Karkala: ಪರಶುರಾಮ ಥೀಂ ಪಾರ್ಕ್ ಸಮೀಪದಲ್ಲಿ ಅಗ್ನಿ ಅವಘಡ: 30 ಎಕರೆ ಪ್ರದೇಶ ಬೆಂಕಿಗಾಹುತಿ
ಉಡುಪಿ, ಮೇ 06: ಉಡುಪಿ ಜಿಲ್ಲೆಯ ಕಾರ್ಕಳದ ವಿವಾದಿತ ಪರಶುರಾಮ ಥೀಂ ಪಾರ್ಕ್ನ ಇರುವ ಬೈಲೂರು ಸಮೀಪದ ಉಮಿಕ್ಕಳ ಗುಡ್ಡದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಒಂದಲ್ಲ..ಎರಡಲ್ಲ..ಬರೋಬ್ಬರಿ 30 ಎಕರೆ ಪ್ರದೇಶ ಬೆಂಕಿಗಾಹುತಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಉಮಿಕ್ಕಳ ಗುಡ್ಡದ ತಳದಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ ಗಿಡ ಮರ ಬಳ್ಳಿಗೆ ತಗುಲಿ, ಬಿರು ಬಿಸಿಲಿನ ನಡುವೆ ಬೀಸುತ್ತಿದ್ದ ಗಾಳಿಗೆ ತೀವ್ರಗತಿಯಲ್ಲಿ ವ್ಯಾಪಿಸಿತ್ತು. ಇದನ್ನು ಸ್ಥಳೀಯರು ಗಮನಿಸಿದ್ದು, ಕೂಡಲೇ ಸ್ಥಳೀಯ ಅಗ್ನಿಶಾಮಕ ದಳ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ಸ್ಥಳೀಯರ ಮಾಹಿತಿಯಂತೆ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದವರು ಧಾವಿಸಿ ಬಂದು ಬೆಂಕಿ ನಂದಿಸುವ ಕಾರ್ಯಕ್ಕೆ ಮುಂದಾದರು. ಆದರೆ ಬೆಂಕಿ ಹಬ್ಬಿಕೊಂಡ ಸ್ಥಳ ಬೆಟ್ಟದ ಕೆಳಗಿನ ಪ್ರದೇಶವಾಗಿದ್ದು, ಅಲ್ಲಿಗೆ ತೆರಳಲು ಸಾಧ್ಯವಾಗಲಿಲ್ಲ. ಇನ್ನೊಂದೆಡೆ ಬೃಹತ್ ಪ್ರಮಾಣದ ಮುಳ್ಳು ಅಡ್ಡಿಯಾಯಿತು.
ಬಳಿಕ ಅಗ್ನಿಶಾಮಕ ದಳದ ಸಿಬಂದಿ, ಸ್ಥಳೀಯರು ನೀರನ್ನು ಹೊತ್ತೊಯ್ದು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಈ ವೇಳೆ ಅರಣ್ಯ ಇಲಾಖೆಯ ನೆರವನ್ನು ಪಡೆದುಕೊಳ್ಳಲಾಯಿತು.

ಘಟನಾ ಸ್ಥಳದಲ್ಲಿ ಸುಮಾರು 30 ಎಕರೆ ಪ್ರದೇಶ ಬೆಂಕಿಗೆ ಆಹುತಿಯಾಗಿದ್ದು, ಕೊನೆಗೆ ನಿಯಂತ್ರಣಕ್ಕೆ ಬಂದಿದೆ. ಇಲ್ಲಿರುವ ಪರಶುರಾಮ ಥೀಂ ಪಾರ್ಕ್ನ ವಿಗ್ರಹ ಕುರಿತು ವಿವಾದ ಇರುವ ಹೊತ್ತಲ್ಲೇ ಉಮಿಕ್ಕಳ ಬೆಟ್ಟದಲ್ಲಿ ದೊಡ್ಡ ಮಟ್ಟದ ಬೆಂಕಿ ಅವಘಡ ಸಂಭವಿಸಿರುವುದು ಸಾಕಷ್ಟು ಚರ್ಚೆಗಳಿಗೆ ಎಡೆಮಾಡಿ ಕೊಟ್ಟಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications