ಮಟ್ಟು ಕಡಲ ತೀರದಲ್ಲಿ ಮೀನಿನ ಬುಗ್ಗೆ ಕಂಡು ಚಕಿತಗೊಂಡ ಮೀನುಗಾರರು
ಉಡುಪಿ, ನವೆಂಬರ್. 17: ಇತ್ತೀಚಿನ ದಿನಗಳಲ್ಲಿ ಕರಾವಳಿಯಲ್ಲಿ ಮೀನಿನ ಸುಗ್ಗಿ ಕಡಲ ಮಕ್ಕಳ ಮೊಗದಲ್ಲಿ ಮಂದಹಾಸ ಮೂಡಿಸಿದೆ. 3 ದಿನಗಳ ಹಿಂದೆ ಅರಬ್ಬೀ ಸಮುದ್ರದಲ್ಲಿ ಸಿಗುವ ರುಚಿಕರ ಭೂತಾಯಿ ಮೀನುಗಳು ಕುಂದಾಪುರದ ಕೋಡಿ ತೀರಕ್ಕೆ ಚಿಮ್ಮಿ ಬಂದಿದ್ದವು.
ಕೋಡಿಯ ಮೀನುಗಾರರು ಅರಬ್ಬೀ ಸಮುದ್ರದ ದಡದಲ್ಲಿ ಕೈರಂಪಣಿ ಬಲೆಗೆ ರಾಶಿ ರಾಶಿ ಮೀನುಗಳು ಬಿದ್ದಿದ್ದವು. ಈಗ ಉಡುಪಿಯ ಸರದಿ. ಕಳೆದ ಒಂದು ತಿಂಗಳಲ್ಲಿ ಅರಬ್ಬೀ ಸಮುದ್ರದ ತಟದಲ್ಲೇ ರಾಶಿ ರಾಶಿ ಮೀನುಗಳು ಬಲೆಗೆ ಸಿಲುಕತೊಡಗಿವೆ.
ಕಾಪು ತಾಲೂಕಿನ ಮಟ್ಟು ಕಡಲ ಕಿನಾರೆಯಲ್ಲಿ ಲೆಕ್ಕವಿಲ್ಲದಷ್ಟು ಭೂತಾಯಿ ಮೀನುಗಳು ಬಲೆಗೆ ಸಿಕ್ಕಿ ಬಿದ್ದಿದ್ದು, ಬಲೆ ಬೀಸಿದ್ದ ಮೀನುಗಾರರಿಗೆ ಬಂಪರ್ ಮೀನುಗಳೇ ಸಿಕ್ಕಿವೆ.

ಸಮುದ್ರ ತೀರದಲ್ಲಿ ನಾಡದೋಣಿ ಮೀನುಗಾರರ ಎರಡು ದೋಣಿಗಳು ಜೋಡು ಬಲೆ ಕಟ್ಟಿ ಮೀನುಗಾರಿಕೆ ಮಾಡುತ್ತಿದ್ದ ಸಂದರ್ಭದಲ್ಲಿ ಸಂಚಾರ ಹೊರಟ ಮೀನಿನ ಬುಗ್ಗೆ ನಾಡದೋಣಿಗಳ ಬಲೆಗೆ ಸಿಲುಕಿದೆ. ಇಡೀ ದೋಣಿಯ ಸುತ್ತಲೂ ರಾಶಿ ರಾಶಿ ಮೀನು ಸೆರೆ ಸಿಕ್ಕಿದ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕಣ್ಣು ಹಾಯಿಸಿದಲ್ಲೆಲ್ಲಾ ಬಲೆಯ ವ್ಯಾಪ್ತಿಯಿಂದ ಹಾರುವ ಮೀನು ಕಾಣುತ್ತಿದ್ದು, ವೀಡಿಯೋ ಬಹಳ ಕುತೂಹಲ ಹುಟ್ಟಿಸುತ್ತದೆ. ಸಮುದ್ರದ ಮಧ್ಯೆಯಲ್ಲಿ ಮೀನಿನ ಬುಗ್ಗೆ ಕಾಣಿಸೋದು ಸಾಮಾನ್ಯ, ಆದ್ರೆ ಕಡಲ ಬದಿಯಲ್ಲಿ ಇಷ್ಟೊಂದು ಗಾತ್ರದಲ್ಲಿ ಮೀನು ಸಿಕ್ಕಿದ್ದು ಮೀನುಗಾರರಿಗೆ ಆಶ್ಚರ್ಯ ತಂದಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications