ಉಡುಪಿ ಚರ್ಚ್ ನಲ್ಲಿ ಸಾಮೂಹಿಕ ಪ್ರಾರ್ಥನೆ; 6 ಮಂದಿ ಮೇಲೆ FIR
ಉಡುಪಿ, ಏಪ್ರಿಲ್ 10: ಉಡುಪಿ ಜಿಲ್ಲೆಯ ಚರ್ಚ್ ವೊಂದರಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಿದ ಆರೋಪದ ಮೇಲೆ ಆರು ಮಂದಿ ಮೇಲೆ ಎಫ್ ಐ ಆರ್ ದಾಖಲಿಸಲಾಗಿದೆ. ಧರ್ಮಗುರು ಸೇರಿದಂತೆ ಆರು ಮಂದಿ ಮೇಲೆ ಎಫ್ ಐಆರ್ ದಾಖಲಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೈಂದೂರು ತಾಲೂಕು ನಾಡ ಗ್ರಾಮದಲ್ಲಿರುವ ಪಡುಕೋಣೆ ಸಂತ ಅಂತೋನಿ ಚರ್ಚ್ ನಲ್ಲಿ ಈ ಘಟನೆ ನಡೆದಿದೆ. ಫಾದರ್ ಫ್ರೆಡ್ ಮಸ್ಕರೇನಸ್ ಹಾಗೂ ಆರು ಮಂದಿ ನಿನ್ನೆ ರಾತ್ರಿ ಇಲ್ಲಿ ಗುಡ್ ಫ್ರೈಡೇ ಪ್ರಯುಕ್ತ ಪ್ರಾರ್ಥನೆಗೆ ಸೇರಿದ್ದರು.
ಲಾಕ್ ಡೌನ್ ಉಲ್ಲಂಘಿಸಿ ಸಾಮೂಹಿಕ ಪ್ರಾರ್ಥನೆ; ಒಟ್ಟು 100 ಮಂದಿ ವಶಕ್ಕೆ
ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಆದೇಶದ ಹೊರತಾಗಿಯೂ ಚರ್ಚ್ ನಲ್ಲಿ ಇವರು ಸೇರಿದ್ದರು. ಜಿಲ್ಲಾಧಿಕಾರಿಯ ಆದೇಶವನ್ನು ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಇವರ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ಜಿಲ್ಲೆಯ ಚರ್ಚ್ ಗಳಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸದಂತೆ ಬಿಷಪ್ ಕೂಡಾ ಸೂಚಿನೆ ನೀಡಿದ್ದರು. ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.