ಉಡುಪಿಯಲ್ಲಿ ರಾಜ್ಯದ ಪ್ರಪ್ರಥಮ ಒಳಾಂಗಣ ಟೆನಿಸ್ ಕೋರ್ಟ್
3.5 ಕೋಟಿ ವೆಚ್ಚದಲ್ಲಿ ಉಡುಪಿ ಜಿಲ್ಲೆಯ ಅಜ್ಜರಕಾಡಿನಲ್ಲಿ ರಾಜ್ಯದ ಪ್ರಪ್ರಥಮ ಅಂತಾರಾಷ್ಟ್ರೀಯ ಗುಣಮಟ್ಟದ ಒಳಾಂಗಣ ಟೆನ್ನಿಸ್ ಕೋರ್ಟ್ ನಿರ್ಮಾಣವಾಗುತ್ತಿದೆ.
ಉಡುಪಿ, ಮಾರ್ಚ್ 19 : ಉಡುಪಿ ಜಿಲ್ಲೆಯ ಅಜ್ಜರಕಾಡಿನಲ್ಲಿ ರಾಜ್ಯದ ಪ್ರಪ್ರಥಮ ಅಂತಾರಾಷ್ಟ್ರೀಯ ಗುಣಮಟ್ಟದ ಒಳಾಂಗಣ ಟೆನ್ನಿಸ್ ಕೋರ್ಟ್ ನಿರ್ಮಾಣವಾಗುತ್ತಿದೆ.
ಅಜ್ಜರಕಾಡಿನಲ್ಲಿರುವ ಈಜುಕೊಳದ ಎದುರಿನಲ್ಲಿರುವ 1.5 ಎಕರೆ ಜಾಗದಲ್ಲಿ ಸುಮಾರು 3.5 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಕ್ರೀಡಾಂಗಣ ನಿರ್ಮಾಣವಾಗುತ್ತಿದೆ. ಏಕಕಲಾಕ್ಕೆ ಸುಮಾರು 500 ಮಂದಿ ಪಂದ್ಯ ವೀಕ್ಷಿಸಬಹುದಾದ ಸುಸಜ್ಜಿತ ಗ್ಯಾರಿಯೂ ಇದರಲ್ಲಿದಲಿದೆ. [ಉಡುಪಿ: ಅಪಾಯದಂಚಿನಲ್ಲಿ ಅಂಗನವಾಡಿ ]

ಈ ಕುರಿತು ಮಾತನಾಡಿದ ಉಡುಪಿ ಜಿಲ್ಲಾ ಯುವಶಕ್ತಿ ಮತ್ತು ಕ್ರೀಡಾ ಅಧಿಕಾರಿ ರೋಶನ್ ಶೆಟ್ಟಿ, "ಟೆನಿಸ್ ಕೋರ್ಟ್ ನಿರ್ಮಾಣಕ್ಕೆ ಕ್ರೀಡಾ ಇಲಾಖೆಯಿಂದ 2.5 ಕೋಟಿ ರೂಪಾಯಿ ಬಿಡುಗಡೆಗೊಳ್ಳಲಿದೆ. ಸಂಸದ ಆಸ್ಕರ್ ಫೆರ್ನಾಂಡಿಸ್ , ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಒಂದು ಕೋಟಿ ರೂಪಾಯಿ ನೀಡುವುದಾಗಿ ಭರವಸೆ ನೀಡಿದ್ದಾರೆ. ಈ ಮೂಲಕ ಉಡುಪಿಗೆ ಸಿಂಥೆಟಿಕ್ ಒಳಾಂಗಣ ಟೆನ್ನಿಸ್ ಕೋರ್ಟ್ ಲಭ್ಯವಾಗಲಿದೆ," ಎಂದು ಹೇಳಿದ್ದಾರೆ.
ಹಲವು ಸ್ಥಳಗಳಲ್ಲಿ ಸಿಂಥೆಟಿಕ್ ಟೆನ್ನಿಸ್ ಕೋರ್ಟುಗಳಿದ್ದರೂ ಅವೆಲ್ಲವೂ ಹೊರಾಂಗಣ ಟೆನ್ನಿಸ್ ಕೋರ್ಟುಗಳಾಗಿವೆ. ಹೊರಾಂಗಣ ಕೋರ್ಟಿನಲ್ಲಿ ಮಳೆಗಾಲದಲ್ಲಿ ಟೆನ್ನಿಸ್ ಪ್ರಾಕ್ಟಿಸ್ ಮಾಡಲಾಗುವುದಿಲ್ಲ. ಹೀಗಾಗಿ ಉಡುಪಿಯ ಟೆನಿಸ್ ಕೋರ್ಟ್ ವಿಶೇಷವೆನಿಸಿದೆ.
ಕಾಮಗಾರಿ ಪೂರ್ಣ
ಇಲಾಖೆಯು ಈಗಾಗಲೇ ಒಂದು ಕೋಟಿ ರೂ ಬಿಡುಗಡೆಗೊಳಿಸಿದ್ದು, ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಉಳಿದ 1.5 ಕೋಟಿ ರೂ ಬಿಡುಗಡೆ ಹಂತದಲ್ಲಿದೆ. ನಿರ್ಮಿತಿ ಕೇಂದ್ರ ಈ ಕ್ರೀಡಾಂಗಣದ ಕಾಮಗಾರಿ ನಡೆಸುತ್ತಿದೆ. ಮೇ ಅಂತ್ಯಕ್ಕೆ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ.
ಕ್ರೀಡಾಂಗಣದಲ್ಲಿ ಚೇಜಿಂಗ್ ರೂಮ್ ಗಳು, ಕೋಚ್ ರೂಮ್ ಗಳು ಮತ್ತು ಶೌಚಾಲಯ ಸೌಲಭ್ಯಗಳೂ ಇರಲಿವೆ. [ಉಡುಪಿ: ಚಿನ್ನದ ವ್ಯಾಪಾರಿಯ ದರೋಡೆ]
ಕುಂದಾಪುರ, ಬ್ರಹ್ಮಾವರ, ಎಸ್ಎಂಎಸ್ ಕಾಲೇಜು ಮತ್ತು ಅಂಬಲಪಾಡಿಯಲ್ಲಿ ಶಾಮಿಲಿ ಸಭಾಗೃಹದ ಹತ್ತಿರ ಸುಮಾರು 80 ಆಟಗಾರರು ಟೆನ್ನಿಸ್ ತರಬೇತಿ ಪಡೆಯುತ್ತಿದ್ದಾರೆ. 25 ವಿದ್ಯಾರ್ಥಿಗಳು ಪ್ರತಿನಿತ್ಯ ಪ್ರಾಕ್ಟಿಸ್ ನಡೆಸುತ್ತಿದ್ದಾರೆ. ಈ ಕೋರ್ಟ್ ಉದ್ಘಾಟನೆಗೊಂಡರೆ ರಾಜ್ಯ ಮತ್ತು ರಾಷ್ಟ್ರೀಯ ಟೆನ್ನಿಸ್ ಆಟಗಾರರಿಗೆ ಅಭ್ಯಾಸಕ್ಕೆ ಸೂಕ್ತ ಕ್ರೀಡಾಂಗಣ ಸಿಕ್ಕಂತಾಗುತ್ತದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications