ಉಡುಪಿಯಲ್ಲಿ ಪ್ರಥಮ ಯಕ್ಷಗಾನ ಸಮ್ಮೇಳನ ಉದ್ಘಾಟನೆ
ಕಲೆಯ ಮೂಲ ಉಳಿಸುವ ಮೂಲಕ ಶಾಲೆ ಕಾಲೇಜುಗಳಲ್ಲಿ ಯಕ್ಷಗಾನದ ಮಹತ್ವ ತಿಳಿಸಿ, ಪಠ್ಯವಾಗಿ ಕಲಿಸುವ ಯತ್ನವಾಗಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.
ಉಡುಪಿ, ಫೆಬ್ರವರಿ 11: ದೇವಸ್ಥಾನದ ಪಟ್ಟಣವಾದ ಉಡುಪಿಯು ಶನಿವಾರ ಎಂಜಿಎಂ ಕಾಲೇಜು ಮೈದಾನದಲ್ಲಿ ರಾಜ್ಯ ಮಟ್ಟದ ಪ್ರಥಮ ಯಕ್ಷಗಾನ ಸಮ್ಮೇಳನವನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಉದ್ಘಾಟಿಸಿದರು.
ಇದಕ್ಕೂ ಮುನ್ನ ಸಮ್ಮೇಳನಾಧ್ಯಕ್ಷರಾದ ಡಾ.ಎಂ. ಪ್ರಭಾಕರ ಜೋಶಿ ಅವರನ್ನು ಕಡಿಯಾಳಿ ದೇವಸ್ಥಾನದ ಮುಂಭಾಗ ಮೆರವಣಿಗೆ ಮೂಲಕ ವೇದಿಕೆಗೆ ಕರೆತರಲಾಯಿತು.
ಈ ಮೆರವಣಿಗೆಯೊಂದಿಗೆ ಸಾಂಸ್ಕೃತಿಕ ಕಲಾ ಪ್ರಕಾರಗಳು ಸಾಗಿದವು. ಇಲ್ಲಿ ಪೂರ್ಣಕುಂಭ ಹೊತ್ತ ಮಹಿಳೆಯರು, ಸಹಸ್ರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಇದರೊಂದಿಗೆ ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, ಶಾಸಕ ರಘುಪತಿ ಭಟ್, ಮೈಸೂರು ಎಲೆಕ್ಟಕ್ರಿಕ್ ಇಂಡಸ್ಟ್ರಿಸ್ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ, ಯಕ್ಷಗಾನ ಸಮ್ಮೇಳನದ ಕಾರ್ಯಾಧ್ಯಕ್ಷ ಡಾ.ಜಿಎಲ್. ಹೆಗಡೆ, ಜಿಲ್ಲಾಧಿಕಾರಿ ಕೂರ್ಮಾರಾವ್, ಜಿಲ್ಲಾ ಪಂಚಾಯಿತಿ ಸಿಇಒ ಎಚ್ ಪ್ರಸನ್ನ ಇದ್ದರು.

ಸಮ್ಮೇಳನದಲ್ಲಿ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಕಲೆಯ ಮೂಲ ಉಳಿಸುವ ಮೂಲಕ ಶಾಲೆ ಕಾಲೇಜುಗಳಲ್ಲಿ ಯಕ್ಷಗಾನದ ಮಹತ್ವ ತಿಳಿಸಿ, ಪಠ್ಯವಾಗಿ ಕಲಿಸುವ ಯತ್ನವಾಗಬೇಕು. ಜೊತೆಗೆ ಪ್ರಧಾನಿ ಮೋದಿ ಪ್ರತಿಪಾದಿಸಿದ ವೋಕಲ್ ಫಾರ್ ಲೋಕಲ್ ಯೋಜನೆಯಡಿ ಯಕ್ಷಗಾನ ಉಳಿಸಬೇಕು. ಯಕ್ಷಗಾನ ಕಲೆ ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರಿಗಿದೆ. ದೇವಳ, ಭಾರತೀಯ ಸಂಸ್ಕೃತಿ, ವೇದ ಪುರಾಣ, ನಾಟ್ಯ ಸಂಗೀತದ ಅವಿನಾಭಾವ ಸಂಬಂಧ ಯಕ್ಷಗಾನಕ್ಕಿದೆ. ಸಾಮಾಜಿಕ ನಾಟಕಕ್ಕೆ ಯಕ್ಷಗಾನ ಬಳಸಬೇಡಿ. ಯಕ್ಷಗಾನದ ತಳಪಾಯ ಅಲುಗಾಡಿಸಬೇಡಿ. ಗಂಡು ಕಲೆಯನ್ನು ಹೆಣ್ಣು ಮಕ್ಕಳು ಕಲಿಯುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.
ಸಮ್ಮೇಳನದಲ್ಲಿ ಯಕ್ಷಗಾನ ಶಿಕ್ಷಣದ ಸವಾಲುಗಳು, ಯಕ್ಷಗಾನದಲ್ಲಿ ಕನ್ನಡದ ಅಸ್ಮಿತೆ, ಯಕ್ಷಗಾನ ಮತ್ತು ರಾಷ್ಟ್ರೀಯ ಚಿಂತನೆ, ಮೂಡಲಪಾಯದ ಸ್ವರೂಪ ಚರ್ಚೆಗಳು, ಮಹಿಳಾ ಯಕ್ಷಗಾನದ ಚರ್ಚೆ ಹಾಗೂ ಯಕ್ಷಗಾನ ಪ್ರಯೋಗ ಎಂಬ ಆರು ಪ್ರದರ್ಶನಗಳು ನಡೆಯಲಿವೆ. ಒಟ್ಟು 23 ತಂಡಗಳು ತೆಂಕುತಿಟ್ಟು ಬಡಗುತಿಟ್ಟುಮ ಮೂಡಲಯಪ ಮತ್ತು ಘಟ್ಟದ ಕೋರೆ ಪ್ರಸ್ತುತ ಪಡಿಸಲಿವೆ. ರಾತ್ರಿಯಿಡೀ ಯಕ್ಷಗಾನ ನಡೆಯಲಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications