ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಲ್ಲಂಗಡಿಯನ್ನು ನೇರ ಗ್ರಾಹಕರಿಗೆ ಮಾರಿದ ಉಡುಪಿ ಕೃಷಿಕ

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಏಪ್ರಿಲ್ 04: ಕೊರೊನಾದಿಂದ ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ಇಲ್ಲದೇ ಕೃಷಿಕರು ಕಂಗೆಟ್ಟಿದ್ದಾರೆ. ಆದರೆ ಇಲ್ಲೊಬ್ಬರು ಕೃಷಿ ಉತ್ಪನ್ನವನ್ನು ನೇರವಾಗಿ ಗ್ರಾಹಕರಿಗೆ ನೀಡುವ ಮೂಲಕ ಮಾದರಿಯಾಗಿದ್ದಾರೆ.

ರೈತ ತಾನು ಬೆಳೆದ ಫಸಲನ್ನು ಮಾರುಕಟ್ಟೆಗೆ ಸಾಗಿಸಲಾಗದೆ ನಷ್ಟದಿಂದ ಕಂಗಾಲಾಗಿರುವ ಪ್ರಕರಣಗಳು ರಾಜ್ಯದಲ್ಲಿ ನಡೆಯುತ್ತಿವೆ. ಕೊರೊನಾ ವೈರಸ್ ನಿಂದ ರೋಗ ಹರಡುವಿಕೆಯನ್ನು ತಡೆಗಟ್ಟಲು ದೇಶದಲ್ಲಿ ಲಾಕ್ ಡೌನ್ ಹೇರಲಾಗಿದೆ. ಆದ್ದರಿಂದ ಕೃಷಿ ಉತ್ಪನ್ನಗಳನ್ನು ಸಾಗಿಸಲು ಅನನುಕೂಲವಾಗಿದೆ. ಅಲ್ಲದೆ, ಸರಿಯಾದ ಮಾರುಕಟ್ಟೆ ಸಿಗುತ್ತಿಲ್ಲ.

 ಹೊಲದಲ್ಲೇ ಕೊಳೆಯುತ್ತಿದೆ ಕಲ್ಲಂಗಡಿ; ಚಾಮರಾಜನಗರ ರೈತರ ಗೋಳು ಹೊಲದಲ್ಲೇ ಕೊಳೆಯುತ್ತಿದೆ ಕಲ್ಲಂಗಡಿ; ಚಾಮರಾಜನಗರ ರೈತರ ಗೋಳು

ಆದರೆ ಉಡುಪಿ ಜಿಲ್ಲೆಯ ಹಿರಿಯಡಕದ ಸುರೇಶ್ ನಾಯಕ್ 12 ಎಕರೆ ಜಾಗದಲ್ಲಿ ಕಲ್ಲಂಗಡಿ ಹಣ್ಣು ಬೆಳೆದಿದ್ದು, ಕಟಾವಿಗೆ ಬಂದಿರುವ ಅವನ್ನು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದಾರೆ. ಅವರ ಮಿತ್ರರೊಬ್ಬರು ವಾಟ್ಸಪ್ ಗ್ರೂಪ್ ಗಳ ಮೂಲಕ ಮಾಹಿತಿಯನ್ನು ಜನರಿಗೆ ನೀಡಿದ್ದರಿಂದ ಇದೀಗ ಕಿಂಟಲ್ ಗಟ್ಟಲೆ ಕಲ್ಲಂಗಡಿ ಹಣ್ಣುಗಳು ಸುರೇಶ್ ನಾಯಕರ ಗದ್ದೆಯಲ್ಲಿಯೇ ನೇರವಾಗಿ ಮಾರಾಟವಾಗುತ್ತಿವೆ.

Farmer Sell Watermelon Directly To Consumers In Udupi

ಗದ್ದೆಯಲ್ಲಿ ಕಿಲೋ ಒಂದಕ್ಕೆ ಹತ್ತು ರೂಪಾಯಿಯಂತೆ ದರ ನಿಗದಿಪಡಿಸಿದ್ದು, ಗ್ರಾಹಕರಿಗೆ ಕಡಿಮೆ ದರದಲ್ಲಿ ಕಲ್ಲಂಗಡಿ ಹಣ್ಣು ಸಿಗುತ್ತಿದೆ. ಅಲ್ಲದೆ ಸರಿಯಾದ ಮಾರುಕಟ್ಟೆ ಇಲ್ಲದೇ ಕಂಗೆಟ್ಟ ರೈತರಿಗೆ ಇದು ಉತ್ತಮ ಆಲೋಚನೆಯೂ ಆಗಿದೆ.

English summary
A hiriyadka farmer suresh naik sell watermelon directly in his field to consumers in udupi,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X