ಉಡುಪಿಯ ಕೃಷ್ಣಮಠದ ಬೀದಿಯಲ್ಲಿ ಮದ್ಯವ್ಯಸನಿಗಳ ಹಾವಳಿ
ಉಡುಪಿ. ಮೇ 6: ರಾಜ್ಯಾದ್ಯಂತ ಮದ್ಯದ ಅಂಗಡಿಗಳು ತೆರೆದಿದ್ದೇ ತಡ, ಎಲ್ಲೆಡೆ ಅದರ ದುಷ್ಪರಿಣಾಮಗಳು ವರದಿಯಾಗುತ್ತಿವೆ. ಸೋಮವಾರ ವೈನ್ ಶಾಪ್ ಗಳು ತೆರೆದ ಬಳಿಕ ಕೃಷ್ಣನಗರಿ ಉಡುಪಿಗೂ ಅದರ ಪರಿಣಾಮ ತಟ್ಟಿದೆ.
ಕಳೆದ ಎರಡು ದಿನಗಳಿಂದ ರಥಬೀದಿಯಲ್ಲಿ ಮದ್ಯವ್ಯಸನಿಗಳ ಹಾವಳಿ ಹೆಚ್ಚಾಗಿದೆ. ಮದ್ಯವ್ಯಸನಿಗಳು ಕುಡಿದು ಮನೆಗೆ ತೆರಳುವ ಬದಲು ಮಠದ ಜಗುಲಿ, ರಥಬೀದಿ, ಪಾದಚಾರಿ ರಸ್ತೆಗಳಲ್ಲಿ ಮಲಗಿರುವುದು ಕಂಡುಬರುತ್ತಿದೆ. ಅಮಲೇರಿದ ಮದ್ಯ ವ್ಯಸನಿಗಳು ರಥಬೀದಿಯಲ್ಲಿ ತೂರಾಡಿಕೊಂಡು ನಡೆದಾಡುತ್ತಿದ್ದಾರೆ.

ಕುಡಿದು ಅಲ್ಲಲ್ಲಿ ಬಿದ್ದಿರುವುದು ಭಕ್ತ ವಲಯಕ್ಕೆ ಬೇಸರ ತಂದಿದೆ. ಕೆಲವೊಮ್ಮೆ ಇವರ ಹೊಡೆದಾಟಗಳು, ಅಶ್ಲೀಲ ಬೈಗುಳ, ಮಲಗಿದಲ್ಲಿಯೇ ವಾಂತಿ, ಮಲ ಮೂತ್ರ ಮಾಡಿಕೊಂಡಿರುವುದು ಪ್ರಜ್ಞಾವಂತರನ್ನು ಕೆರಳಿಸಿದೆ.

ರಥಬೀದಿಯಲ್ಲಿ ಯಾರೂ ಮಲಗಬಾರದು, ಕೊರೊನಾ ಸೋಂಕು ಹರಡುವ ಭೀತಿ ಇದೆ ಎಂದು ಎಚ್ಚರಿಸುವ ಫಲಕಗಳಿವೆ. ಮದ್ಯ ವ್ಯಸನಿಗಳು ಈ ಸೂಚನೆಗಳನ್ನು ಧಿಕ್ಕರಿಸುತ್ತಿದ್ದಾರೆ. ರಥಬೀದಿಯಲ್ಲಿ ಆಗುತ್ತಿರುವ ಬೆಳವಣಿಗೆಗೆ ಬೇಗ ತಡೆಯೊಡ್ಡಬೇಕಾಗಿದೆ ಎಂಬುದು ಪ್ರಜ್ಞಾವಂತ ಜನರ ಆಗ್ರಹವಾಗಿದೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications