ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾರ್ಕಳ; ಊರಿಗೆ ಬಂದಿದ್ದ ಮಗ ತಂದೆಯಿಂದ ಕೊಲೆಯಾದ

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಡಿಸೆಂಬರ್ 11: ಈಚೆಗಷ್ಟೆ ಊರಿಗೆ ಬಂದಿದ್ದ ಮಗನನ್ನು ತಂದೆಯೇ ಕೊಲೆ ಮಾಡಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ. ಕಸಬಾ ಗ್ರಾಮದ ರಾಮಸಮುದ್ರ ಬಳಿಯ ಮಂಗಲಪಾದೆಯಲ್ಲಿ ಈ ಘಟನೆ ನಡೆದಿದೆ.

ವಿವಿಯನ್‌ ಡಿ ಸೋಜಾ (24) ಮೃತಪಟ್ಟ ಯುವಕ. ಈತನ ತಂದೆ ವಿಕ್ಟರ್‌ ಡಿ ಸೋಜಾ ಕೊಲೆಗೈದ ಆರೋಪಿ. ವಿವಿಯನ್‌ ಈ ಹಿಂದೆ ಮುಂಬೈನಲ್ಲಿ ಉದ್ಯೋಗದಲ್ಲಿದ್ದು, ಇತ್ತೀಚೆಗಷ್ಟೆ ಊರಿಗೆ ಬಂದಿದ್ದ.

ಮೈಸೂರಿನಲ್ಲಿ ಕುಡಿದ ಮತ್ತಿನಲ್ಲಿ ಅಣ್ಣನನ್ನೇ ಕೊಲೆ ಮಾಡಿದ ತಮ್ಮಮೈಸೂರಿನಲ್ಲಿ ಕುಡಿದ ಮತ್ತಿನಲ್ಲಿ ಅಣ್ಣನನ್ನೇ ಕೊಲೆ ಮಾಡಿದ ತಮ್ಮ

ತಂದೆ ಮಗ ಒಟ್ಟಿಗೇ ಕೂತು ಕುಡಿಯುವ ಅಭ್ಯಾಸ ಹೊಂದಿದ್ದರು. ಕುಡಿದಾಗ ತಂದೆ ಮಗನ ಮಧ್ಯೆ ಆಗಾಗ ಜಗಳವೂ ನಡೆಯುತ್ತಿತ್ತು. ನಿನ್ನೆ ರಾತ್ರಿ ಕೂಡ ತಂದೆ ಮಗನ ನಡುವೆ ಜಗಳ ನಡೆದಿದೆ. ಕುಡಿದ ಮತ್ತಿನಲ್ಲಿದ್ದ ತಂದೆ ಮಗನ ತೊಡೆಗೆ ಚಾಕುವಿನಿಂದ ಇರಿದಿದ್ದಾನೆ. ಇರಿತಕ್ಕೊಳಗಾದ ವಿವಿಯನ್ ಡಿಸೋಜಾ ತೀವ್ರ ಅಸ್ವಸ್ಥಗೊಂಡಿದ್ದು, ಸರಕಾರಿ ಆಸ್ಪತ್ರೆಗೆ ಆತನನ್ನು ದಾಖಲಿಸಲಾಯಿತು.

Father Killed His Son While Drunk In Karkala

ಆದರೆ ತೀವ್ರ ರಕ್ತಸ್ರಾವಕ್ಕೊಳಗಾಗಿ ವಿವಿಯನ್ ಸಾವನ್ನಪ್ಪಿದ್ದಾನೆ. ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಕ್ಟರ್ ಡಿಸೋಜಾನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

English summary
A father killed his son while drunk. The incident took place at Mangalapade near Ramasamudra in karkala,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X