ದೀಪಾವಳಿ ಹಬ್ಬದ ದಿನವೇ ಉಡುಪಿಯಲ್ಲಿ ನಾಲ್ವರ ಭೀಕರ ಹತ್ಯೆ: ಹಂತಕ ನಿಗೂಢ
ಉಡುಪಿ, ನವೆಂಬರ್ 12: ಉಡುಪಿ ಜಿಲ್ಲೆಯ ನೇಜಾರಿನಲ್ಲಿ ನಡೆದ ಭೀಕರ ಹತ್ಯೆ ಇಡೀ ಕರಾವಳಿಯನ್ನೇ ಬೆಚ್ಚಿ ಬೀಳಿಸಿದೆ. ಮಾಸ್ಕ್ ಹಾಕಿಕೊಂಡು ಬಂದ ದುಷ್ಕರ್ಮಿ ನಾಲ್ವರನ್ನು ಚೂರಿ ಇರಿದು ಕೊಂದಿದ್ದು, ಮನೆಯೇ ಸ್ಮಶಾನವಾಗಿದೆ. ನಾಲ್ವರನ್ನು ಭೀಕರವಾಗಿ ಕೊಂದ ಆತ ಯಾರು? ಕೊಂದದ್ದು ಯಾಕೆ ಎನ್ನುವುದು ಮಾತ್ರ ಇನ್ನೂ ನಿಗೂಢವಾಗಿದೆ.
ನಾಡಿನೆಲ್ಲೆಡೆ ಇವತ್ತು ದೀಪಾವಳಿ ಸಂಭ್ರಮವಾದರೆ ಉಡುಪಿಯಲ್ಲಿ ಇಂದು ಭೀಕರ ಹತ್ಯೆಯಾಗಿದೆ. ಬೆಳ್ಳಂಬೆಳಗ್ಗೆಯೇ ಉಡುಪಿಯ ನೇಜಾರಿನ ಜನ ಭೀಕರ ಹತ್ಯೆ ಕಂಡು ಬೆಚ್ಚಿ ಬಿದ್ದಿದ್ದಾರೆ.

ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ನೇಜಾರು ತೃಪ್ತಿ ನಗರದಲ್ಲಿರುವ ಮೃತರ ಮನೆಗೆ ಬೆಳಗ್ಗಿನ ವೇಳೆ ಬಂದ ದುಷ್ಕರ್ಮಿಯೊಬ್ಬ ತಾಯಿ ಹಾಗೂ ಮೂವರು ಮಕ್ಕಳನ್ನು ಚೂರಿಯಿಂದ ಇರಿದು ಕೊಂದು ವೃದ್ಧೆಯನ್ನು ಗಾಯಗೊಳಿಸಿದ್ದಾನೆ. ತಾಯಿ ಹಸೀನಾ (46) ಆಕೆಯ ಮಕ್ಕಳಾದ ಅಫ್ನಾನ್ (23), ಅಯಾಂಜ್ (21), ಮತ್ತು ಅಸೀಮ್ (14) ದುಷ್ಕರ್ಮಿಯ ಇರಿತದಿಂದ ಮೃತಪಟ್ಟವರು ಎಂದು ಗುರುತಿಸಲಾಗಿದೆ.
ದುಷ್ಕರ್ಮಿಯಿಂದ ಕೊಲೆಯಾದ ಹಸೀನಾ ಅವರ ಪತಿ ಗಲ್ಫ್ ದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ. ಮುಖಕ್ಕೆ ಬಿಳಿ ಬಣ್ಣದ ಮಾಸ್ ಧರಿಸಿದ್ದ ಬಂದ ದುಷ್ಕರ್ಮಿ ಚಾಕುವಿನಿಂದ ಇರಿದು ಹಸೀನಾ ಹಾಗೂ ಅವರ ಇಬ್ಬರು ಮಕ್ಕಳನ್ನು ಇರಿದಿದ್ದಾನೆ. ಮನೆಯೊಳಗಿನ ಕಿರುಚಾಟ ಕೇಳಿ, ಹೊರಗಡೆ ಆಡಲು ತೆರಳಿದ್ದ ಆಸಿಫ್, ಸೈಕಲ್ ಮನೆ ಅಂಗಳದಲ್ಲಿ ಕೆಡವಿ ಒಳಗೆ ಓಡುತ್ತಿದ್ದಂತೆ ಆತನಿಗೂ ದುಷ್ಕರ್ಮಿ ಚಾಕುನಿಂದ ಇರಿದು ಕೊಲೆ ಮಾಡಿದ್ದಾನೆ.
ದುಷ್ಕರ್ಮಿ ಸಂತೆಕಟ್ಟೆಯಿಂದ ರಿಕ್ಷಾದಲ್ಲಿ ಬಂದು ಈ ಕೃತ್ಯ ನಡೆಸಿ ನಂತರ ಎಸ್ಕೇಪ್ ಆಗಿದ್ದಾನೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಉಡುಪಿ ಎಸ್ಪಿ ಡಾ.ಅರುಣ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯ ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆಯನ್ನು ಪರಿಶೀಲಿಸಿದ್ದಾರೆ.

ನಾಲ್ವರನ್ನು ಕೊಲೆ ಮಾಡಿದ ವ್ಯಕ್ತಿ ಯಾರು? ಯಾಕಾಗಿ ಈ ರೀತಿ ಕೊಲೆ ಮಾಡಿದ್ದಾನೆ ಎನ್ನುವುದು ಇನ್ನೂ ನಿಗೂಢವಾಗಿದೆ. ಹೀಗಾಗಿ ಪೊಲೀಸರು ಕೊಲೆಗಾರ ಯಾರು ಯಾಕಾಗಿ ಕೊಲೆ ಮಾಡಿದ ಎನ್ನುವ ನಿಟ್ಟಿನಲ್ಲಿ ತನಿಖೆ ಮುಂದುವರಿದಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications