ ಬಗ್ಗೆ ನನಗೆ ಅಸಮಾಧಾನವಿದೆ" ಎಂದು ಹೇಳಿದರು.
"ಪಕ್ಷದ ನಾಯಕರನ್ನು ಟೀಕೆ ಮಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತೆ ಪಕ್ಷಕ್ಕೆ ಬಂದರು. ಲೋಕಸಭೆ ಚುನಾವಣೆ ಟಿಕೆಟ್ ಪಡೆದು ಸ್ಪರ್ಧೆ ಮಾಡಿದರು. ಇದು ಶಾಶ್ವತ ವಜಾ ಅಲ್ಲ. ಪರಿಷತ್ ಚುನಾವಣೆಯಲ್ಲಿ ನಾನು ಗೆದ್ದ ಮೇಲೆ ವಜಾ ರದ್ದಾಗುತ್ತದೆ. ಬಿಜೆಪಿ ಕಾರ್ಯಕರ್ತನನ್ನು ವಜಾ ಮಾಡಲು ಸಾಧ್ಯವಿಲ್ಲ" ಎಂದರು.
ರಘುಪತಿ ಭಟ್ ಪ್ರಶ್ನೆಗಳು
* ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದವರ ಮೇಲೆ ಯಾವ ಕ್ರಮವಾಗಿದೆ?
* ಅಡ್ಡ ಮತದಾನ ಮಾಡಿದ ಇಬ್ಬರು ಶಾಸಕರನ್ನು ಏನು ಮಾಡಿದ್ದೀರಿ?
* ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸಿದ ಶಾಸಕರನ್ನು ವಜಾ ಮಾಡಿದ್ಧೀರಾ?
* ಅಗೋಚರವಾಗಿ ಬಿಜೆಪಿ ವಿರುದ್ಧ ಕೆಲಸ ಮಾಡುವವರ ಮೇಲೆ ಏನು ಕ್ರಮವಾಗಿದೆ?
* ವಿಪ್ ಉಲ್ಲಂಘನೆ ಮಾಡಿದವರ ಮೇಲೆ ಏನು ಕ್ರಮ ಆಗಿದೆ?
ರಘುಪತಿ ಭಟ್, "ನಾನು ವಿಚಲಿತನಾಗಿಲ್ಲ, ಜಗದೀಶ್ ಶೆಟ್ಟರ್ ಪ್ರಕರಣವೇ ಮಾದರಿ. ಕರಾವಳಿ ಬಿಜೆಪಿಯ ಕಾರ್ಯಕರ್ತರಿಗೆ ಶಿಸ್ತು ಜಾಸ್ತಿ, ಶಿಕ್ಷೆಯೂ ಜಾಸ್ತಿ. ಉಡುಪಿಯಲ್ಲಿ ಪಾಪದ ಕಾರ್ಯಕರ್ತರು ಪಕ್ಷ ಅಂತ ಕೆಲಸ ಮಾಡುತ್ತಾರೆ. ಕರಾವಳಿ ವಿಚಾರದಲ್ಲಿ ಬಿಜೆಪಿ ಮನಬಂದಂತೆ ನಡೆದುಕೊಳ್ಳುತ್ತಿದೆ" ಎಂದು ಆರೋಪಿಸಿದರು.
ಪರಿಷತ್ ಚುನಾವಣಾ ಕಣದಿಂದ ಹಿಂದೆ ಸರಿಯದ ರಘುಪತಿ ಭಟ್ಗೆ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷರಾದ ಲಿಂಗರಾಜ ಪಾಟೀಲ್ ಮೊದಲು ನೋಟಿಸ್ ನೀಡಿದ್ದರು. ಶನಿವಾರ ಪಕ್ಷದಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಿ ಆದೇಶ ಹೊರಡಿಸಿದ್ದರು.
ರಘುಪತಿ ಭಟ್ ಕಣಕ್ಕಿಳಿದಿರುವ ನೈಋತ್ಯ ಪದವೀಧರ ಕ್ಷೇತ್ರದ ವ್ಯಾಪ್ತಿಗೆ ಶಿವಮೊಗ್ಗ, ದಾವಣಗೆರೆ (ಹೊನ್ನಾಳಿ, ಚನ್ನಗಿರಿ) ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳು ಸೇರುತ್ತವೆ. ಜೂನ್ 3ರಂದು ಮತದಾನ ನಡೆಯಲಿದ್ದು, ಜೂನ್ 6ರಂದು ಫಲಿತಾಂಶ ಪ್ರಕಟವಾಗಲಿದೆ.
ಹಾಲಿ ಶಾಸಕರಾಗಿದ್ದರೂ ಸಹ 2023ರ ವಿಧಾನಸಭೆ ಟಿಕೆಟ್ ರಘುಪತಿ ಭಟ್ ಕೈತಪ್ಪಿತ್ತು. ಆದ್ದರಿಂದ ರಘುಪತಿ ಭಟ್ ವಿಧಾನ ಪರಿಷತ್ ಚುನಾವಣೆಗೆ ನೈಋತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಶಿವಮೊಗ್ಗದ ಖ್ಯಾತ ವೈದ್ಯ ಧನಂಜಯ ಸರ್ಜಿ ಅವರನ್ನು ಬಿಜೆಪಿ ಅಭ್ಯರ್ಥಿ ಎಂದು ಘೋಷಣೆ ಮಾಡಿತು. ಆಯನೂರು ಮಂಜುನಾಥ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ. ಪಕ್ಷೇತರ ಅಭ್ಯರ್ಥಿಯಾಗಿ ರಘುಪತಿ ಭಟ್ ಕಣದಲ್ಲಿದ್ದಾರೆ.
-
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ











Click it and Unblock the Notifications